Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ
Team Udayavani, May 10, 2024, 11:44 AM IST
ರಾಯಚೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ವೀರಶೈವ ಕಲ್ಯಾಣ ಮಂಟಪದಿಂದ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ ಸಮಾಜ ಮತ್ತು ಅಂಗ ಸಂಸ್ಥೆಗಳಿಂದ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು.
ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಿಲ್ಲಾಡಳಿತದಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶ್ರೀ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಇದೇ ವೇಳೆ ಸಮಾಜದ ಅಪ್ಲಿಕೇಶನ್ ಲೋಕಾರ್ಪಣೆ ಮಾಡಲಾಯಿತು. ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು ಉಪನ್ಯಾಸ ನೀಡಿದರು.
ಬಿಚ್ಚಾಲಿ ಮಠದ ಶ್ರೀ ವೀರಭದ್ರ ಶಿವಾಚಾರ್ಯರು, ಸೋಮವಾರ ಪೇಟೆ ಹಿರೇಮಠದ ಶ್ರೀ ರಾಚೋಟಿವೀರ ಶಿವಾಚಾರ್ಯರು, ಚಿಕ್ಕಸೂಗೂರು ಚೌಕಿಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ವೀರಶೈವ ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ಶರಣ ಭೂಪಾಲ್ ನಾಡಗೌಡ ಸೇರಿ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sindhanur: ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿಗೆ ಎಂಎಲ್ಸಿ ಟಿಕೆಟ್
Sindhanuru; ಕಾಲೇಜು ಮಹಡಿ ಮೇಲಿಂದ ಬಿದ್ದು ಹೊರಗುತ್ತಿಗೆ ನೌಕರ ಸಾವು
Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್
ಪ್ರೇರಣೆ ನೀಡಿದ ಪ್ರವಚನ-ಆನ್ಲೈನ್ನಿಂದ ಗಡಿ ದಾಟಿದ ರಾಯಚೂರು ಮಾವು!
C.T. Ravi; ಪರಿಶಿಷ್ಟರ ಹಣ ಲೂಟಿ ಹೊಡೆದು ಚುನಾವಣೆಗೆ ಬಳಸಿದ ಕಾಂಗ್ರೆಸ್