ಕೆರೆಗೆ ವಿಷಪೂರಿತ ಕೆಮಿಕಲ್ ನೀರು; ಟ್ಯಾಂಕರ್ ವಶಕ್ಕೆ ಪಡೆದ ಗ್ರಾಮಸ್ಥರು
Team Udayavani, Jul 26, 2020, 1:55 PM IST
ರಾಯಚೂರು: ಸಮೀಪದ ಮನ್ಸಲಾಪುರ ಕೆರೆಗೆ ವಿಷಪೂರಿತ ಕೆಮಿಕಲ್ ನೀರನ್ನು ಬಿಡುತ್ತಿದ್ದ ಲಾರಿಯನ್ನು ಗ್ರಾಮಸ್ಥರು ಶನಿವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಕೈಗಾರಿಕೆ ವಲಯದಿಂದ ರಾತ್ರೋರಾತ್ರಿ ಈ ರೀತಿ ಕೆಮಿಕಲ್ ನೀರನ್ನು ಕೆರೆ ಸಮೀಪದ ಹಳ್ಳಕ್ಕೆ ಹರಿಸಲಾಗುತ್ತಿತ್ತು. ಇದರಿಂದ ಜಲಚರಗಳು ಮೃತಪಟ್ಟರೆ, ಬೆಳೆಗೆ ಹರಿಸಿದರೆ ಬೆಳೆಯೆಲ್ಲ ಸುಟ್ಟು ಹೋಗಿತ್ತಿತ್ತು. ಈ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಕೆಲ ದಿನಗಳಿಂದ ಕಾದು ಕುಳಿತ್ತಿದ್ದ ಗ್ರಾಮಸ್ಥರಿಗೆ ನಿನ್ನೆ ರಾತ್ರಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಸಿಕ್ಕಿದೆ. ಆದರೆ, ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಕೂಡಲೇ ತನಿಖೆ ನಡೆಸಿ ರಾಸಾಯನಿಕವನ್ನು ಅವೈಜ್ಞಾನಿಕ ವಿಲೇವಾರಿ ಮಾಡುತ್ತಿದ್ದ ಕಂಪನಿಯನ್ನು ಸೀಜ್ ಮಾಡಬೇಕು ಎಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾಮೀಣ ಠಾಣೆ ಪಿಎಸ್ಐ ರಂಗಪ್ಪ, ಲಾರಿ ರಸ್ತೆ ಬದಿ ನಿಂತಿದೆ. ಕೆಮಿಕಲ್ ಎಲ್ಲಿಗೆ ಸಾಗಿಸಲಾಗುತ್ತಿತ್ತು, ಲಾರಿ ಮಾಲೀಕರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ