ಸಚಿವರ ಕಾರಿಗೆ ಮುತ್ತಿಗೆ ಯತ್ನ
ಸಚಿವ ಪ್ರಭು ಚವ್ಹಾಣ ಕಾರಿಗೆ ಮುತ್ತಿಗೆ ಹಾಕಲು ಯತ್ನ
Team Udayavani, Oct 8, 2021, 12:04 PM IST
ರಾಯಚೂರು: ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ ಹೇಳಿಕೆ ನೀಡಿದ್ದರಿಂದ ಗುರುವಾರ ನಗರಕ್ಕೆ ಆಗಮಿಸಿ ಸಚಿವ ಪ್ರಭು ಚವ್ಹಾಣ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಸಚಿವರ ಆಗಮನದ ಮಾಹಿತಿ ತಿಳಿದಿ ಮಾದಿಗ ದಂಡೋರಾ ಸಮಿತಿ ಮುಖಂಡರು ಡಿಸಿ ಕಚೇರಿ ಎದುರು ಜಮಾಯಿಸಿದ್ದರು. ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಡಿಸಿ ಕಚೇರಿ ಎದುರಿನ ಉದ್ಯಾನದಲ್ಲಿ ತಡೆ ಹಿಡಿದರು.
ಸಚಿವರ ಕಾರು ಬರುತ್ತಿದ್ದಂತೆ ಬೇರೆ ಮಾರ್ಗದಿಂದ ಬಂದ ಐದಾರು ಜನ ಪ್ರತಿಭಟನಾಕಾರರು ಕಾರು ಅಡ್ಡಗಟ್ಟಿ, ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ಹಾಕಲು ಯತ್ನಿಸಿದರು. ಕೂಡಲೇ ಅವರನ್ನು ವಶಕ್ಕೆ ಪಡೆದ ಪೊಲೀಸರು, ವಾಹನದಲ್ಲಿ ಕರೆದೊಯ್ದರು.
ಕೊನೆಗೆ ಸಚಿವರು ಪ್ರಗತಿ ಪರಿಶೀಲನೆ ಸಭೆ ನಡೆಸಿ ಡಿಸಿ ಕಚೇರಿ ಆವರಣದ 2ನೇ ಗೇಟ್ ಮೂಲಕ ತೆರಳುವಾಗಲೂ ಮಾದಿಗ ದಂಡೋರ ಹೋರಾಟ ಸಮಿತಿ ಸದಸ್ಯರು ವಾಹನಗಳಿಗೆ ಅಡ್ಡಗಟ್ಟಲು ಯತ್ನಿಸಿದರು. ಅಷ್ಟೊತ್ತಿಗಾಗಲೇ ಪೊಲೀಸರು ಅವರನ್ನು ತಡೆದರು. ಮತ್ತೆ ಎಲ್ಲ ಪ್ರತಿಭಟನಾಕಾರರನ್ನು
ವಶಕ್ಕೆ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ