ಹತ್ತಿಗೆ ಗುಲಾಬಿ ಕಾಯಿಕೊರಕ ಕೀಟ ಬಾಧೆ: ನಿರ್ವಹಣೆಗೆ ಸಲಹೆ


Team Udayavani, Aug 21, 2017, 3:15 PM IST

cotton.jpg

ರಾಯಚೂರು: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿಟಿ ಹತ್ತಿ ಬೆಳೆಯನ್ನು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು,
ಗುಲಾಬಿ ಕಾಯಿಕೊರಕ ಕೀಟದ ಬಾಧೆ ಕಂಡು ಬರುವ ಸಾದ್ಯತೆ ಇದೆ. ಹೀಗಾಗಿ ರೈತರು ಸಮಗ್ರ ಕೀಟ ನಿರ್ವಹಣೆ
ಪದ್ಧತಿ ಅನುಸರಿಸಲು ಕೃಷಿ ಇಲಾಖೆ ಸಲಹೆ ನೀಡಿದೆ. ಕೀಟದ ಸಮೀಕ್ಷೆಗಾಗಿ ಪ್ರತಿ ಹೆಕ್ಟೇರ್‌ಗೆ ಐದರಂತೆ ಲಿಂಗಾರ್ಷಕ ಬಲೆ ನೆಡಬೇಕು. ಇಪ್ಪತ್ತು ದಿನಕ್ಕೊಮ್ಮೆ ಲೂರ್‌ಗಳನ್ನು ಬದಲಿಸಬೇಕು. ಬಿದ್ದಿರುವ ಪತಂಗ ಲೆಕ್ಕ ಮಾಡಬೇಕು. ಇಡೀ ಕ್ಷೇತ್ರದಲ್ಲಿ 60 ಹೂಗಳನ್ನು ಪರಿಶೀಲಿಸಬೇಕು. ಇಲ್ಲವೇ ಅಲ್ಲಲ್ಲಿ ಸಂಗ್ರಹಿಸಿದ 20 ಬಲಿತ ಕಾಯಿಗಳನ್ನು ತೆರೆದು ಗುಲಾಬಿ ಕಾಯಿಕೊರಕದ ಬಾಧೆಯನ್ನು ಮತ್ತು ಮರಿಹುಳುಗಳನ್ನು ಲೆಕ್ಕ ಮಾಡುವ ಮೂಲಕ ರೋಗ ಬಾಧೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದು. ಮೂರು ದಿನ ಎಂಟು ಪತಂಗಗಳು ಮೋಹಕ ಬಲೆಗಳಲ್ಲಿ ಬಿದ್ದಿರುವುದು ಅಥವಾ 60 ಹೂ ಹಾನಿಯಾಗಿರುವುದು ಅಥವಾ 20 ಕಾಯಿಗಳಲ್ಲಿ ಎರಡು ಅಥವ ಎರಡಕ್ಕಿಂತ ಹೆಚ್ಚು ಮರಿಹುಳುಗಳು ಇದ್ದರೆ
ಆರ್ಥಿಕ ಹಾನಿ ಮಟ್ಟ ತಲುಪಿದೆ ಎಂದು ಗ್ರಹಿಸಬೇಕು. ಪ್ರತಿ ಹೆಕ್ಟೇರ್‌ಗೆ 30ರಂತೆ ಲಿಂಗಾರ್ಷಕ ಬಲೆಗಳನ್ನು
ಸಮನಾಂತರವಾಗಿ ಅಳವಡಿಸಬೇಕು. ಬಲೆಗೆ ಬಿದ್ದ ಪತಂಗಗಳನ್ನು ಸಾಯಿಸಲು ಡಿಡಿವಿಪಿ ಕೀಟನಾಶಕದಲ್ಲಿ ಅದ್ದಿದ ಅರಳೆ ಬಲೆಯಲ್ಲಿ ಇಡಬೇಕು. ಲಿಂಗಾರ್ಷಕ ಬಲೆಗಳು ಬೆಳೆ ಮಟ್ಟದಿಂದ 15 ಸೆಂಮೀ ಎತ್ತರದಲ್ಲಿರಬೇಕು. 2 ಮಿಲೀ ಪ್ರಾಫೆನೋಫಾಸ್‌ 50 ಇಸಿ ಅಥವಾ ಒಂದು ಗ್ರಾಂ ಥೈಯೋಡಿಕಾರ್ಬ್ 75 ಡಬ್ಲ್ಯೂಪಿ ಅಥವ 0.4 ಗ್ರಾಂ ಇಮಾಮೆಕ್ಟಿನ್‌ ಬೆಂಝೋಯೇಟ್‌ 5 ಇಸಿ ಪ್ರತಿ ಲೀಟರ್‌ ನೀರಿಗೆ ಹಾಕಿ 15 ದಿನದ ಅಂತರದಲ್ಲಿ ಸಿಂಪಡಿಸಬೇಕು. ಪದೇ ಪದೇ ಒಂದೇ ಕೀಟನಾಶಕ ಉಪಯೋಗಿಸಬಾರದು. ಪೈರಿಥ್ರಾಯಿಡ್‌ ಕೀಟನಾಶಕಗಳಾದ 0.5 ಮಿ.ಲೀ ಲ್ಯಾಮಡ್‌ ಸೈಹೆಲೊಥ್ರಿನ್‌ ಅಥವಾ 0.5 ಮಿಲೀ ಡೆಕಾಮೆತ್ರಿನ್‌ 2.8 ಇಸಿ ಅಥವಾ 0.5 ಮಿಲೀ ಸೈಪ ರ್ಮೆಥ್ರಿನ್‌ 10 ಇಸಿ ಪ್ರತಿ ಲೀಟರ್‌ ನೀರಿನಲ್ಲಿ ಬೆರೆಸಿ ಬಿತ್ತನೆಯಾದ 100 ದಿನಗಳ ನಂತರ ಸಿಂಪಡಿಸಬೇಕು. ಸಿಂಥಟಿಕ್‌ ಪೈರಿಥ್ರಾಯಿಡ್‌ ಕೀಟನಾಶಕಗಳನ್ನು ಕೇವಲ ಒಂದು ಅಥವಾ ಎರಡು ಸಲ ಮಾತ್ರ 15-20 ದಿನಗಳ ಅಂತರದಲ್ಲಿ ಸಿಂಪಡಿಸಬೇಕು. ಪೈರಿಥ್ರಾಯಿಡ್‌ ಗುಂಪಿಗೆ ಸೇರಿದ ಕೀಟನಾಶಕಗಳನ್ನು ಪದೇ ಪದೇ ಬಳಸುವುದರಿಂದ ಸಸ್ಯ ಹೇನು ಮತ್ತು ಬಿಳಿ ನೋಣದ ಸಂಖ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಬೇರೆ ಕೀಟನಾಶಕಗಳನ್ನು ಬಳಸುವುದರಿಂದ ಕೀಟದ ಬಾಧೆ ಕುಗ್ಗಿಸಬಹುದು. ಮಾಹಿಗಾಗಿ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಲು ಕೋರಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.