ಸಮಸ್ಯೆಗಳ ಆಗರ ದೇವದುರ್ಗ ಆಸ್ಪತ್ರೆ

ಸ್ವಂತ ವಾಹನದಲ್ಲೇ ವೈದ್ಯರ ಅಲೆದಾಟ

Team Udayavani, Aug 4, 2020, 2:53 PM IST

ಸಮಸ್ಯೆಗಳ ಆಗರ ದೇವದುರ್ಗ ಆಸ್ಪತ್ರೆ

ದೇವದುರ್ಗ: ಸ್ಥಳೀಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ.

ಒಂದೇ ಆಂಬ್ಯುಲೆನ್ಸ್‌: ಇಲ್ಲಿನ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುತ್ತಲೂ 40ಕ್ಕೂ ಹೆಚ್ಚು ಹಳ್ಳಿಗಳ ಜನರು ಚಿಕಿತ್ಸೆಗೆ ಬರುತ್ತಾರೆ. ಎಲ್ಲರಿಗೂ ನೂರು ಹಾಸಿಗೆ ಆಸ್ಪತ್ರೆಯೇ ಆಸರೆಯಾಗಿದೆ. ತುರ್ತು ಪರಿಸ್ಥಿತಿ ಸಂದರ್ಭ ಒಂದೇ ಅಂಬ್ಯುಲೆನ್ಸ್‌ ಇರುವುದರಿಂದ ಆಗಾಗ ಸಮಸ್ಯೆ ಕಂಡು ಬರುತ್ತದೆ. ಮೂರು ಅಂಬ್ಯುಲೆನ್ಸ್‌ ಸೌಲಭ್ಯ ಹೊಂದಿದೆ. ಆದರೆ ಒಂದೇ ಇರುವ ಕಾರಣಕ್ಕೆ ರೋಗಿಗಳನ್ನು ಕೆರೆದ್ಯೊಯಲು ನಗು ಮಗು ಅಂಬ್ಯುಲೆನ್ಸ್‌ ಅನಿವಾರ್ಯವಾಗಿದೆ. ಗರ್ಭಿಣಿ ಮತ್ತು ಬಾಣಂತಿಯರಿಗೆ ವಿಶೇಷವಾಗಿದ್ದ, ಅಂಬ್ಯುಲೆನ್ಸ್‌ ಇದೀಗ ಎಲ್ಲದಕ್ಕೂ ಬಳಕೆ ಆಗುತ್ತಿದೆ.

ಮೂಲೆಗೆ ಸೇರಿದ ವಾಹನ: ತಾಲೂಕು ಆರೋಗ್ಯ ವೈದ್ಯಾಧಿಕಾರಿ ಬಳಸುತ್ತಿರುವ ಸರಕಾರಿ ವಾಹನ ಕಳೆದ ಆರೇಳು ತಿಂಗಳಿಂದ ದುರಸ್ತಿಯಲ್ಲಿರುವ ಕಾರಣ ಮೂಲೆಗೆ ಸೇರಿದೆ. ವೈದ್ಯರು ಸ್ವಂತ ವಾಹನದಲ್ಲೇ ಹಳ್ಳಿಗಳಿಗೆ, ಕೋವಿಡ್ ಚಿಕಿತ್ಸೆ ಕೇಂದ್ರಗಳಿಗೆ ತೆರಳುತ್ತಿದ್ದಾರೆ.

ವೈದ್ಯರ ಕೊರತೆ: ಸ್ಥಳೀಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕೆಲ ತಜ್ಞ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಬಡರೋಗಿಗಳು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ನರರೋಗ, ಕಿವಿ, ಮೂಗು ಗಂಟಲು, ಚರ್ಮ ರೋಗ, ನೇತ್ರ ತಜ್ಞ ಸೇರಿ ವೈದ್ಯರ ಸಮಸ್ಯೆ ಬಡ ರೋಗಿಗಳಿಗೆ ಕಾಡುತ್ತಿದೆ. ನಮ್ಮನಾಳುವ ಜನಪ್ರತಿನಿಧಿಗಳು ವೈದ್ಯರ ಕೊರತೆ ಹುದ್ದೆ ಭರ್ತಿ ಮಾಡುವಲ್ಲಿ ವಿಫರಾಗಿದ್ದಾರೆ. ತಾಲೂಕಿನ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಸಮುದಾಯ ಕೇಂದ್ರಗಳಲ್ಲಿ ಕೆಲ ವೈದ್ಯರ ಸಮಸ್ಯೆ ಬಿಗಡಾಯಿಸಿದೆ. ಜಾಲಹಳ್ಳಿ ಮೂರು ಹುದ್ದೆಯಲ್ಲಿ ಒಬ್ಬರೇ ವೈದ್ಯರು. ರಾಮದುರ್ಗ, ಗಲಗ, ಮಸರಕಲ್‌, ಚಿಚೋಂಡಿ ಸೇರಿ ಇತರೆ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹುದ್ದೆಗಳು ಖಾಲಿ ಇವೆ. ಎಬಿಬಿಎಸ್‌ ವೈದ್ಯರು ಇದ್ದು, ಸ್ಥಳೀಯ ಆಸ್ಪತ್ರೆಗೆ ಎರವಲ್‌ ಸೇವೆಯಲ್ಲಿ ತೊಡಗಿದ್ದಾರೆ. ಆಯುಷ್‌ ವೈದ್ಯರಿಂದ ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ಸೌಲಭ್ಯ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸ್ಟಾಫ್‌ನರ್ಸ್‌ಗಳೇ ವೈದ್ಯರಾಗಿದ್ದಾರೆ. ರಾತ್ರಿ ಪಾಳೆಯದಲ್ಲಿ ನರ್ಸ್‌ಗಳು ಬಡರೋಗಿಗಳಿಗೆ ಸೇವೆಗೆ ಸಿಗುತ್ತಿಲ್ಲ ಎಂಬ ಆರೋಪದ ಕೂಗು ಕೇಳಿಬರುತ್ತಿದೆ.

ತಜ್ಞ ವೈದ್ಯರ ಕೊರತೆ ಆಂಬ್ಯುಲೆನ್ಸ್‌ ಸಮಸ್ಯೆ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಗ್ರಾಮೀಣ ಭಾಗದಲ್ಲಿ ಸಮಸ್ಯೆ ಇದ್ದು, ಇರುವ ವೈದ್ಯರಿಂದ ಬಡರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. –ಡಾ.ಬನದೇಶ್ವರ, ತಾಲೂಕು ಆರೋಗ್ಯಾಧಿಕಾರಿ.

ಗ್ರಾಮೀಣ ಭಾಗದಲ್ಲಿ ವೈದ್ಯರ ಸಮಸ್ಯೆ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಅತಿಯಾಗಿದೆ. ನಕಲಿ ವೈದ್ಯರ ಹಾವಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಬೇಕು. –ಅಮರಪ್ಪ, ನಿವೃತ್ತ ಶಿಕ್ಷಕರು.

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.