ನೀರು ಬಿಡುಗಡೆಗೆ ಒತ್ತಡ ಹೇರಿ


Team Udayavani, Aug 29, 2017, 2:51 PM IST

ray.jpg

ಮಸ್ಕಿ: ಆ.29ರಂದು ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಭ್ರಮರಾಂಬದೇವಿ ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬಹುತೇಕ ರೈತ ಮುಖಂಡರು, ರೈತರು 29ರಂದು ನಡೆಯುವ ಐಸಿಸಿ ಸಭೆಯಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಪ್ರತಾಪಗೌಡ ಪಾಟೀಲರಿಗೆ ಆಗ್ರಹಿಸಿದರು. ಐಸಿಸಿ ಸಭೆ ಹಿನ್ನೆಲೆಯಲ್ಲಿ ಶಾಸಕ ಪ್ರತಾಪಗೌಡ ಪಾಟೀಲರ ನೇತೃತ್ವದಲ್ಲಿ ಸೋಮವಾರ ಭ್ರಮರಾಂಬದೇವಿ ದೇವಸ್ಥಾನದಲ್ಲಿ ರೈತರ ಅಭಿಪ್ರಾಯ ಸಂಗ್ರಹಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿತ್ತು. ರೈತ ಮುಖಂಡರೊಬ್ಬರು ಮಾತನಾಡಿ, ಈಗ ಭತ್ತ ಬೆಳೆಯಲು ಸಸಿಗಳನ್ನು ನಾಟಿ ಮಾಡಲಾಗಿದೆ. ನಾಲೆಗೆ ನೀರು ಬಿಡುವುದಿದ್ದಲ್ಲಿ ಐಸಿಸಿ ಸಭೆ ಮುಗಿದ ತಕ್ಷಣ ನೀರು ಬಿಡುವಂತೆ ಶಾಸಕರು
ಒತ್ತಾಯಿಸಬೇಕು. ಒಂದು ವೇಳೆ ನಾಲೆಗೆ ನೀರು ಹರಿಸದಿದ್ದಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರೊಂದಿಗೆ ಹೋರಾಟದಲ್ಲಿ ಭಾಗಿಯಾಗಬೇಕೆಂದು ಒತ್ತಾಯಿಸಿದರು. ರೈತ ಮುಖಂಡ ಬಸವರಾಜಸ್ವಾಮಿ ಹಸಮಕಲ್‌ ಮಾತನಾಡಿ, ಮಸ್ಕಿ ಹಾಗೂ ಸಿಂಧನೂರು ಶಾಸಕರು ಐಸಿಸಿ ಸಭೆಯಲ್ಲಿ ನೀರು ಹರಿಸುವ ಬಗ್ಗೆ ಗಟ್ಟಿ ಧ್ವನಿಯಲ್ಲಿ ಮಾತನಾಡುವದಿಲ್ಲ ಎನ್ನುವ ಅಭಿಪ್ರಾಯವಿದೆ. ಆದ ಕಾರಣ ಶಾಸಕರು ನಾಳೆ ನಡೆಯುವ ಐಸಿಸಿ ಸಭೆಯಲ್ಲಿ ರೈತರ ಅಭಿಪ್ರಾಯವನ್ನು ಸಭೆ ಗಮನಕ್ಕೆ ತಂದು ನೀರು ಹರಿಸಲು ಒತ್ತಾಯಿಸಬೇಕೆಂದು ವಿನಂತಿಸಿದರು. ರೈತ ಮುಖಂಡ ಅಮರೇಶ ಮಾತನಾಡಿ, ನಮ್ಮ ಜಮೀನುಗಳು ಭತ್ತ ಬೆಳೆಯುವುದಕ್ಕೆ ಮಾತ್ರ ಶಕ್ತವಾಗಿವೆ. ಬಿಳಿಜೋಳ ಹಾಗೂ ಸೂರ್ಯಪಾನದಂತಹ ಬೆಳೆಗಳನ್ನು ಬೆಳೆಯಲು ಸಾದ್ಯವಿಲ್ಲ. ಆದ್ದರಿಂದ ಸಭೆಯಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಶಾಸಕರು ಆಗ್ರಹಿಸಬೇಕೆಂದರು. ರೈತ ಮುಖಂಡರು ಮಾತನಾಡಿ, ನೀರು ಬಿಡುವುದಿದ್ದರೆ ನಾಳೆ
ನಡೆಯುವ ಐಸಿಸಿ ಸಭೆ ಮುಕ್ತಾಯವಾದ ಕೂಡಲೇ ನೀರು ಹರಿಸಬೇಕು. ಇಲ್ಲದಿದ್ದರೆ ನಮಗೆ ನೀರೇ ಬೇಡ. ಸರ್ಕಾರ ಮೊದಲು ನೀರು ಹರಿಸಲು ಕ್ರಮ ಕೈಗೊಳ್ಳಲಿ. ಯಾವ ಬೆಳೆ ಬೆಳೆಯಬೇಕೆಂಬ ನಿರ್ಧಾರ ರೈತರಿಗೆ ಬಿಟ್ಟ ವಿಷಯ. ಇದರ ಬಗ್ಗೆ ಸರಕಾರ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಸಭೆಯಲ್ಲಿ ಮುಖಂಡರೂ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ರೈತರು ಭಾಗವಹಿಸಿದ್ದರು. ನೀರು ಹರಿಸಲು ಪ್ರಯತ್ನ: ರೈತರು, ರೈತ ಮುಖಂಡರ ಅಭಿಪ್ರಾಯ ಆಲಿಸಿದ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಪ್ರಕೃತಿ ವಿಕೋಪದ ಮುಂದೆ ಯಾವ ಸರಕಾರಗಳು ಏನೂ ಮಾಡಲು ಆಗುವುದಿಲ್ಲ. ಕಳೆದ ಮೂರು ವರ್ಷ ಸತತ ಬರದಿಂದ ರೈತರು ಸಂಕಷ್ಟದಲ್ಲಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ರೈತರ ಬಗ್ಗೆ ಸರಕಾರಕ್ಕೆ ಕಳಕಳಿ ಇದೆ. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರಕ್ಕೆ ಬರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಭತ್ತ ಬೆಳೆಯಲು ಎಕರೆಗೆ 25ರಿಂದ ಮೂವತ್ತೂ ಸಾವಿರ ವೆಚ್ಚ ಮಾಡಬೇಕಾದ ಪರಿಸ್ಥಿತಿ ಇದ್ದು, ನೀರಿನ ಸಂಕಷ್ಟ ಎದುರಾದಲ್ಲಿ ರೈತರು ಸಂಕಷ್ಟಕೊಳಗಾಗಬಾರದು ಎಂಬುದೇ ನಮ್ಮ ಉದ್ದೇಶವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ಎಡನಾಲೆಯ ರೈತರು ನಮಗೆ ಒಂದೇ. ಇದರಲ್ಲಿ ಕೆಳ ಭಾಗ, ಮೇಲಾºಗ ಎಂಬುದರ ತಾರತಮ್ಯ ಮಾಡಲು ಬರುವುದಿಲ್ಲ ಎಂದರು. ಬಹುಸಂಖ್ಯಾತ ರೈತರು ಐಸಿಸಿ ಸಭೆಯ ನಂತರ ಕೂಡಲೇ ಎಡದಂಡೆ ನಾಲೆಗೆ ನೀರು ಹರಿಸಲು ಆಗ್ರಹಿಸಿದ್ದು, ಈ ಬಗ್ಗೆ ಐಸಿಸಿ ಸಭೆಯಲ್ಲಿ ಪ್ರಸ್ತಾಪಿಸಿ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.