ಅಧ್ಯಕ್ಷಗಿರಿ ಬೆಂಬಲಕ್ಕೆಕಾರು, ನಿವೇಶನ ಬೇಡಿಕೆ!


Team Udayavani, Jan 14, 2021, 2:17 PM IST

Presidency demands support!

ರಾಯಚೂರು: ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಾನಾ ಕಸರತ್ತು ನಡೆಸಿದ ಸದಸ್ಯರು ಈಗ ಅಧ್ಯಕ್ಷ, ಉಪಾಧ್ಯಕ್ಷ ಗಾದಿಗಾಗಿ ಪ್ರಹಸನ ನಡೆಸಿದ್ದಾರೆ. ಆದರೆ, ಬೆಂಬಲ ನೀಡಲು ಸದಸ್ಯರು ವಿಚಿತ್ರ ಬೇಡಿಕೆ ಇಡುತ್ತಿರುವುದು ಉಭಯ ಸಂಕಟ ತಂದೊಡ್ಡಿದೆ. ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇನ್ನೂ ಮೀಸಲಾತಿ ಪ್ರಕಟಗೊಂಡಿಲ್ಲ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿರುವ ಜಾತಿಗೆ ಮೀಸಲಾತಿ ಸಿಗಬಹುದು ಎಂಬ ಲೆಕ್ಕಾಚಾರ ಚುನಾಯಿತರದ್ದು. ಇದೇ ಕಾರಣಕ್ಕೆ ಬಹುಮತಕ್ಕೆ ಬೇಕಾದಷ್ಟು ಸದಸ್ಯರ ಬೆಂಬಲ ಪಡೆಯಲು ಮುಂದಾಗಿದ್ದಾರೆ.

ಕೆಲವೆಡೆ ಪಕ್ಷಾಧಾರಿತ ಸದಸ್ಯ ಬಲವಿದ್ದರೆ ಕೆಲವೆಡೆ ಸಂಖ್ಯಾಬಲಕ್ಕೆ ಕೊರತೆ ಕಂಡು ಬರುತ್ತಿದೆ. ಹೀಗಾಗಿ ಕೊರತೆ ಇರುವಷ್ಟು ಸದಸ್ಯರನ್ನು ಸೆಳೆಯಲು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಾಕಾಂಕ್ಷಿಗಳು ಆಮಿಷ ಒಡ್ಡುತ್ತಿದ್ದಾರೆ. ಈ ವೇಳೆ ಸದಸ್ಯರು ಮುಂದಿಡುತ್ತಿರುವ ಡಿಮ್ಯಾಂಡ್‌ ಕೇಳಿದರೆ ಹುಬ್ಬೇರಿಸುವಂತಾಗಿದೆ.

ಕಾರು, ನಿವೇಶನ ಕೇಳಿದ ಸದಸ್ಯರು: ಸದಸ್ಯರು ಈ ಬಾರಿ ಹಣ ಮಾತ್ರವಲ್ಲದೇ ಬೇರೆ ರೀತಿಯ ಉಡುಗೊರೆ ಕೇಳುತ್ತಿದ್ದಾರೆ. ಕೆಲವರು ದುಬಾರಿ ಕಾರುಗಳನ್ನು ಕೇಳಿದರೆ, ಕೆಲವರು ಟ್ರ್ಯಾಕ್ಟರ್‌ ಕೊಡಿಸುವಂತೆ ಕೇಳುತ್ತಿದ್ದಾರೆ. ಕೆಲವರು ಸಮೀಪದ ಪಟ್ಟಣ, ನಗರಗಳಲ್ಲಿ ನಿವೇಶನ ಕೊಡಿಸುವಂತೆ ಬೇಡಿಕೆ ಇಡುತ್ತಿದ್ದಾರೆ. ಇಲ್ಲವಾದಲ್ಲಿ 10-15 ಲಕ್ಷದವರೆಗೆ ನೀಡಿದರೆ ನಿಮಗೆ ಬೆಂಬಲ ಖಚಿತ ಎನ್ನುವುದು ಸದಸ್ಯರ ನಿಲುವು. ಆದರೆ, ಅಧ್ಯಕ್ಷ ಸ್ಥಾನಾಕಾಂಕ್ಷಿಗಳು ತಮ್ಮಿಂದ ಎಷ್ಟು ಹಣ ನೀಡಲು ಸಾಧ್ಯವೋ ಅಷ್ಟನ್ನು ಹೇಳಿ ಕೈ ತೊಳೆದುಕೊಂಡರೆ ಕೆಲವರು ಅವರಿಗಿಂತ ತುಸು ಹೆಚ್ಚು ಹಣ ನೀಡುವ ಭರವಸೆ ನೀಡುತ್ತಿದ್ದಾರೆ.

ಇಲ್ಲೂ ರೆಸಾರ್ಟ್‌ ರಾಜಕಾರಣ: ವಿಧಾನಸಭೆ ಚುನಾವಣೆಗಳಲ್ಲಿ ಮಾತ್ರ ಕಂಡು ಬರುತ್ತಿದ್ದ ರೆಸಾರ್ಟ್‌ ರಾಜಕಾರಣ ಹಳ್ಳಿಗಳಿಗೂ ವಿಸ್ತರಿಸಿದೆ. ಬಹುತೇಕ ಚುನಾಯಿತ ಸದಸ್ಯರು ಪ್ರವಾಸದಲ್ಲಿದ್ದು, ದೊಡ್ಡ ದೊಡ್ಡ ಹೋಟೆಲ್‌ ರೆಸಾರ್ಟ್‌ಗಳಲ್ಲಿ ಮಜಾ ಮಾಡುತ್ತಿದ್ದಾರೆ. ಕಲಬುರಗಿ, ಬಳ್ಳಾರಿ, ಸಮೀಪದ ಹೈದರಾಬಾದ್‌, ಕರ್ನೂಲ್‌ ಸೇರಿದಂತೆ ವಿವಿಧೆಡೆ ಪ್ರವಾಸ ತೆರಳಿದ್ದು, ಅಲ್ಲೆಲ್ಲ ದೊಡ್ಡ ಹೋಟೆಲ್‌ಗ‌ಳಲ್ಲೇ ಉಳಿಯುತ್ತಿದ್ದಾರೆ. ಇತ್ತ ಗ್ರಾಮಗಳಲ್ಲೂ ಕುಟುಂಬಸ್ಥರಿಗೆ, ಸಂಬಂಧಿ ಕರಿಗೂನಿತ್ಯ ಊಟೋಪಚಾರದ ವ್ಯವಸ್ಥೆ ಮಾಡಿಸುತ್ತಿದ್ದು, ಸಾವಿರಾರು ರೂ. ಬಿಲ್‌ ಕಟ್ಟುವಂತಾಗಿದೆ ಎನ್ನುತ್ತಾರೆ ಆಕಾಂಕ್ಷಿಗಳು.

ಅಪ್ಲಿಕೇಶನ್‌ ಮೂಲಕ ಆಯ್ಕೆ: ಇಷ್ಟು ವರ್ಷಗಳ ಕಾಲ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ಸಿಬ್ಬಂದಿಯೇ ಸಿದ್ಧಪಡಿಸುತ್ತಿದ್ದರು. ಈ ಬಾರಿ ಎನ್‌ಐಸಿ ಅಪ್ಲಿಕೇಶನ್‌ ಮೂಲಕವೇ ಮೀಸಲಾತಿ ಸಿದ್ಧಪಡಿಸುವಂತೆ ಚುನಾವಣೆ ಆಯೋಗ ನಿರ್ದೇಶನ ನೀಡಿದೆ. ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಇದೇ ರೀತಿ ಸಿದ್ಧಪಡಿಸಿದ್ದು, ಜಿಲ್ಲೆಯಲ್ಲೂ ಅದೇ ಮಾದರಿ ಅನುಸರಿಸಲು ಸೂಚಿಸಲಾಗಿದೆ.

ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ತರಬೇತಿ, ಬೂತ್‌ಗಳ ಹಂಚಿಕೆ ಸೇರಿದಂತೆ ಇತರ ಮಾಹಿತಿ ರವಾನಿಸಲು ಈ ಎನ್‌ಐಸಿ ಅಪ್ಲಿಕೇಶನ್‌ ಬಳಸಲಾಗುತ್ತಿತ್ತು. ಈಗ ಅದನ್ನು ಮೀಸಲಾತಿ ಸಿದ್ಧಪಡಿಸಲು ಬಳಸುತ್ತಿರುವುದು ಗಮನಾರ್ಹ. ಈ ನಿಟ್ಟಿನಲ್ಲಿ ತಾಲೂಕುವಾರು ಮೀಸಲಾತಿ ಪ್ರಕಟಗೊಳಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಈವರೆಗೂ ಯಾವ ಪಂಚಾಯಿತಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಯಾವ ಜಾತಿಗೆ ಮೀಸಲಾಗಿದೆ ಎಂಬ ಮಾಹಿತಿ ಇಲ್ಲ. ಹೆಚ್ಚು ಜನಸಂಖ್ಯೆ ಹಾಗೂ ಸದಸ್ಯರನ್ನು ಆಧರಿಸಿ ಮೀಸಲಾತಿ ಸಿಗಬಹುದು ಎಂಬ ಲೆಕ್ಕಾಚಾರ ಮಾತ್ರ ಇದೆ. ಇದೇ ಕಾರಣಕ್ಕೆ ನಮಗೆ ಸಿಗಬಹುದು ಎನ್ನುವ ವಿಶ್ವಾಸದಲ್ಲಿ ಹಣವನ್ನು ನೀರಿನಂತೆ ಖರ್ಚು ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಗೆಲ್ಲಲು ಐದಾರು ಲಕ್ಷ ಖರ್ಚು ಮಾಡಿಕೊಂಡಿರುವ ಸದಸ್ಯರು ಅಧ್ಯಕ್ಷ ಸ್ಥಾನಕ್ಕಾಗಿ ಹಣ ಸುರಿಯುತ್ತಿರುವುದು ವಿಪರ್ಯಾಸ.

ಇದನ್ನೂ ಓದಿ:ಪತ್ರಿಕೆ ಹಂಚುವ ಹುಡುಗರನ್ನು ಗೌರವಿಸಿ

ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಇನ್ನೂ ದಿನಾಂಕ ನಿಗದಿಯಾಗಿಲ್ಲ. ಹಳೇ ಪದ್ಧತಿ ಬಿಟ್ಟು ಅಪ್ಲಿಕೇಶನ್‌ ಮೂಲಕ ಸಿದ್ಧಪಡಿಸಲು ಚುನಾವಣೆ ಆಯೋಗ ಸೂಚಿಸಿದೆ. ಅದೇ ಮಾದರಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಿನಾಂಕ ಇನ್ನೂ ಖಚಿತಗೊಂಡಿಲ್ಲ.

ದುರಗೇಶ, ಅಪರ ಜಿಲ್ಲಾಧಿಕಾರಿ, ರಾಯಚೂರು

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.