Raichur:ಸಿವಿಲ್ ನ್ಯಾಯಾಲಯ ಆದೇಶ; ಎಸಿ ಕಚೇರಿಯ ಸಾಮಗ್ರಿಗಳ ಜಪ್ತಿ!
Team Udayavani, Jan 30, 2024, 2:58 PM IST
ರಾಯಚೂರು: ತಾಲೂಕಿನ ದದ್ದಲ್ ಏತ ನೀರಾವರಿ ಹಾಗೂ ರಸ್ತೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ್ದಕ್ಕೆ ಇಲ್ಲಿನ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ಸಹಾಯಕ ಆಯುಕ್ತರ ಕಚೇರಿ ಆಸ್ತಿ ಜಪ್ತಿ ಮಾಡಿಕೊಂಡ ಪ್ರಸಂಗ ನಡೆಯಿತು.
ತಾಲೂಕಿನ ದದ್ದಲ್, ಸುಂಕೇಶ್ವರಹಾಳ, ಮಲ್ಲಾಪುರ ಸೇರಿದಂತೆ ವಿವಿಧ ಗ್ರಾಮಗಳ ರೈತರಿಂದ 2008ರಲ್ಲಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಐದು ಬಾರಿ ಕಚೇರಿ ಸಾಮಗ್ರಿ ಜಪ್ತಿಗೆ ಆದೇಶ ಮಾಡಿದರೂ ಎಸಿ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಕೊನೆಗೆ ಸಂತ್ರಸ್ತರ ಪರ ವಕೀಲರು ಹಾಗೂ ರೈತರು ಇಂದು ಎಸಿ ಕಚೇರಿಯ ಸಾಮಗ್ರಿಗಳ ಜಪ್ತಿಗೆ ಮುಂದಾದರು. ಇದಕ್ಕೆ ಸಹಾಯಕ ಆಯುಕ್ತರು ವಿರೋಧ ವ್ಯಕ್ತಪಡಿಸಿದ್ದಲ್ಲದೇ ಆಕ್ರೋಶ ಹೊರಹಾಕಿದರು. ಆದರೂ ಲೆಕ್ಕಿಸದೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಿಕೊಂಡು ಕಚೇರಿ ಹೊರಭಾಗ ತಂದಿಡಲಾಯಿತು. ಕೊನೆಗೆ ಎಸಿ ಸಿಟ್ಟಿನಲ್ಲಿ ಕಚೇರಿಯಿಂದ ಹೊರ ನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ