ಹಳ್ಳ ಹಿಡಿದ ಶುದ್ಧ ನೀರು ಯೋಜನೆ


Team Udayavani, Aug 10, 2018, 11:53 AM IST

ray-1.jpg

ಹಟ್ಟಿ ಚಿನ್ನದ ಗಣಿ: ಸಮೀಪದ ಯಲಗಟ್ಟಾ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಜಿಲ್ಲಾ ಪಂಚಾಯ್ತಿಯಿಂದ ಕೈಗೊಂಡ ಕಾಮಗಾರಿ ಅರೆಬರೆಯಾಗಿದ್ದು, ಯೋಜನೆಗೆ ಅಳವಡಿಸಲು ತಂದ ಫಿಲ್ಟರ್‌ ಟ್ಯಾಂಕ್‌ ಸಾಮಗ್ರಿಗಳು 5 ವರ್ಷಗಳಿಂದ ಗುಡ್ಡದಲ್ಲಿ ಅನಾಥವಾಗಿ ಬಿದ್ದಿದೆ.

2011-12ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತಿಯಿಂದ 15 ಲಕ್ಷ ರೂ. ವೆಚ್ಚದಲ್ಲಿ ಯಲಗಟ್ಟಾ ಗ್ರಾಮಕ್ಕೆ ನೀರು ಸರಬರಾಜಿಗಾಗಿ 3 ಕಿ.ಮೀ. ಅಂತರದಲ್ಲಿರುವ ಎನ್ನಾರಿಸಿ ಮುಖ್ಯ ನಾಲೆಯಿಂದ ಪೈಪ್‌ಲೈನ್‌ ಕಾಮಗಾರಿ ಕೈಗೊಳ್ಳಲಾಗಿತ್ತು. ಮುಖ್ಯ ನಾಲೆಯಿಂದ ನೇರವಾಗಿ ಪೈಪ್‌ಲೈನ್‌ ಮೂಲಕ ಸರಬರಾಜಾದ ನೀರು ಕುಡಿದು ಗ್ರಾಮಸ್ಥರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡವು.

ಇದರಿಂದಾಗಿ ಗ್ರಾಮಸ್ಥರು ನೀರು ಶುದ್ಧೀಕರಿಸಿ ಪೂರೈಸಲು ಒತ್ತಾಯಿಸಿದರು. ಹೀಗಾಗಿ ಜಿಲ್ಲಾ ಪಂಚಾಯತಿ ಮತ್ತೇ 10
ಲಕ್ಷ ರೂ. ಅನುದಾನ ಬಿಡುಗಡೆ ಮಾಡಿ, ಗ್ರಾಮದ ಎತ್ತರದ ಪ್ರದೇಶವಾದ ಗುಡ್ಡದಲ್ಲಿ ಫಿಲ್ಟರ್‌ ಟ್ಯಾಂಕ್‌ ಅಳವಡಿಸಿ ಶುದ್ಧ
ನೀರು ಪೂರೈಸಲು ಯೋಜನೆ ರೂಪಿಸಿತ್ತು.

ನನೆಗುದಿಗೆ: ಯಲಗಟ್ಟಾ ಗ್ರಾಮದ ಹೊರವಲಯದ ಬಂಡೇಬಾವಿ ರಸ್ತೆ ಪಕ್ಕದಲ್ಲಿ ವಾಟರ್‌ ಫಿಲ್ಟರ್‌ ಟ್ಯಾಂಕ್‌
ಅಳವಡಿಸಲು ಜಾಗೆ ಗುರುತಿಸಲಾಗಿತ್ತು. ಅದಕ್ಕಾಗಿ ರೈತರೊಬ್ಬರು ತಮ್ಮ ಜಮೀನು ಸಹ ಬಿಟ್ಟುಕೊಟ್ಟಿದ್ದಾರೆ. ಆದರೆ ಫಿಲ್ಟರ್‌ ಟ್ಯಾಂಕ್‌ ಅಳವಡಿಕೆ ಕಾಮಗಾರಿ ಪಡೆದ ಗುತ್ತಿಗೆದಾರರು, ಎಂಜಿನೀಯರ್‌ಗಳ ನಿರ್ಲಕ್ಷ್ಯದಿಂದ ಕಾಮಗಾರಿ ಅರೆಬರೆಯಾಗಿ ಐದು ವರ್ಷದಿಂದ ನನೆಗುದಿಗೆ ಬಿದ್ದಿದೆ.

ಪರಿಣಾಮ ಈಗಲೂ ಮುಖ್ಯನಾಲೆಯ ನೀರು ನೇರವಾಗಿ ಗ್ರಾಮಕ್ಕೆ ಪೂರೈಕೆ ಆಗುತ್ತಿದೆ. ಗ್ರಾಮದಲ್ಲಿ ತಂದು ಬಿಸಾಡಿ ಹೋಗಿರುವ ಫಿಲ್ಟರ್‌ ಟ್ಯಾಂಕ್‌ನ್ನು ಅಳವಡಿಸಿ, ಕಾಮಗಾರಿ ಪೂರ್ಣಗೊಳಿಸಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಲೇ ಬಂದಿದ್ದಾರೆ. ಆದರೆ ಕಾಮಗಾರಿ ನಡೆಯುತ್ತಿಲ್ಲ. 

ಯಲಗಟ್ಟಾ ಗ್ರಾಮದಲ್ಲಿ ಕೈಗೊಂಡಿರುವ ನೀರು ಪೂರೈಕೆ ಕಾಮಗಾರಿ ಗುತ್ತಿಗೆದಾರ ಹಾಗೂ ಎಂಜಿನೀಯರ್‌ಗಳ ನಿರ್ಲಕ್ಷ್ಯದಿಂದ ಯೋಜನೆ ಹಳ್ಳ ಹಿಡಿದಿದೆ. ಯೋಜನೆಯ ಸಾಮಾಗ್ರಿಗಳು ಹಾಳಾಗುತ್ತಿವೆ. ಕೂಡಲೆ ಕಾಮಗಾರಿ ಪುನಾರಂಭಿಸಿ ತ್ವರಿತವಾಗಿ ಮುಗಿಸಿ ಶುದ್ಧ ನೀರು ಪೂರೈಸಬೇಕು.
 ಅಣ್ಣಯ್ಯ ಗ್ರಾಮಸ್ಥ. ಯಲಗಟ್ಟಾ.

ಕಳೆದ ನಾಲ್ಕು ವರ್ಷಗಳ ಹಿಂದೆ ಮುಖ್ಯನಾಲೆಯಿಂದ ಯಲಗಟ್ಟಾ ಗ್ರಾಮಕ್ಕೆ ಪೂರೈಕೆಯಾಗುವ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡಲು ಫಿಲ್ಟರ್‌ ಟ್ಯಾಂಕ ತಂದಿದ್ದಾರೆ. ಆದರೆ ಅದನ್ನು ಅಳವಡಿಸುವ ಬಗ್ಗೆ ತಾಪಂ ಕಾ.ನಿ. ಅಧಿಕಾರಿ, ಜಿಪಂ ಎಂಜಿನೀಯರ್‌ಗಳ ಜತೆ ಚರ್ಚಿಸಿದರೂ ಯಾರಿಂದಲೂ ಸಮರ್ಪಕ ಸ್ಪಂದನೆ ಸಿಗುತ್ತಿಲ್ಲ.
 ದ್ಯಾವಪ್ಪ, ಅಧ್ಯಕ್ಷ, ಗ್ರಾ.ಪಂ. ರೋಡಲಬಂಡಾ (ತ).

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.