ಟ್ರಾಫಿಕ್‌ಗೆ “ಸಿಂಧನೂರು ಬೈಪಾಸ್‌’ ಪರಿಹಾರ

ರಸ್ತೆ ನಿರ್ಮಿಸಲು ಹೆದ್ದಾರಿ ಪ್ರಾಧಿಕಾರ ಉತ್ಸುಕ,ಭೂ ಸ್ವಾಧೀನಕ್ಕೆ 70 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ

Team Udayavani, Dec 18, 2020, 6:00 PM IST

ಟ್ರಾಫಿಕ್‌ಗೆ “ಸಿಂಧನೂರು ಬೈಪಾಸ್‌’ ಪರಿಹಾರ

ಸಿಂಧನೂರು: ನಗರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಹೆಚ್ಚುತ್ತಿರುವ ಟ್ರಾಪಿಕ್‌ ತಪ್ಪಿಸಲು ಬೈಪಾಸ್‌ ರಸ್ತೆ ನಿರ್ಮಾಣವೇ ಪರಿಹಾರವೆಂಬ ನಿಲುವಿಗೆ ಬಲ ಬಂದಿದ್ದು, ಸರಕಾರದ ಮಟ್ಟದಲ್ಲಿ ಈ ಬೇಡಿಕೆಗೆ ಮನ್ನಣೆ ದೊರಕಿದೆ.

ನಗರದ ಎಲ್ಲ ಮಾರ್ಗದಲ್ಲಿ ಮುಖ್ಯರಸ್ತೆ ದಾಟಲು ಅಲ್ಲಲ್ಲಿ ತಡೆಬೀಳುತ್ತಿರುವುದಕ್ಕೆ ಬೈಪಾಸ್‌ ನಿರ್ಮಾಣವೇ ಪರಿಹಾರವೆಂಬ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ. ಗಂಗಾವತಿ-ರಾಯಚೂರು, ಸಿಂಧನೂರು-ಕುಷ್ಟಗಿ ಮಾರ್ಗದ ಪ್ರಮುಖ ಹೆದ್ದಾರಿಗಳು ನಗರದ ಹೃದಯಭಾಗದಿಂದಲೇ ಹಾದುಹೋಗಿವೆ. ರಸ್ತೆ ವಿಸ್ತರಣೆಯಾಗಿದ್ದರೂ ವಾಹನಗಳ ದಟ್ಟಣೆ ಹೆಚ್ಚಿದೆ. ಟ್ರಾಫಿಕ್‌ ಪೊಲೀಸ್‌ ಠಾಣೆ ಸ್ಥಾಪನೆಯಾಗಿದ್ದರೂ ಮಹಾತ್ಮಗಾಂಧಿ  ವೃತ್ತವನ್ನು ದಾಟುವಷ್ಟರಲ್ಲೇ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಪ್ರತಿಭಟನೆ, ಧರಣಿ ವೇಳೆ ಸಂಚಾರತಡೆಗೂ ಮುಂದಾಗುವುದರಿಂದ ಮಹಾತ್ಮಗಾಂಧಿ  ವೃತ್ತದಲ್ಲಿ ಸುಗಮಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಬೈಪಾಸ್‌ನಿರ್ಮಾಣವಾದರೆ ದೂರದ ಊರಿನ ಪ್ರಯಾಣಿಕರ ಹಾದಿ ಸುಗಮವಾಗಲಿದೆ.

ಹೆದ್ದಾರಿ ಪ್ರಾಧಿಕಾರ ಉತ್ಸುಕ:

ಜೇವರ್ಗಿ-ಚಾಮರಾಜನಗರ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಂಧನೂರು ನಗರ ಹೊರಭಾಗದಲ್ಲಿ 12.5 ಕಿ.ಮೀ. ಉದ್ದದ ಬೈಪಾಸ್‌ ರಸ್ತ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ವಿಸ್ತೃತ ವರದಿ ಸಲ್ಲಿಸಿದೆ. ಈ ಮಾರ್ಗದ ಕುರಿತು ಪೀಡ್‌ಬ್ಯಾಂಕ್‌ ಕಂಪನಿ ವಾಹನಗಳ ದಟ್ಟಣೆ ಅವಲೋಕಿಸಿ ವರದಿ ನೀಡಿದೆ. ಗಂಗಾವತಿ ಮಾರ್ಗದ ಕೈಗಾರಿಕಾ ಪ್ರದೇಶದಿಂದ ಮಸ್ಕಿ ರಸ್ತೆಗೆ ಸಂಪರ್ಕ ಕಲ್ಪಿಸುವಂತೆ ಬೈಪಾಸ್‌ಗೆ ಅವಕಾಶವಿದೆ ಎನ್ನುವುದನ್ನು ತಿಳಿಸಲಾಗಿದೆ. ವೇಗಧೂತ ಬಸ್‌ಗಳು, ಖಾಸಗಿ ವಾಹನಗಳು ಈ ಮಾರ್ಗದಲ್ಲಿಸಾಗಿದರೆ, ನಗರ ಪ್ರವೇಶಿಸಬೇಕಾಗದ ಅನಿವಾರ್ಯತೆ ತಪ್ಪಲಿದೆ. ಅಗತ್ಯ ಜಮೀನನ್ನು ಸ್ವಾಧೀನಪಡಿಸಿಕೊಂಡು ಒಪ್ಪಿಸಿದರೆ, ತ್ವರಿತವಾಗಿ ಬೈಪಾಸ್‌ ನಿರ್ಮಿಸಿಕೊಡುವುದಕ್ಕೆ ಹೆದ್ದಾರಿ ಪ್ರಾಧಿಕಾರ ಸಜ್ಜಾಗಿದೆ.

ಸರಕಾರಕ್ಕೆ ಸಲ್ಲಿಕೆ: ಬೈಪಾಸ್‌ ಅಗತ್ಯತೆ ಉಲ್ಲೇಖೀಸಿ ಸಂಸದ ಸಂಗಣ್ಣ ಕರಡಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಇದಕ್ಕೆ ಡಿಸಿಎಂ ಗೋವಿಂದ ಕಾರಜೋಳ ಅವರುಕೂಡ ಸಾಥ್‌ ನೀಡಿದ್ದಾರೆ. 12.5 ಕಿ.ಮೀ. ಮಾರ್ಗದಲ್ಲಿ ಅಗತ್ಯ ಬೀಳುವ ಜಮೀನನ್ನು ಸ್ವಾಧಿಧೀನಪಡಿಸಿಕೊಳ್ಳುವುದಕ್ಕಾಗಿ 70 ಕೋಟಿ ರೂ. ಅಗತ್ಯವೆಂದು ಅನುದಾನ ಕೋರಿ ರಾಜ್ಯ ಸರಕಾರಕ್ಕೆ ಬೇಡಿಕೆ ಇಡಲಾಗಿದೆ.

ಬೈಪಾಸ್‌ ನಿರ್ಮಾಣಕ್ಕೆ ಸಂಬಂಧಿಸಿ ಭೂಸ್ವಾಧೀನಕ್ಕಾಗಿ ಹಣ ನೀಡುವಂತೆ ಈಗಾಗಲೇ ಪತ್ರ ಬರೆಯಲಾಗಿದೆ. ರಾಜ್ಯ ಸರಕಾರದಿಂದ ಅನುದಾನ ದೊರಕಿದ ತಕ್ಷಣವೇ ಈ ಕೆಲಸ ಆರಂಭಗೊಳ್ಳಲಿದೆ. – ಸಂಗಣ್ಣ ಕರಡಿ, ಸಂಸದ

 

 

ಯಮನಪ್ಪ ಪವಾರ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.