ಕೋವಿಡ್‌ನಿಂದ ಮಹಿಳೆ ಸಾವು


Team Udayavani, Jul 9, 2020, 12:33 PM IST

9-July-06

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಸಂಖ್ಯೆ ಹೆಚ್ಚಳದ ಜತೆಗೆ ನಿಧಾನಕ್ಕೆ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಬುಧವಾರ ಬೆಳಗಿನ ಜಾವ ಕೂಡ ಮಹಿಳೆಯೊಬ್ಬರು ಮೃತಪಟ್ಟಿದ್ದಾಳೆ.

ಕೋವಿಡ್ ಪಾಸಿಟಿವ್‌ ಬಂದಿದ್ದ ಮಹಿಳೆ ಮಾನ್ವಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದು, ನ್ಯೂಮೋನಿಯಾ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದಳು. ಕೋವಿಡ್ ಪಾಸಿಟಿವ್‌ ವ್ಯಕ್ತಿ ಸಂಪರ್ಕದಿಂದ ಮಹಿಳೆಗೆ ಸೋಂಕು ತಗುಲಿತ್ತು. ಈಕೆಯಿಂದ ಕೂಡ ಕುಟುಂಬದ ಎಂಟು ಸದಸ್ಯರಿಗೆ ಸೋಂಕು ತಗುಲಿತ್ತು. ಪಾಸಿಟಿವ್‌ ದೃಢಪಟ್ಟ ಕಾರಣ ಕೆಲ ದಿನಗಳ ಹಿಂದೆ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಆದರೆ, ತಜ್ಞ ವೆೃದ್ಯರ ಸಮಿತಿ ಸಾವಿನ ವರದಿ ಪಡೆದು ತನಿಖೆ ನಡೆಸಿದ್ದು, ಖಚಿತಪಡಿಸಬೇಕಿದೆ.

ನಗರದಲ್ಲಿ ಹೆಚ್ಚಿದ ಸೋಂಕು: ಇನ್ನೂ ಜಿಲ್ಲೆಯಲ್ಲಿ ಬುಧವಾರ ಮತ್ತೆ 17 ಕೋವಿಡ್‌-19ನ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 14 ನಗರದಲ್ಲಿದ್ದರೆ, ಮೂರು ಶಕ್ತಿನಗರದಲ್ಲಿ ದೃಢಪಟ್ಟಿವೆ. ಶಕ್ತಿನಗರದ ಮೂವರು, ನಗರದ ಮಕ್ತಲ್‌ ಪೇಟೆಯ ಇಬ್ಬರು, ಗಂಗಾನಿವಾಸದ ಒಬ್ಬರು, ಮಡ್ಡಿಪೇಟೆ ಒಬ್ಬರು, ಬ್ರೇಸ್ತವಾರ ಪೇಟೆಯ ಒಬ್ಬರು, ನಗರದ 9 ಜನ ಸೇರಿದಂತೆ 17 ಜನರಿಗೆ ಸೋಂಕು ತಗುಲಿದೆ. ಅದರಲ್ಲಿ ಆರು ಸಾರಿ ಪ್ರಕರಣಗಳು, ಎರಡು ಐಎಲ್‌ಐ ಪ್ರಕರಣಳಿದ್ದರೆ, ಒಬ್ಬರು ತೆಲಂಗಾಣದಿಂದ ಹಿಂದುರುಗಿದವರಲ್ಲಿ ಕಂಡು ಬಂದಿದೆ. ಉಳಿದವರ ಸಂಪರ್ಕ ಪತ್ತೆ ಕಾರ್ಯ ನಡೆಸಲಾಗಿದೆ. ಇದರಿಂದ ಒಟ್ಟು 615 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ. ಅವರಲ್ಲಿ ಚಿಕಿತ್ಸೆ ಪಡೆದು 442 ಜನರು ಸಂಪೂರ್ಣ ಗುಣಮುಖರಾಗಿದ್ದು, ಇನ್ನೂ 168 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯ ದೇವದುರ್ಗ ತಾಲೂಕಿನಿಂದ 99, ಲಿಂಗಸುಗೂರು ತಾಲೂಕಿನಿಂದ 90, ಮಾನ್ವಿ ತಾಲೂಕಿನಿಂದ 83, ಸಿಂಧನೂರು ತಾಲೂಕಿನಿಂದ 56 ಮತ್ತು ರಾಯಚೂರು ತಾಲೂಕಿನಿಂದ 69 ಸೇರಿದಂತೆ ಒಟ್ಟು 397 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾಗಿದ್ದ ವರದಿಗಳಲ್ಲಿ 253 ನೆಗೆಟಿವ್‌ ಆಗಿವೆ. ಜಿಲ್ಲೆಯಿಂದ ಈವರೆಗೆ ಒಟ್ಟು 26,388 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಫಿ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 23,599 ವರದಿಗಳು ನೆಗೆಟಿವ್‌ ಆಗಿವೆ. ಉಳಿದ 2,168 ಸ್ಯಾಂಪಲ್‌ಗ‌ಳ ಫಲಿತಾಂಶ ಬರಬೇಕಿದೆ. ಫಿವರ್‌ ಕ್ಲಿನಿಕ್‌ಗಳಲ್ಲಿ ಬುಧವಾರ 752 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಒಟ್ಟು 135 ಜನರನ್ನು ಸಾಂಸ್ಥಿಕ ಕ್ವಾರಂಟೆೃನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.