ರಾಯಚೂರು: ನಗರಾಭಿವೃದ್ದಿ ಕೋಶ ಇಇ ಮನೆ ಮೇಲೆ ಎಸಿಬಿ ದಾಳಿ
Team Udayavani, Jun 10, 2020, 10:29 AM IST
ರಾಯಚೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಸಹಾಯಕ ಇಂಜಿನಿಯರ್ ಮಲ್ಲಿಕಾರ್ಜುನ ಗೋಪಿಶೆಟ್ಟಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಮನೆ, ಕಚೇರಿ, ಪೆಟ್ರೊಲ್ ಬಂಕ್, ಟ್ರಾಕ್ಟರ್ ಶೋರಂ ಮೇಲೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಸರ್ಕಾರಿ ಕೆಲಸದಲ್ಲಿದ್ದರೂ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ದಾಳಿ ನಡೆಸಲಾಗಿದೆ. ರಾಯಚೂರು ಡಿವೈಎಸ್ಪಿ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ ನಾಲ್ಕು ತಂಡ ದಾಳಿಯಲ್ಲಿ ತೊಡಗಿವೆ.
ಜಿಲ್ಲಾಧಿಕಾರಿ ಆವರಣದಲ್ಲಿನ ಕಚೇರಿ, ಐಡಿಎಸ್ಎಂಟಿ ಲೇಔಟ್ ನಲ್ಲಿರುವ ಮನೆ ಹಾಗು ಟ್ರಾಕ್ಟರ್ ಶೋರಂ, ಪೆಟ್ರೋಲ್ ಪಂಪ್ ಮೇಲೆ ದಾಳಿ ನಡೆಸಲಾಗಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.