ಎಚ್ ಡಿಕೆ ತಮ್ಮ ಸ್ಥಾನಕ್ಕೆ ತಕ್ಕಂತೆ ಮಾತಾಡಲಿ: ಸಚಿವ ಪ್ರಹ್ಲಾದ ಜೋಶಿ


Team Udayavani, Jan 12, 2020, 12:45 PM IST

joshi

ರಾಯಚೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ತಕ್ಕಂತೆ ಮಾತನಾಡುವುದು ಸೂಕ್ತ. ಗಲಭೆ ಸೃಷ್ಟಿಸುವ ಸರ್ಕಾರಗಳಿಗೆ ಜನ ಬೆಂಬಲಿಸುತ್ತಾರಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಯರಮರಸ್ ವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕುಮಾರಸ್ವಾಮಿ ಸಿಡಿ ಬಿಡುಗಡೆ ಬಗ್ಗೆ ಪೋಲಿಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ನಡೆ. ಯಾರ ಮೇಲೆ ದಾಳಿ ಮಾಡಲು ಯಾರಿಗೂ ಹಕ್ಕಿಲ್ಲ. ಪೋಲಿಸರು ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಕ್ರಮ ಕೈಗೊಂಡರೆ ಅವರ ವಿರುದ್ಧ ನಿಲ್ಲುವುದು ಸರಿಯಲ್ಲ ಎಂದರು.

ಆಂಧ್ರದ ಕರ್ನೂಲ್ ಜಿಲ್ಲೆಯನ್ನು ರಾಜ್ಯಕ್ಕೆ ಸೇರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗಡಿ ವಿವಾದಗಳು ಬಹಳ ಇವೆ. ಕರ್ನೂಲ್ ರಾಜ್ಯಕ್ಕೆ ಸೇರಿದರೆ ಸಂತೋಷ. ಆದರೆ ಆಂಧ್ರ ಸರ್ಕಾರ ಕರ್ನೂಲ್ ಅಭಿವೃದ್ಧಿ ಕಡೆ ಗಮನ ಕೊಡುವುದು ಒಳಿತು ಎಂದರು.

ಸಿಎಎ ಕುರಿತು ನೋಟಿಫಿಕೇಷನ್ ಆಗಿದೆ. ಆದರೆ,ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಕಾಯ್ದೆ ವಿರೋಧಿಸಿ ದೇಶದಲ್ಲಿ ಹೋರಾಟ ಮಾಡುತ್ತಿವೆ.

ಪಾಕ್ ನ ಭಯೋತ್ಪಾದನೆ ಮುಖವನ್ನು ವಿಶ್ವದ ಮುಂದೆ ನಿಲ್ಲಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ. ಪಾಕ್ ನಲ್ಲಿನ ಅಸಹಿಷ್ಣುತೆ ಹಾಗೂ ಸರ್ಕಾರ ಅಲ್ಪ ಸಂಖ್ಯಾತರ ಮೇಲಿನ ನಡೆಸಿರುವ ಧಾರ್ಮಿಕ ಅತ್ಯಾಚಾರವನ್ನು ಜಗತ್ತಿಗೆ ತೋರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ ಎಂದರು.

ದೇಶಕ್ಕೆ ಲಕ್ಷಾಂತರ ಜನ ಅಕ್ರಮವಾಗಿ ನುಸುಳಿ ಬಂದಿದ್ದಾರೆ. ಅವರ ಬಗ್ಗೆ ಕಾಂಗ್ರೆಸ್ ಚಕಾರವೆತ್ತುತ್ತಿಲ್ಲ.  ಅಲ್ಪಸಂಖ್ಯಾತರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಹರಿಹಾಯ್ದರು. ಯು.ಟಿ.ಖಾದರ್ ಅವರೇ ಕಾಯ್ದೆ ಜಾರಿಯಾದ ಮೇಲೆ ನಿಮಗೇನಾದರೂ ತೊಂದರೆ ಆಗಿದೆಯಾ ತಿಳಿಸಿ ಎಂದು ಪ್ರಶ್ನಿಸಿದರು.

ಭಾರತವನ್ನು ವಿರೋಧಿಸುವ ದೇಶಗಳ ಅಭಿಪ್ರಾಯ ಮತ್ತು ಕಾಂಗ್ರೆಸ್ ನಾಯಕರ ಅಭಿಪ್ರಾಯ ಒಂದೇ ಆಗಿದೆ. ಕಾಂಗ್ರೆಸ್ ನವರು ಸೋಲಿನಿಂದ ಕಂಗೆಟ್ಟಿದ್ದಾರೆ. ಮೋದಿ ವಿರೋಧ ಮಾಡುತ್ತ ದೇಶಕ್ಕೇ ಕೇಡು ಬಯಸುತ್ತಿದ್ದಾರೆ. ಇದು ಪೌರತ್ವ ಕೊಡುವ ಕಾನೂನೇ ವಿನಹ ಕಿತ್ತುಕೊಳ್ಳುವುದಲ್ಲ. ಇದರಿಂದ ದೇಶದ ಒಬ್ಬ ಪ್ರಜೆಗೂ ಸಮಸ್ಯೆಯಾಗದು ಎಂದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.