ರಾಜಕೀಯ ಏಟಿಗೆ ಡಿಕೆಶಿ ರೂಟ್‌ ಬದಲು?


Team Udayavani, Nov 24, 2020, 6:36 PM IST

ರಾಜಕೀಯ ಏಟಿಗೆ ಡಿಕೆಶಿ ರೂಟ್‌ ಬದಲು?

ಸಿಂಧನೂರು: ತಾಲೂಕಿನಲ್ಲಿ ಕಾಂಗ್ರೆಸ್‌ ಪಕ್ಷ ಇಬ್ಬಣಗಳಾಗಿ ಬಹುದಿನಗಳೇ ಗತಿಸಿದ್ದು, ರಾಜ್ಯ ನಾಯಕರ ಭೇಟಿ ಕಾರ್ಯಕ್ರಮಗಳು ಪರಸ್ಪರಏಟು-ಎದಿರೇಟಿಗೆ ಅಸ್ತ್ರಗಳಾಗಿವೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೋಮವಾರ ಮಸ್ಕಿ ಕಾರ್ಯಕ್ರಮಕ್ಕೆ ಸಾಗುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಿಂಧನೂರಿಗೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಕೊನೆ ಕ್ಷಣದಲ್ಲಿ ಬದಲಾದ ರೂಟ್‌ ರಾಜಕೀಯ ವಲಯದಲ್ಲಿಸಂಚಲನ ಮೂಡಿಸಿದೆ. ಮಾಜಿ ಸಚಿವ ಶಿವರಾಜ್‌ ಅಂಗಡಿ ಅವರ ನಿವಾಸದಿಂದ ಕಾರಟಗಿ ಮೂಲಕ ಸಿಂಧನೂರು ಮಾರ್ಗವಾಗಿಯೇ ಮಸ್ಕಿಗೆಡಿಕೆಶಿ ಅವರು ತೆರಳಬೇಕಿತ್ತು. ಪೂರ್ವನಿಗದಿ ವೇಳಾಪಟ್ಟಿಯಿದ್ದರೂ ಕೊನೆಯಲ್ಲಿ ಅವರ ರೂಟ್‌ ಬದಲಾಯಿತು. ಹೆದ್ದಾರಿ ಮಾರ್ಗದ ಹತ್ತಿರದ ಮಾರ್ಗ ಹೊರತುಪಡಿಸಿ ಸುತ್ತುವರಿದು ಮಸ್ಕಿ ತಲುಪಿದರು.  ಸಿಂಧನೂರು ಭೇಟಿ ತಪ್ಪಿಸುವ ಮತ್ತೂಂದು ಬಣದ ಪರೋಕ್ಷ ಲಾಬಿಯೇ ಈ ಬೆಳವಣಿಗೆಗೆ ಕಾರಣವೆಂಬ ಶಂಕೆ ವ್ಯಕ್ತವಾಯಿತು.

ಜಿದ್ದಾಜಿದ್ದಿ ತೀವ್ರ: ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆ.ವಿರೂಪಾಕ್ಷಪ್ಪ ಅವರ ಹಿಡಿತದಲ್ಲಿಯೇ ಕಾಂಗ್ರೆಸ್‌ ಮುನ್ನಡೆದಿತ್ತು.ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರ ಕುರಿತಾಗಿ ಉಂಟಾದ ಭಿನ್ನಮತಎರಡು ಬಣಗಳಾಗುವ ಮಟ್ಟಿಗೆ ಬೆಳೆದ ಮೇಲೆ ಜಿದ್ದಾಜಿದ್ದಿ ಜೋರಾಗಿದೆ. ಕೆಪಿಸಿಸಿ ಮಾಜಿಕಾರ್ಯದರ್ಶಿ ಕರಿಯಪ್ಪ ಹಾಗೂ ಬಸನಗೌಡಅವರು ಒಂದು ಗುಂಪಾಗಿಯೇ ಸಂಘಟನೆ ಮುಂದುವರಿಸಿದ್ದಾರೆ.

ಎರಡು ದಿನಗಳ ಹಿಂದೆಮಾಜಿ ಶಾಸಕರು, ಮಾಜಿ ಸಂಸದರ ನೇತೃತ್ವದಲ್ಲಿರೈತರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆನಡೆದರೆ, ಅದೇ ದಿನ ಯುವ ಹಾಗೂ ಮಹಿಳಾ ಕಾಂಗ್ರೆಸ್‌ನಿಂದ ಒಂದೇ ಸಮಯದಲ್ಲಿ ಇಂದಿರಾಗಾಂಧಿ  ಅವರ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಎರಡು ತಿಂಗಳ ಮುನ್ನವೂ ಕೇಂದ್ರ, ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎರಡು ಬಣಗಳಿಂದ ಪ್ರತ್ಯೇಕವಾಗಿತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಎರಡು ಕಡೆ ಟೆಂಟ್‌ ಹಾಕಿ ಪ್ರತಿಭಟಿಸಲಾಗಿತ್ತು. ಆ ಟೆಂಟ್‌ನಲ್ಲಿದ್ದವರು ಈ ಕಡೆ ಬರಲಿಲ್ಲ. ಈ ಕಡೆಯಿದ್ದವರು ಆ ಕಡೆಗೆ ಸುಳಿದಿರಲಿಲ್ಲ.

ಪರೋಕ್ಷ ಏಟು: ಕಾಂಗ್ರೆಸ್‌ನ ರಾಜ್ಯ ನಾಯಕರು ಆಗಮಿಸಿದಾಗಲೆಲ್ಲ ಅವರನ್ನು ಸ್ವಾಗತಿಸಿಕೊಳ್ಳುವ ವಿಷಯದಲ್ಲಿ ಯುವ ಕಾಂಗ್ರೆಸ್‌ರಾಜ್ಯಾಧ್ಯಕ್ಷರೇ ಮುಂಚೂಣಿ. ಈ ಹಿಂದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಮ್ಮ ನಿವಾಸಕ್ಕೆ ಕರೆದೊಯ್ದಿದ್ದರು. ರಾಹುಲ್‌ ಗಾಂಧಿ ರೈತ ಪರ ಯಾತ್ರೆ ಕೈಗೊಂಡಾಗಲೂ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷರೇ ಮುಂದೆ ನಿಂತು ಸ್ವಾಗತಿಸಿದ್ದರು. ಆದರೆ, ಇದೇ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ನಡೆಸಿದ್ದ ಸಿದ್ಧತೆಗಳು ಫಲ ನೀಡಲಿಲ್ಲ. ಉದ್ದೇಶ ಪೂರ್ವಕವಾಗಿಯೇ ಡಿಕೆಶಿ ಅವರನ್ನು ಸಿಂಧನೂರಿಗೆ ಬರದಂತೆನೋಡಿಕೊಳ್ಳಲು ಮಾರ್ಗ ಬದಲಿಸಿ ಮಸ್ಕಿ ತಲುಪಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಪೈಪೋಟಿ ಕಡಿಮೆಯಿಲ್ಲ : ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಸಿಂಧನೂರಿಗೆ ಆಗಮಿಸುವುದನ್ನು ತಪ್ಪಿಸಲು ಕಾರಣರೆಂದು ಯುವ ಕಾಂಗ್ರೆಸ್‌ ನವರು ಹೇಳಿಕೊಂಡರು. ಆದರೂ, ಪ್ರಯತ್ನ ಕೈ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರು ಮಸ್ಕಿಗೆ ತೆರಳಿ ತಮ್ಮ ಬೆಂಬಲಿಗರ ನೇತೃತ್ವದಲ್ಲಿ ಡಿಕೆಶಿ ಅವರಿಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ. ಮಸ್ಕಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿಕೊಳ್ಳಲು ಹೋಗಿದ್ದ ವೇಳೆಯೂಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮುಂಚೂಣಿಯಲ್ಲಿದ್ದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಇದ್ದರು.

 

-ಯಮನಪ್ಪ ಪವಾರ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.