ಬೆಲೆ ಕುಸಿತ; ಚೆಂಡು ಹೂ ಬೆಳೆಗಾರರಲ್ಲಿ ಆತಂಕ


Team Udayavani, Oct 15, 2021, 11:10 AM IST

3

ದೇವದುರ್ಗ: ಚೆಂಡು ಹೂವಿಗೆ ಏಕಾಏಕಿ ಬೆಲೆ ಕುಸಿದ ಹಿನ್ನೆಲೆ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹತ್ತಾರು ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದ ಅನ್ನದಾತರೀಗ ಆರ್ಥಿಕ ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ.

ಸತತ ಮಳೆಯಿಂದ ತೇವಾಂಶ ಹೆಚ್ಚಾಗಿ ಬೆಳೆಗೆ ಕೊಳೆ ರೋಗಬಾಧೆ ಕಾಡುತ್ತಿದೆ. ದಸರಾ, ದೀಪಾವಳಿ ಸೀಸನ್‌ನಲ್ಲಿ ಬೆಳೆಗೆ ರೋಗ ಕಾಡುತ್ತಿರುವುದರಿಂದ ಮಾಡಿದ ಖರ್ಚು ಕೂಡ ಬಾರದ ಸ್ಥಿತಿ ಎದುರಾಗಿದೆ. ಆದರೀಗ ಪ್ರತಿ ಕೆ.ಜಿಗೆ 40-50 ರೂ. ದರಕ್ಕೆ ಮಾರಾಟವಾಗುತ್ತಿದೆ. ಕಳೆದ ವರ್ಷ ಕೋವಿಡ್‌ ಹಿನ್ನೆಲೆಯಲ್ಲಿ ಹಬ್ಬ-ಹರಿದಿನ, ಕಾರ್ಯಕ್ರಮ, ಸಮಾರಂಭಗಳು ನಡೆಯದ್ದರಿಂದ ಕೆ.ಜಿಗೆ 150 ರೂ. ಅಧಿಕ ದಾಟಿದ ಬೆಲೆ ಸೋಂಕಿನ ಪ್ರಕರಣ ತಗ್ಗಿದ ಹಿನ್ನೆಲೆ ಈ ಬಾರಿ ಚೆಂಡು ಹೂವಿಗೆ ಬೆಲೆ ಕುಸಿದಿದೆ.

ಜಾಲಹಳ್ಳಿ, ಬುಂಕಲದೊಡ್ಡಿ, ಕೋತಿಗುಡ್ಡ, ಅರಕೇರಾ, ಕೊಪ್ಪರ ಸೇರಿ ಇತರೆ ಗ್ರಾಮಗಳಲ್ಲಿ ರೈತರು ಚೆಂಡು ಹೂ ಬೆಳೆದಿದ್ದಾರೆ. ತಿಂಗಳಲ್ಲಿ ಸತತವಾಗಿ ಸುರಿದ ಮಳೆಯಿಂದ ಕೊಳೆ ರೋಗಬಾಧೆ ಆವರಿಸಿದೆ. ಮಾರುಕಟ್ಟೆಯಲ್ಲಿ ಚೆಂಡು ಹೂ ಬೆಲೆ ಕುಸಿತ ಹಿನ್ನೆಲೆಯಲ್ಲಿ ದಸರಾ ಹಬ್ಬದ ಮೊದಲೇ ಬೆಳೆಗಾರರಿಗೆ ನಿರಾಸೆ ತಂದಿದೆ.

ಕಳೆದ ದಸರಾ-ದೀಪಾವಳಿ ಸಂದರ್ಭದಲ್ಲಿ ಚೆಂಡು ಹೂ ಪ್ರತಿ ಕೆ.ಜಿಗೆ 150-200 ರೂ.ವರೆಗೆ ಮಾರಾಟವಾಗಿತ್ತು. ಆದರೀಗ ರೋಗದ ಭೀತಿಯಿಂದ ಬೆಳೆಗಾರರ ಮನಸ್ಥಿತಿ ಕಮರಿ ಹೋಗಿದೆ. ತೋಟಗಾರಿಗೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟದ ವರದಿ ಜಿಲ್ಲಾಡಳಿತಕ್ಕೆ ನೀಡಿದ್ದಾರೆ.

ಚೆಂಡು ಹೂ ಬೆಳೆಗಾರರ ಬ್ಯಾಂಕ್‌ ಖಾತೆ ಪರಿಹಾರದ ಹಣ ಜಮಾ ಮಾಡುವ ಭರವಸೆ ಈಡೇರಿಲ್ಲ. ಕಳೆದ ವರ್ಷ ನಷ್ಟ ಅನುಭವಿಸಿದ ಹಲವು ರೈತರು ಪರಿಹಾರಕ್ಕಾಗಿ ಇನ್ನೂ ತಾಲೂಕು ಕಚೇರಿಗೆ ಅಲೆಯುತ್ತಿದ್ದಾರೆ. ಸೋಂಕಿನ ಪ್ರಮಾಣ ತಗ್ಗಿದ್ದರೂ ಚೆಂಡು ಹೂವಿನ ಬೆಲೆ ಮಾತ್ರ ಕುಸಿದಿದೆ. ಹೂವಿನ ಬೆಲೆ ಇಳಿಕೆಯಾಗಿದ್ದು, ರೈತರನ್ನು ಕಂಗಾಲಾಗಿಸಿದೆ. ಹೂವುಗಳನ್ನು ಕಟಾವು ಮಾಡಿದ ಕೂಲಿ ಸಹ ದಕ್ಕದಂತಾಗಿದೆ. ಹೀಗಾಗಿ ಪ್ರತಿ ವರ್ಷ ಒಂದಿಲ್ಲೊಂದು ಸಮಸ್ಯೆಯಿಂದ ನೂರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ.

ಇದನ್ನೂ ಓದಿ: ಸರ್ಕಾರಿ ಡಿಗ್ರಿ ಕಾಲೇಜಿಗೆ ಸವಾಲಾದ ದಾಖಲಾತಿ

ಇನ್ನು ಅಲ್ಪಸ್ವಲ್ಪ ಚೆಂಡು ಹೂವು ಕೈಗೆ ಬರುತ್ತಿದ್ದು, ಮೋಡ ಕವಿದ ವಾತಾವರಣ ಹಿನ್ನೆಲೆ ಮತ್ತೆ ಚಿಂತೆ ಹುಟ್ಟಿಸಿದೆ. ಕೊಳೆ ರೋಗ ಬಾಧೆಯಿಂದ ತತ್ತರಿಸಿದ ರೈತರಿಗೆ ತಾಲೂಕು ಆಡಳಿತವೇ ಪರಿಹಾರ ನೀಡಬೇಕೆನ್ನುವ ಕೂಗು ರೈತಾಪಿ ವಲಯದಲ್ಲಿ ಕೇಳಿ ಬರುತ್ತಿದೆ. ಹಲವು ಗ್ರಾಮಗಳಲ್ಲಿ ರೈತರು ಚೆಂಡು ಹೂವು ಬೆಳೆದಿದ್ದಾರೆ. ಸತತ ಮಳೆಯಿಂದ ಬೆಳೆಗೆ ಕೊಳೆ ರೋಗಬಾಧೆ ಆವರಿಸಿದೆ. ಈ ಬಾರಿ ಬೆಲೆ ಇಲ್ಲದ ಕಾರಣ ಬೆಳೆಗಾರರಿಗೆ ಆತಂಕ ತಂದಿದೆ. -ಭೀಮರಾವ್‌ ಕುಂಬಾರ, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಈ ಬಾರಿ ಸತತ ಮಳೆಯಿಂದ ಚೆಂಡು ಹೂವಿಗೆ ಕೊಳ ರೋಗಬಾಧೆ ಕಾಡುತ್ತಿದೆ. ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಏಕಾಏಕಿ ಬೆಲೆ ಕುಸಿದಿದೆ. ಹಾಕಿದ ಹಣವೂ ಬಾರಲಾರದ ಸ್ಥಿತಿ ಎದುರಾಗಿದೆ. -ಅಂಬರೇಶ ಅರಕೇರಾ, ಚೆಂಡು ಹೂ ಬೆಳೆಗಾರ

-ನಾಗರಾಜ ತೇಲ್ಕರ್‌

 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.