ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆ


Team Udayavani, Mar 31, 2018, 3:12 PM IST

ray-1.jpg

ದೇವದುರ್ಗ: ಸ್ಥಳೀಯ ವಿಧಾನಸಭೆ ಮೀಸಲು ಕ್ಷೇತ್ರದ ಚುನಾವಣೆಗಾಗಿ ಸಕಲ ಸಿದ್ಧತೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಚುನಾವಣೆಯನ್ನು ಶಾಂತಿಯುತ ಮತ್ತು ಯಶಸ್ವಿಯಾಗಿಸಲು ಅಧಿಕಾರಿಗಳ ತಂಡ ಕಾರ್ಯೋನ್ಮುಖವಾಗಿದೆ ಎಂದು ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಅಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್‌ ಇರ್ಫಾನ್‌ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆಯಲು ಮಿನಿ ವಿಧಾನಸೌಧದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ದೂ: 08531-260064, 08531-260028 ಸ್ಥಿರ ದೂರವಾಣಿಗೆ ಸಂಪರ್ಕಿಸಬಹುದಾಗಿದೆ. ಮೆಸೇಜ್‌ ಮತ್ತು ವಿಡಿಯೋ, ಫೋಟೋಗಳನ್ನು ಕಳುಹಿಸಲು ವ್ಯಾಟ್ಸಪ್‌ ಮೊ: 7349630024ಗೆ ಕಳುಹಿಸಬಹುದಾಗಿದೆ. ತಾಪಂ ಇಒ ಮಡಿವಾಳಪ್ಪ ಪಿ.ಎಸ್‌. ನೇತೃತ್ವದಲ್ಲಿ ಮಾದರಿ ನೀತಿ ಸಂಹಿತೆ ತಂಡ ರಚಿಸಲಾಗಿದೆ. 22 ಸೆಕ್ಟರ್‌ ಅಧಿಕಾರಿಗಳ ತಂಡ ನೇಮಿಸಲಾಗಿದೆ. 

ಆರು ಚೆಕ್‌ಪೋಸ್ಟ್‌: ಮೊದಲ ಹಂತದಲ್ಲಿ ತಿಂಥಣಿ ಬ್ರಿಜ್‌, ಹೂವಿನಹೆಡಗಿ ಬ್ರಿಜ್‌, ಜಹಿರುದ್ದೀನ್‌ ವೃತ್ತ, ಗೂಗಲ್‌ ಬ್ರಿಜ್‌, ಗಬ್ಬೂರ ಬಳಿಯ ತುಂಗಭದ್ರಾ ಕಾಲುವೆ ಹತ್ತಿರ ಹಾಗೂ ಆಕಳಕುಂಪಿ ಸೇರಿದಂತೆ 6 ಚೆಕ್‌ ಪೋಸ್ಟ್‌ಗಳನ್ನು ಪ್ರಾರಂಭಿಸಲಾಗಿದೆ. ಚೆಕ್‌ಪೋಸ್ಟ್‌ಗಳನ್ನು ಅವಶ್ಯಕತೆ ಅನುಗುಣವಾಗಿ ಹೆಚ್ಚಿಸುವುದು ಮತ್ತು ಸ್ಥಳಾಂತರಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. 

254 ಮತಗಟ್ಟೆ: ದೇವದುರ್ಗ ಕ್ಷೇತ್ರದಲ್ಲಿ 254  ತಗಟ್ಟೆಗಳಿದ್ದು, ಹೆಚ್ಚುವರಿಯಾಗಿ 7 ಮತಗಟ್ಟೆ ಮಾಡಿಕೊಳ್ಳಲಾಗಿದೆ. 44 ಅತಿ ಸೂಕ್ಷ್ಮ, 80 ಸೂಕ್ಷ್ಮ ಹಾಗೂ 130 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕ್ಷೇತ್ರದಲ್ಲಿ 1,08,587 ಪುರುಷರು, 1,10,224 ಮಹಿಳಾ ಮತದಾರರು ಇದ್ದು, ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಈ ಕ್ಷೇತ್ರದ ವಿಶೇಷವಾಗಿದೆ. 

19 ಸರ್ವಿಸ್‌ ಮತದಾರರು: ಮತದಾರರ ಗುರುತಿನ ಚೀಟಿ ಪಡೆಯಲು ಏ.7ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಮತದಾರರ ಯಾದಿಗೆ ಸೇರ್ಪಡೆಗಾಗಿ 12,156 ಅರ್ಜಿ ಸಲ್ಲಿಕೆಯಾಗಿದ್ದು, ಈಗಾಗಲೇ 11,230 ಅರ್ಜಿಗಳನ್ನು ಸ್ವೀಕಾರಗೊಂಡಿವೆ. ಹೊಸ ಮತದಾರರನ್ನು ಮತದಾರರ ಯಾದಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ನಾನಾ ಕಾರಣಗಳಿಂದಾಗಿ 732 ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. 194 ಅರ್ಜಿಗಳನ್ನು ಕಾಯ್ದಿರಿಸಲಾಗಿದ್ದು, ಶೀಘ್ರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಹೇಳಿದರು.

ನೀತಿ ಸಂಹಿತೆ ಕಟ್ಟುನಿಟ್ಟು ಜಾರಿ: ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗಿದೆ. ಗೋಡೆಬರಹ, ಬಾವುಟ ಹಚ್ಚುವುದು ಸೇರಿದಂತೆ ಆಯೋಗ ಸೂಚಿಸಿರುವ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗುವುದು. ಪರವಾನಗಿ ಇಲ್ಲದೆ ಯಾರೂ ಬಾವುಟ ಹಚ್ಚಿಕೊಳ್ಳಬಾರದು. ಗೋಡೆ ಬರಹ ಬರೆಯಬಾರದು. ಪಟ್ಟಣ ವ್ಯಾಪ್ತಿಯಲ್ಲಿ ಪುರಸಭೆ ಕಚೇರಿಯಿಂದ, ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತಿಯಿಂದ ಪರವಾನಿಗೆ ಪಡೆದು, ತಾಲೂಕು ಚುನಾವಣಾಧಿಕಾರಿಗಳಿಂದ ಆದೇಶ ಪಡೆಯಬೇಕು. ಕರಪತ್ರಗಳನ್ನು ಪ್ರಕಟಿಸುವುದು ಮತ್ತು ಹಂಚಿಕೆ ಮಾಡುವಾಗಲೂ ಚುನಾವಣಾಧಿಕಾರಿಯಿಂದ ಅಧಿಕೃತ ಆದೇಶ ಪಡೆಯಬೇಕು. ಈ ಕಾರಣದಿಂದ ತಾಲೂಕಿನಲ್ಲಿರುವ ಎಲ್ಲ ಪ್ರಿಂಟಿಂಗ್‌ ಪ್ರಸ್‌ ಮಾಲಿಕರ ಸಭೆ ಕರೆದು ಚರ್ಚಿಸಲಾಗುವುದು. ಈ ಕ್ಷೇತ್ರದಲ್ಲಿ ಶಾಂತಿಯುತ ಮತ್ತು ಯಶಸ್ವಿ ಚುನಾವಣೆ ನಡೆಯಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು. ತಹಶೀಲ್ದಾರ್‌ ಅಶೋಕ ಹೀರೊಳ್ಳಿ, ತಾಪಂ ಇಒ ಮಡಿವಾಳಪ್ಪ ಪಿ.ಎಸ್‌., ಸಿಪಿಐ ಸಂಜೀವಕುಮಾರ ಟಿ. ಪಿಎಸ್‌ಐ ಹೊಸಕೇರಪ್ಪ ಕೆ. ಹಾಗೂ ಅಬಕಾರಿ ಅಧಿಕಾರಿಗಳು ಇದ್ದರು. 

ಅತೀ ಸೂಕ್ಷ್ಮ ಕ್ಷೇತ್ರ
ರಾಜ್ಯದಲ್ಲಿ ದೇವದುರ್ಗವನ್ನು ಅತಿ ಸೂಕ್ಷ್ಮ ಕ್ಷೇತ್ರ ಎಂದು ಗುರುತಿಸಲಾಗಿದ್ದು, ಸಾಮಾನ್ಯವಾಗಿ ಪ್ರತಿ ಕ್ಷೇತ್ರದಲ್ಲಿ ಎಂಸಿಸಿ 6 ತಂಡಗಳನ್ನು ನೇಮಿಸಲಾಗುವುದು. ಆದರೆ ಅತೀ ಸೂಕ್ಷ್ಮ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ವಿಶೇಷವಾಗಿ 9 ಸಂಚಾರಿ ತಂಡಗಳನ್ನು (ಫ್ಲಾಯಿಂಗ್‌ ಸ್ಕ್ವಾಡ್ಸ್‌) ನಿಯೋಜಿಸಲಾಗಿದ್ದು, ಪ್ರತ್ಯೇಕ ಸಿಬ್ಬಂದಿ ನೇಮಿಸಲಾಗಿದೆ. ಈ ತಂಡಗಳು 24 ಗಂಟೆ ಸೇವೆಗೆ ಲಭ್ಯವಿರುತ್ತದೆ ಎಂದು ಚುನಾವಣಾಧಿಕಾರಿ ಇರ್ಫಾನ್‌ ಹೇಳಿದರು.

ನೀರು ಪೂರೈಕೆಗಿಲ್ಲ ಅಡ್ಡಿ
ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜಿಗೆ ಯಾವುದೇ ಅಡ್ಡಿ ಇಲ್ಲ. ಆದರೆ ನೀರಿನ ಟ್ಯಾಂಕ್‌ ಮೇಲೆ ರಾಜಕೀಯ ನಾಯಕರ ಭಾವಚಿತ್ರವಾಗಲಿ, ಪಕ್ಷದ ಚಿಹ್ನೆಯಾಗಲಿ ಇರಬಾರದು. ಈಗಾಗಲೇ ಅರಕೇರಾದಲ್ಲಿ ಪಕ್ಷದ ಚಿಹ್ನೆ ಇರುವ ನೀರಿನ ಟ್ಯಾಂಕ್‌ ಜಪ್ತಿ ಮಾಡಲಾಗಿದೆ. ಅಕ್ರಮ ಮದ್ಯ ಮಾರಾಟದ 6 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹ್ಮದ್‌ ಇರ್ಫಾನ್‌ ತಿಳಿಸಿದರು. 

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.