3ನೇ ಅಲೆ ಎದುರಿಸಲು ರಿಮ್ಸ್‌ ನಲ್ಲಿ ಸಿದ್ಧತೆ


Team Udayavani, Jun 29, 2021, 8:44 PM IST

sdfeffgghg

ರಾಯಚೂರು: ಕೊರೊನಾ ಎರಡನೇ ಅಲೆ ಪ್ರಭಾವ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ. ಮೊದಲ ಅಲೆಯಿಂದ ಕಲಿಯದ ಪಾಠ 2ನೇ ಅಲೆ ಕಲಿಸಿದ್ದು, 3ನೇ ಅಲೆ ಸಮರ್ಥವಾಗಿ ಎದುರಿಸಲು ರಿಮ್ಸ್‌ನಲ್ಲಿ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಎರಡನೇ ಅಲೆಯಲ್ಲಿ ರೋಗಿಗಳು ಆಕ್ಸಿಜನ್‌, ಬೆಡ್‌, ವೆಂಟಿಲೇಟರ್‌, ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಸೇರಿದಂತೆ ಕೆಲವೊಂದು ಸೌಲಭ್ಯಗಳು ಸಿಗದೇ ಪರದಾಡಿದ್ದು ಸುಳ್ಳಲ್ಲ.

ಆದರೆ, ಖಾಸಗಿ ಆಸ್ಪತ್ರೆಗಳನ್ನು ಮೀರಿ ರಿಮ್ಸ್‌, ಒಪೆಕ್‌ನಲ್ಲಿ ಉತ್ತಮ ಸೇವೆ ನೀಡಲಾಯಿತು ಎಂದು ಜನರೇ ಹೇಳುತ್ತಿರುವುದು ವಿಶೇಷ. ಕೆಲವೊಂದು ಖಾಸಗಿ ಆಸ್ಪತ್ರೆಗಳು ಆಕ್ಸಿಜನ್‌ ಸಿಗದೆ ರಿಮ್ಸ್‌, ಒಪೆಕ್‌ಗೆ ರೋಗಿಗಳನ್ನು ಶಿಫಾರಸು ಮಾಡಿದ್ದು ಇದಕ್ಕೊಂದು ತಾಜಾ ನಿದರ್ಶನ. ಅದೆಲ್ಲ ಸದ್ಯಕ್ಕೆ ಮುಗಿದ ಕತೆಯಾಗಿದ್ದು, ಈಗ ಎಲ್ಲೆಡೆ ಮೂರನೇ ಅಲೆ ಭಯ ಸೃಷ್ಟಿಯಾಗಿದೆ. ಆದರೆ, ಎರಡನೇ ಅಲೆಗೆ ನಿರೀಕ್ಷಿತ ಮಟ್ಟದ ಸಿದ್ಧತೆ ಮಾಡಿಕೊಳ್ಳದೇ ಆರಂಭದಲ್ಲಿ ಕಂಗೆಟ್ಟಿದ್ದ ರಿಮ್ಸ್‌ ಆಡಳಿತ ಮಂಡಳಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದಂತೆ ಕಾಣುತ್ತದೆ.

ಸಾಕಷ್ಟು ವಿಚಾರದಲ್ಲಿ ಈಗಾಗಲೇ ಮುಂದಾಲೋಚನೆ ಮಾಡಿ ಮುಂದಡಿ ಇಟ್ಟಿದೆ. ಮಕ್ಕಳಿಗೆ ಪ್ರತ್ಯೇಕ ವಾರ್ಡ್‌: ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ. ಅದರಲ್ಲೂ ಅಪೌಷ್ಟಿಕ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಬಹುದು ಎಂಬ ಶಂಕೆಯಿದ್ದು, ಜಿಲ್ಲೆಯಲ್ಲಿ ಅಂಥ ಮಕ್ಕಳ ಸಂಖ್ಯೆ 40 ಸಾವಿರ ಇದೆ ಎಂದು ಜಿಲ್ಲಾಧಿಕಾರಿಯೇ ತಿಳಿಸಿದ್ದಾರೆ.

ಈ ಎಲ್ಲ ಅಂಕಿ ಅಂಶ ಗಮನದಲ್ಲಿರಿಸಿಕೊಂಡು ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಮಕ್ಕಳಿಗೆ ಸೋಂಕು ಬಂದಲ್ಲಿ ಯಾವ ಪ್ರಮಾಣದಲ್ಲಿ ಇರಲಿದೆಯೋ ಎಂಬ ಅಂದಾಜಿರದ ಕಾರಣ ರಿಮ್ಸ್‌ನಲ್ಲಿ ಕೇವಲ ಮಕ್ಕಳಿಗಾಗಿಯೇ ಕೋವಿಡ್‌ ವಾರ್ಡ್‌ ಆರಂಭಿಸಲು ನಿರ್ಧರಿಸಲಾಗಿದೆ. ಒಪೆಕ್‌ನಲ್ಲಿ ಈಗ 150 ಬೆಡ್‌ ಗಳ ಕೋವಿಡ್‌ ಆಸ್ಪತ್ರೆ ಮುಂದುವರಿಯುತ್ತಿದ್ದು, ಅಲ್ಲಿ ದೊಡ್ಡವರಿಗೆ ಮಾತ್ರ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಅದರ ಜತೆಗೆ ಮಕ್ಕಳಿಗಾಗಿ 70 ಐಸಿಯು, 70 ವೆಂಟಿಲೇಟರ್‌, 150 ಆಕ್ಸಿಜನ್‌ ಬೆಡ್‌ ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಈಗಾಗಲೇ ಇದಕ್ಕೆ ಬೇಕಾದ ಮಾನಿಟರ್‌, ಯಂತ್ರೋಪಕರಣಗಳ ಅಳವಡಿಕೆ, ಆಕ್ಸಿಜನ್‌ ಪೂರೈಕೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮಕ್ಕಳಿಗಾಗಿ ಟ್ರಯಸ್‌ ಸಿದ್ಧಪಡಿಸಿದ್ದು, ಇನ್ನೂ 50 ಬೆಡ್‌ಗಳ ಟ್ರಯಸ್‌ ಮಾಡುವ ಆಲೋಚನೆ ಇದೆ. ಮಕ್ಕಳು, ವಯಸ್ಕರನ್ನು ಪ್ರತ್ಯೇಕವಾಗಿ ಇಡುವುದರಿಂದ ರೋಗದ ತೀವ್ರತೆ ಕಡಿಮೆ ಮಾಡಬಹುದು ಎನ್ನುತ್ತಾರೆ ವೈದ್ಯಾಧಿ ಕಾರಿಗಳು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.