ಕೃಷಿ ಮೇಳಕ್ಕೆ ವಿಧ್ಯುಕ್ತ ಚಾಲನೆ


Team Udayavani, Dec 9, 2017, 3:54 PM IST

ray-2.jpg

ರಾಯಚೂರು: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿಮೇಳಕ್ಕೆ ನವಲಕಲ್‌ ಬೃಹನ್ಮಠದ ಅಭಿನವ ಶ್ರೀ ಸೋಮನಾಥ ಶಿವಾಚಾರ್ಯರು, ಗೊಲಪಲ್ಲಿ ಮಠದ ಶ್ರೀ ವರದಾನಂದ ಸ್ವಾಮೀಜಿ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ನಂತರ ಮಳಿಗೆಗಳ ಉದ್ಘಾಟನೆ ನೆರವೇರಿಸಿದರು. ನೆಲ ಜಲ ಸಿರಿ, ಧಾನ್ಯ ಸಿರಿ, ಜೀವನ ಸಿರಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷವೂ ನಾಲ್ಕು ದಿನಗಳ ಕಾಲ ಮೇಳ ಆಯೋಜಿಸಲಾಗಿದೆ.

ವಿವಿಯಿಂದ ನಡೆಸಿದ ಪ್ರಯೋಗಗಳು, ಸಂಶೋಧನೆಗಳು, ರೈತರಿಗೆ ನೆರವಾಗುವಂಥ ಹಲವು ವಿಚಾರಗಳನ್ನು ಮೇಳಗಳಲ್ಲಿ ಪರಿಚಯಿಸಲಾಗುತ್ತಿದೆ. ಈ ಭಾಗದ ರೈತರಿಗೆ ಪೂರಕ ಮಾಹಿತಿ ನೀಡಲಾಗುತ್ತಿದೆ. ಮುಖ್ಯವಾಗಿ ಈ ಬಾರಿ ಸಾವಯವ ಸಿರಿ ಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಹುತೇಕ ಮಳಿಗೆಗಳಲ್ಲಿ ಸಿರಿ ಧಾನ್ಯಗಳಿಗೆ ಸಂಬಂಧಿಸಿದ ಮಾಹಿತಿ ಪ್ರಸ್ತುತಪಡಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವಿವಿ ಕುಲಪತಿ ಪಿ.ಎಂ.ಸಾಲಿಮಠ, ವರ್ಷದಿಂದ ವರ್ಷಕ್ಕೆ ಮೇಳಕ್ಕೆ ಬರುವವರ
ಸಂಖ್ಯೆ ಹೆಚ್ಚುತ್ತಿದೆ. ನಾವು ಕೂಡ ರೈತರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಮೇಳ ಆಯೋಜಿಸಲು ಯತ್ನಿಸುತ್ತಿದ್ದೇವೆ. ಈ ಭಾಗದಲ್ಲಿ ಶೇ.60, 70ರಷ್ಟು ರೈತಾಪಿ ಕುಟುಂಬಗಳೇ ಇವೆ. ಬಹುತೇಕ ಮಳೆಯಾಶ್ರಿತ ಕೃಷಿ ಪದ್ಧತಿಯಿದ್ದು, ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ಬರುವಂಥ ತಳಿಗಳನ್ನು ಪರಿಚಯಿಸಲಾಗಿದೆ. ಇದು ಕೇವಲ ಕೃಷಿಕರಿಗೆ ಮಾತ್ರವಲ್ಲ, ಕೃಷಿಯೇತರ ವರ್ಗಗಳಿಗೂ ಸಾಕಷ್ಟು ಮಾಹಿತಿ ನೀಡುವಂತಹ ಮೇಳವಾಗಿದೆ ಎಂದರು.

ಈ ಬಾರಿಯೂ ಸುಮಾರು 2.5 ಲಕ್ಷ ಜನರು ಆಗಮಿಸುವ ನಿರೀಕ್ಷೆ ಹೊಂದಿದ್ದೇವೆ. ಹೈ-ಕ ಭಾಗದ ಆರು ಜಿಲ್ಲೆಗಳಿಂದಲೂ ಕೃಷಿಕರು ಆಗಮಿಸುವರು. ಮೇಳದಲ್ಲಿ 215 ಮಳಿಗೆ ಸ್ಥಾಪಿಸಲಾಗಿದ್ದು, ಈ ಬಾರಿ ಸಿರಿ ಧಾನ್ಯಗಳ ಬಗ್ಗೆ ಹೆಚ್ಚು ಒಲವು ತೋರಿದ್ದೇವೆ. ರೈತರು ಮೇಳದ ಉಪಯೋಗ ಪಡೆಯಬೇಕು ಎಂದರು. ವಿವಿ ಆಡಳಿತ ಮಂಡಳಿ ಸದಸ್ಯರಾದ ಎಂ.ಶೇಖರಗೌಡ, ಅಶೋಕ ಅಲಬನೂರು, ಅಮರೇಶ ಬಲ್ಲಿದ, ಸಂಶೋಧನಾ ನಿರ್ದೇಶಕ ಐ. ಶಂಕರಗೌಡ ಸೇರಿ ಇತರರು ಇದ್ದರು.

ಹಲವು ಕಂಪನಿಗಳು ಕೃಷಿಗೆ ಪೂರಕವಾಗಿ ಕಂಡು ಹಿಡಿದ ನೂತನ ಯಂತ್ರಗಳ ಪ್ರಾತ್ಯಕ್ಷಿಕೆ ಆಯೋಜಿಸಿವೆ. ಮೇವು
ಕಟಾವು ಯಂತ್ರಗಳು, ಭತ್ತ ನಾಟಿ ಯಂತ್ರ, ಔಷಧ ಸಿಂಪರಣೆ ಸೇರಿ ಕಡಿಮೆ ಬೆಲೆಯಲ್ಲಿ ಹೆಚ್ಚು ಕೆಲಸ ಪಡೆಯುವಂಥ
ಯಂತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ. ಅದರೊಟ್ಟಿಗೆ ವಿವಿಧ ಹೊಸ ತಳಿಗಳ ಪರಿಚಯಿಸಲಾಗುತ್ತಿದೆ. ಮೊದಲ ದಿನ ಇನ್ನೂ ಜನರಿಗೆ ಮಾಹಿತಿ ಇರದ ಕಾರಣ ನಿರೀಕ್ಷಿತ ಮಟ್ಟದಲ್ಲಿ ಜನ ಬಂದಿರಲಿಲ್ಲ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.