ಶಿಥಿಲ ವಸತಿಗೃಹಗಳಲ್ಲೇ ಪೊಲೀಸರ ವಾಸ


Team Udayavani, Mar 27, 2018, 5:44 PM IST

ray-23=.jpg

ಹಟ್ಟಿ ಚಿನ್ನದ ಗಣಿ: ಸ್ಥಳೀಯ ಪೊಲೀಸ್‌ ಠಾಣೆ ಸಿಬ್ಬಂದಿಗೆ ಸುಮಾರು 75 ವರ್ಷದ ಹಿಂದೆ ನಿರ್ಮಿಸಿದ ವಸತಿಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಆರಕ್ಷಕರ ಕುಟುಂಬಗಳು ಜೀವ ಭಯದಲ್ಲೇ ಬದುಕುವಂತಾಗಿದೆ.

1942ರಲ್ಲಿ ಹಟ್ಟಿ ಕ್ಯಾಂಪ್‌ನಲ್ಲಿ ಪೊಲೀಸ್‌ ಠಾಣೆ ಎದುರು 16 ವಸತಿಗೃಹಗಳನ್ನು ನಿರ್ಮಿಸಲಾಗಿದೆ. ಸುಮಾರು 75 ವರ್ಷದಿಂದ ಇವುಗಳ ದುರಸ್ತಿಗೆ ಇಲಾಖೆ ಮುಂದಾಗಿಲ್ಲ. ಹೀಗಾಗಿ ಗೋಡೆಗಳು ಬಿರುಕು ಬಿಟ್ಟಿವೆ. ಛತ್ತಿನ ಕಾಂಕ್ರಿಟ್‌ ಉದುರುತ್ತಿದ್ದು, ಕಬ್ಬಿಣದ ಸರಳುಗಳು ಎಲುವಿನ ಹಂದರದಂತೆ ಕಾಣುತ್ತಿವೆ. ಮಳೆ ಬಂದರೆ ಮನೆ ಸೋರುತ್ತಿವೆ. ಈಗಾಗಲೇ ಪಿಡಬುÉÂಡಿ ಇಲಾಖೆಯವರು ಈ ಮನೆಗಳು ವಾಸಕ್ಕೆ ಯೋಗ್ಯವಿಲ್ಲವೆಂದು ವರದಿ ನೀಡಿದ್ದಾರೆ. 

ಹಟ್ಟಿ ಚಿನ್ನದ ಗಣಿ ಕಂಪನಿ ವ್ಯಾಪ್ತಿಯ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಸೇರಿ 25 ಜನ ಪೊಲೀಸ್‌ ಸಿಬ್ಬಂದಿ ಇದ್ದಾರೆ. ಒಟ್ಟು 16 ವಸತಿಗೃಹಗಳಲ್ಲಿ ಕೇವಲ 8 ರಿಂದ 10 ಮನೆಗಳಲ್ಲಿ ಪೊಲೀಸರ ಕುಟುಂಬಗಳು ವಾಸ ಇವೆ. ಉಳಿದ ಸಿಬ್ಬಂದಿ ಅಧಿಸೂಚಿತ ಪ್ರದೇಶದ ಕ್ಯಾಂಪ್‌ನಲ್ಲಿನ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ರಕ್ಷಣೆ ಇಲ್ಲ: ಸಾರ್ವಜನಿಕರ ಆಸ್ತಿ, ಪಾಸ್ತಿ, ಜೀವ ರಕ್ಷಣೆಗೆ ಹಗಲು-ರಾತ್ರಿ ಸೇವೆ ಸಲ್ಲಿಸುವ ಪೊಲೀಸ್‌ ಸಿಬ್ಬಂದಿ ಕುಟುಂಬಕ್ಕೆ ಮಾತ್ರ ಭದ್ರತೆ ಇಲ್ಲದಂತಾಗಿದೆ. ಶಿಥಿಲಗೊಂಡ ಮನೆಗಳಲ್ಲೇ ಜೀವಭಯದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ಆಗ್ರಹ: ಹಟ್ಟಿ ಚಿನ್ನದ ಗಣಿ ಕಂಪನಿಯವರು ಶಾಲೆ ಶಿಕ್ಷಕರಿಗೆ, ಬ್ಯಾಂಕ್‌ ನೌಕರರಿಗೆ, ಅಧಿಕಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿದ್ದಾರೆ. ವಿಪರ್ಯಾಸವೆಂದರೆ ಪೊಲೀಸ್‌ ಇಲಾಖೆಗೆ ಮಾತ್ರ ವಸತಿ ಸೌಲಭ್ಯ ಕಲ್ಪಿಸಲು ನಿರ್ಲಕ್ಷ್ಯವಹಿಸಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಟ್ಟಿ ಚಿನ್ನದ ಗಣಿ ಕಂಪನಿ 100 ಮನೆಗಳನ್ನು ನಿರ್ಮಿಸಿದ್ದು, ಅದರಲ್ಲಿ ಕೆಲ ಮನೆಗಳನ್ನು ಪೊಲೀಸ್‌ ಸಿಬ್ಬಂದಿಗೆ ಒದಗಿಸಬೇಕೆಂಬುದು ಸಾರ್ವಜನಿಕರು ಮತ್ತು ಪೊಲೀಸ್‌ ಸಿಬ್ಬಂದಿ ಆಶಯವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಟ್ಟಿ ಚಿನ್ನದ ಗಣಿ ಕಂಪನಿ ಅಧಿಕಾರಿಗಳ ಜೊತೆ ಚರ್ಚಿಸಿ ಪೊಲೀಸ್‌ ಸಿಬ್ಬಂದಿ ವಸತಿಗೃಹ ಒದಗಿಸಲು ಮುಂದಾಗಬೇಕಿದೆ.

‌ಸತಿ ಗೃಹಗಳು ಶಿಥಿಲಗೊಂಡ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ವಸತಿ ಸಮಸ್ಯೆಗೆ ಸೂಕ್ತ ಪರಿಹಾರ ಸಿಗಲಿದೆ ಎಂಬ ವಿಶ್ವಾಸವಿದೆ. ಪೊಲೀಸರಿಗೆ ಯೋಗ್ಯ ಮನೆಗಳ ಅಗತ್ಯವಿದೆ.
ಮಹ್ಮದ್‌ ರಫಿ, ಪಿಎಸ್‌ಐ ಹಟ್ಟಿ ಪೊಲೀಸ್‌ ಠಾಣೆ

ಹಟ್ಟಿ ಚಿನ್ನದ ಗಣಿ ಕಂಪನಿ ನಿರ್ಮಿಸಿದ 100 ಮನೆಗಳಲ್ಲಿ 10 ಮನೆಗಳನ್ನು ಕಂಪನಿ ಆಡಳಿತ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದೇವೆ. ಕಂಪನಿ ಅಧಿಕಾರಿಗಳು ಅವುಗಳನ್ನು ಯಾರಿಗೆ ಕೊಡುತ್ತಾರೋ ಅವರಿಗೆ ಬಿಟ್ಟಿದ್ದು. ಪೊಲೀಸ್‌ ಇಲಾಖೆಗೂ ನಮಗೂ ಸಂಬಂಧವಿಲ್ಲ. 
 ಶಿವಾನಂದ, ವಸತಿ ಸಮಿತಿ ಸದಸ್ಯರು ಹಾಗೂ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮುಖಂಡ.

ಹಟ್ಟಿ ಚಿನ್ನದ ಗಣಿ ಕಂಪನಿಯವರು ನಿರ್ಮಿಸಿದ 100 ಮನೆಗಳಲ್ಲಿ ಕೆಲ ಮನೆಗಳನ್ನು ಪೊಲೀಸ್‌ ಇಲಾಖೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಂಪನಿಯವರು ಮನೆ ನೀಡಿದರೆ ನಮ್ಮ ಸಿಬ್ಬಂದಿಗೆ ಹಂಚಿಕೆ ಮಾಡಲಾಗುವುದು.
 ಶರಣಬಸಪ್ಪ ಸುಬೇದಾರ, ಡಿವೈಎಸ್ಪಿ 

ಅಮರೇಶ ನಾಯಕ

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.