ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Apr 1, 2022, 3:02 PM IST
ಬೀದರ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಕುಂಬಾರವಾಡ ಕ್ರಾಸ್ ಸಮೀಪ ಪ್ರತಿಭಟನೆ ನಡೆಸಿದರು.
ರಸ್ತೆ ಪಕ್ಕದಲ್ಲಿ ಬೈಕ್, ಕಾರು ಹಾಗೂ ಸಿಲಿಂಡರ್ ಇಟ್ಟು ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ಆಡಳಿತ ಅವಧಿಯಲ್ಲಿ ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಕಾರಣ ಜನಸಾಮಾನ್ಯರ ಬದುಕು ಕಷ್ಟಕರವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಹಲವಾರು ಬಾರಿ ಬೆಲೆ ಏರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಕೂಡ ಬೆಲೆ ಏರಿಕೆಯಿಂದ ಹೊರತಾಗಿಲ್ಲ. ಹೀಗಾಗಿ “ಅಚ್ಛೆ ದಿನ್’ ಯಾರಿಗೂ ಬಂದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬುಡಾ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಟೀಕಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ಅಮರ ಸೂರ್ಯವಂಶಿ, ನಾಗಸೇನ ಗಾಯಕವಾಡ್, ನವೀನ್ ಡ್ಯಾನಿಯಲ್, ಜಾಕೋಬ್ ಮುಸ್ತಾಪೂರಕರ್, ಪ್ರವೀಣಕುಮಾರ ಬಿ.ಕೆ.ಶರಣಪ್ಪ ಯದಲಾಪುರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ