ಸರಕು ವಾಹನಗಳಲ್ಲಿ ಜನರ ಪ್ರಯಾಣ; ಸಾಮಾಜಿಕ ಅಂತರ ಮಾಯ
Team Udayavani, Jun 14, 2020, 8:03 AM IST
ದೇವದುರ್ಗ: ಕೋವಿಡ್ ಲಾಕ್ಡೌನ್ ಸಡಿಲಿಕೆ ಆದ ನಂತರ ಪಟ್ಟಣದಲ್ಲಿ ಬೇಕಾಬಿಟ್ಟಿ ಜನ ಸಂಚರಿಸುತ್ತಿದ್ದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ನಿಯಮ ಪಾಲಿಸುತ್ತಿಲ್ಲ. ಇನ್ನು ಸರಕು ಸಾಗಣೆ ವಾಹನಗಳಲ್ಲಿ ಕುರಿಗಳಂತೆ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸಲಾಗುತ್ತಿದೆ.
ತಾಲೂಕಿನಲ್ಲಿ 300ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಸೋಂಕು ತಡೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು, ಸಾಮಾಜಿಕ ಅಂತರ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಆದರೆ ಶನಿವಾರ ಪಟ್ಟಣದಲ್ಲಿ ನಡೆದ ಸಂತೆಯಲ್ಲಿ ಸಾಮಾಜಿಕ ಅಂತರವೇ ಕಂಡುಬರಲಿಲ್ಲ. ಗುಂಪುಗುಂಪಾಗಿ ಜನ ಸೇರಿ ತರಕಾರಿ ಖರೀದಿಸುತ್ತಿರುವುದು ಕಂಡುಬಂತು. ಇನ್ನು ಬಹುತೇಕರು ಮಾಸ್ಕ್ ಧರಿಸದೇ ಮಾರುಕಟ್ಟೆಗೆ ಆಗಮಿಸಿದ್ದರು. ಇನ್ನು ಗ್ರಾಮೀಣ ಭಾಗದಿಂದ ಸಂತೆಗೆ ಬರುವವರು ಸರಕು ಸಾಗಣೆ, ಟಂಟಂ ರಿಕ್ಷಾ, ಖಾಸಗಿ ವಾಹನಗಳನ್ನೇ ಅವಲಂಬಿಸಿದ್ದಾರೆ. ಈ ವಾಹನಗಳಲ್ಲಿ ಕುರಿಗಳಂತೆ ಜನರನ್ನು ಹತ್ತಿಸಿಕೊಂಡು ಬರಲಾಗಿತ್ತು. ಇಲ್ಲೂ ಸಾಮಾಜಿಕ ಅಂತರ ಪಾಲನೆ ಕಂಡುಬರಲಿಲ್ಲ. ಅಂಗಡಿ ಮುಂಗಟ್ಟು, ಖಾಸಗಿ ವಾಹನ ಸೇರಿ ಎಲ್ಲೆಡೆ ಸಾಮಾಜಿಕ ಅಂತರ ಪಾಲನೆ, ಕಡ್ಡಾಯವಾಗಿ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ