ಅನಧಿಕೃತ ಶುದ್ಧ ನೀರಿನ ಘಟಕಕ್ಕೆ ವಿದ್ಯುತ್ ಸ್ಥಗಿತ
Team Udayavani, May 16, 2022, 2:22 PM IST
ದೇವದುರ್ಗ: ಪಟ್ಟಣ ಸೇರಿ ತಾಲೂಕಿನಾದ್ಯಂತ ಅನಧಿಕೃತ ಐಎಸ್ಐ ಮಾರ್ಕ್ ಇಲ್ಲದ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಮಾಡಲು ಜೆಸ್ಕಾಂ ಇಲಾಖೆಯಿಂದ ವಿದ್ಯುತ್ ಸಂಪರ್ಕ ಸ್ಥಗಿತ ಮಾಡಲಾಗಿದೆ. ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಇಲಾಖೆ ಆದೇಶ ಹಿನ್ನೆಲೆ ಘಟಕಗಳಿಗೆ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಎರಡ್ಮೂರು ದಿನಗಳಿಂದ ಪಟ್ಟಣದಲ್ಲಿ 13 ಶುದ್ಧ ಕುಡಿಯುವ ನೀರಿನ ಘಟಕಗಳು ಬಂದಾದ್ದರಿಂದ ಕುಡಿಯುವ ನೀರಿಗೆ ಪರಿತಪಿಸುವಂತಹ ಸ್ಥಿತಿ ಎದುರಾಗಿದೆ. ಅಧಿಕೃತ ಐಎಸ್ಐ ಮಾರ್ಕ್ ಹೊಂದಿರುವ ಕಮತಿಗಿ ಶರಣಗೌಡ ಮಾಲೀಕತ್ವ ಸಾಯಿ ಶುದ್ಧ ಕುಡಿಯುವ ನೀರಿನ ಘಟಕ ಒಂದೇ ಆರಂಭವಿದೆ. ಐಎಸ್ಐ ಮಾರ್ಕ್ ಇಲ್ಲದೇ ಅನಧಿಕೃತ ನೀರು ಪೂರೈಸುತ್ತಿರುವ ಘಟಕ ಮಾಲೀಕರ ವಿರುದ್ಧ ತಡವಾಗಿ ಚುಕುರು ಮುಟ್ಟಿಸಲು ಅಧಿಕಾರಿಗಳು ಮುಂದಾಗಿದ್ದು, ಕೆಟ್ಟ ಮೇಲೆ ಬುದ್ಧಿಬಂತು ಎಂಬಂತಾಗಿದೆ.
ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಒಟ್ಟು 26 ಅನಧಿಕೃತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆಗೆಯಲಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿರುವ 13 ಘಟಕಗಳು ಬಂದಾಗಿವೆ. ಇನ್ನುಳಿದ ಗ್ರಾಮೀಣ ಭಾಗದ 13 ಘಟಕಗಳು ಪ್ರಾರಂಭಗೊಂಡಿವೆ. ಪರವಾನಗಿ ಇಲ್ಲದೇ ಇಷ್ಟು ವರ್ಷಗಳ ಕಾಲ ಜನರಿಗೆ ನೀರು ಪೂರೈಸಿದ ಮಾಲೀಕರ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕಲಾಗಿದೆ.
ಕುರ್ಕಿಹಳ್ಳಿ, ಜಾಲಹಳ್ಳಿ, ಸಿರವಾರ ಕ್ರಾಸ್, ಗೋಪಾಳಪುರು, ಬಿ.ಗಣೇಕಲ್, ಜಾ.ಜಾಡಲದಿನ್ನಿ, ಮಸರಕಲ್, ಕಾಕರಗಲ್, ಹಿರೇಬೂದೂರು, ಗಬ್ಬೂರು ಸೇರಿ ಇತರೆ ಹಳ್ಳಿಗಳು- ಪಟ್ಟಣ ವ್ಯಾಪ್ತಿ ಅನಧಿಕೃತ ಐಎಸ್ಐ ಮಾರ್ಕ್ ಇಲ್ಲದ 13 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುತ್ ಸ್ಥಗಿತಗೊಳಿಸಲು ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಪ್ರಾಧಿಕಾರ ಇಲಾಖೆಯಿಂದ ಆದೇಶಿಸಲಾಗಿದೆ. ಅನಧಿಕೃತ ಐಎಸ್ಐ ಮಾರ್ಕ್ ಇಲ್ಲದ 26 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುತ್ ಸ್ಥಗಿತಗೊಳಿಸಲು ಆಹಾರ ಸುರಕ್ಷತ ಪ್ರಾಧಿಕಾರ ಇಲಾಖೆಯಿಂದ ಆದೇಶ ಬಂದ ಹಿನ್ನೆಲೆ ಪಟ್ಟಣದ 13 ಘಟಕಗಳಿಗೆ ವಿದ್ಯುತ್ ಸಂಪರ್ಕ ಕಟ್ ಮಾಡಲಾಗಿದೆ. ಇನ್ನುಳಿದ ಹಳ್ಳಿಗಳಲ್ಲಿರುವ ಘಟಕಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ. -ಕಳಕಪ್ಪ, ಜೆಸ್ಕಾಂ ಇಲಾಖೆ ಎಇಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ