ಮಸ್ಕಿಯಲ್ಲಿಂದು ಕನ್ನಡ ಸಾಹಿತ್ಯ ಸಮ್ಮೇಳನ
ಪಟ್ಟಣದಲ್ಲಿ ನಡೆಯುವ ಮೊದಲ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ರಥಕ್ಕೆ ಶನಿವಾರ ಚಾಲನೆ ನೀಡಲಾಯಿತು
Team Udayavani, Feb 14, 2021, 4:07 PM IST
ಮಸ್ಕಿ: ಮಸ್ಕಿ ಪಟ್ಟಣದಲ್ಲಿ ಇಂದು ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.
ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ಬೀದಿಗಳನ್ನು ಸಿಂಗರಿಸಲಾಗಿದೆ. ಪುರಸಭೆ ವ್ಯಾಪ್ತಿಯ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸ್ವತ್ಛತಾ ಕಾರ್ಯ ಪೂರೈಸಿದ್ದಾರೆ. ಸಮ್ಮೇಳನ ನಡೆಯುವ ಶ್ರೀಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನದಲ್ಲೂ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಅಕ್ಷರ ಜಾತ್ರೆಯ ಸಿದ್ಧತೆಗಳನ್ನು ಸಾಹಿತ್ಯಾಸಕ್ತರನ್ನು ಕೈ ಬಿಸಿ ಕರೆಯುತ್ತಿವೆ. ಇನ್ನು ಸಮ್ಮೇಳನದಲ್ಲಿ ಪುಸ್ತಕ ಮಾರಾಟ ಮಳಿಗೆ, ಗೋಷ್ಠಿಗಳಿಗೆಬೇಕಾದ ಸಿದ್ಧತೆ ಹಾಗೂ ಊಟಕ್ಕಾಗಿ ಪ್ರತ್ಯೇಕ ಹಾಲ್ನ ವ್ಯವಸ್ಥೆ ಮಾಡಲಾಗಿದೆ.
ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಪ್ರಚಾರ ರಥಕ್ಕೆ ಶನಿವಾರ ಗಚ್ಚಿನ ಮಠದ ವರರುದ್ರಮುನಿ ಸ್ವಾಮಿಗಳು ಚಾಲನೆ ನೀಡಿದ್ದು, ತಾಲೂಕಿನಾದ್ಯಂತ ನುಡಿ ಜಾತ್ರೆಯ ರಥ ಸಂಚರಿಸಿ ಜನರನ್ನು ಆಕರ್ಷಿಸಿದೆ. 2500 ಜನರ ನಿರೀಕ್ಷೆ: ಮಸ್ಕಿಯಲ್ಲಿ ಮೊದಲ ಸಾಹಿತ್ಯ ಸಮ್ಮೇಳನವಾಗಿದ್ದರಿಂದ ಎಲ್ಲರಲ್ಲೂ ಉತ್ಸಾಹ ಮತ್ತು ಹಲವು ನಿರೀಕ್ಷೆಗಳು ಮೂಡಿವೆ. ಸಮ್ಮೇಳನದಲ್ಲಿ ನಡೆಯುವ ಚರ್ಚೆ,ಗೋಷ್ಠಿ, ಬಹಿರಂಗ ಅವೇಶನವನ್ನು ವೀಕ್ಷಣೆ ಮಾಡುವುದು, ಸಾಂಸ್ಕೃತಿಕ, ಜನಪದ ಸಿರಿಯನ್ನು ಕಣ್ತುಂಬಿಕೊಳ್ಳಲು ಸಾಹಿತ್ಯಾಸಕ್ತರು ಹೆಚ್ಚು ಉತ್ಸಾಹ ಭರಿತರಾಗಿದ್ಧಾರೆ. ಸಾಹಿತ್ಯ ಸಮ್ಮೇಳನಕ್ಕೆ ಅಂದಾಜು 2500ಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಸಮ್ಮೇಳನಕ್ಕೆ ಬರುವ ಎಲ್ಲ ಕನ್ನಡ ಮನಸುಗಳಹಸಿವು ತಣಿಸುವುದಕ್ಕೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?