ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಆಗ್ರಹ

ದಲಿತ-ಪ್ರಗತಿಪರ ಸಂಘಟನೆಗಳ ಒಕ್ಕೂಟ ಸದಸ್ಯರ ಧರಣಿ

Team Udayavani, Mar 13, 2020, 4:41 PM IST

13-March-24

ರಾಯಚೂರು: ಭೂ ಒಡೆತನ ಯೋಜನೆಯಡಿ ಕಡತಗಳ ವಿಲೇವಾರಿಗೆ ಅನಗತ್ಯ ವಿಳಂಬ ಮಾಡುತ್ತಿರುವ ಡಾ| ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ಪ್ರಭಾರ ವ್ಯವಸ್ಥಾಪಕ ಸುಬ್ರಮಣ್ಯಂ ಹಾಗೂ ಹೊರಗುತ್ತಿಗೆ ಅಧಿಕಾರಿಗಳನ್ನು ಅಮಾನತು ಮಾಡಲು ಆಗ್ರಹಿಸಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ನಿಗಮದ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದ ಧರಣಿ ನಿರತರು, ಭೂ ಒಡೆತನ ಯೋಜನೆ ಎರಡು ದಶಕಗಳ ಹಿಂದೆಯೇ ಜಾರಿಗೊಂಡಿದೆ. ಅದಕ್ಕೆ ಜಿಲ್ಲಾಧಿಕಾರಿಯೇ ಅಧ್ಯಕ್ಷ್ಯರಾಗಿದ್ದು, ಎಲ್ಲ ಜಮೀನುಗಳ ದರ ನಿಗದಿ ಮಾಡುತ್ತಾರೆ. ಅದಕ್ಕೆ ಬೇಕಾದ ದಾಖಲೆಗಳನ್ನು ನಿಗಮದ ವ್ಯವಸ್ಥಾಪಕ ಪರಿಶೀಲಿಸಿ ಸಲ್ಲಿಸಬೇಕು. ಆದರೆ, ಜಿಲ್ಲಾಧಿಕಾರಿ ಇದ್ಯಾವುದನ್ನು ಮಾಡದೇ ಬಂದ ಕಡತಗಳನ್ನು ಮೂಲೆಗುಂಪು ಮಾಡುತ್ತಿದ್ದು, ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

ತಾಲೂಕಿನ ರಾಂಪುರ ಸೀಮಾಂತರದ ಶ್ರೀರಾಮನಗರ ಕ್ಯಾಂಪ್‌, ಕಸ್ಬೆ ಕ್ಯಾಂಪ್‌, ಕುಕ್ಕಲ ಕ್ಯಾಂಪ್‌ ಹಾಗೂ ಮಮದಾಪೂರ ಗ್ರಾಮದ ಜನರು ನಿಗಮಕ್ಕೆ ಕಳೆದ ನಾಲ್ಕು ವರ್ಷದಿಂದ ಅರ್ಜಿ ಸಲ್ಲಿಸಿದರೂ ಅವರಿಗೆ ಭೂಮಿ ಒದಗಿಸಿಲ್ಲ. ಕನಿಷ್ಠಪಕ್ಷ ಅವರ ಅರ್ಜಿಗಳನ್ನು ಕೂಡ ವಿಲೇವಾರಿ ಮಾಡಿಲ್ಲ ಎಂದು ದೂರಿದರು. ಇದೊಂದು ದೊಡ್ಡ ಮಟ್ಟದ ಅವ್ಯವಹಾರವಾಗಿದ್ದು, ಅದರಲ್ಲಿ ಭಾಗಿಯಾದ ಅಧಿಕಾರಿಗಳನ್ನು ನಿರ್ದಾಕ್ಷಿಣ್ಯವಾಗಿ ಅಮಾನತು ಮಾಡಬೇಕು. ಮಂಜೂರಾದ ಫಲಾನುಭವಿಗಳಿಗೆ ಭೂಮಿ ಒದಗಿಸಬೇಕು. ಅಲೆಮಾರಿ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಹಣ ಬಿಡುಗಡೆಯಾದರೂ ವಿತರಿಸಿಲ್ಲ ಎಂದು ದೂರಿದರು.

ಜಿಲ್ಲಾಡಳಿತದ ಬಳಿ 2018-19ನೇ ಸಾಲಿನ 1,501 ಮತ್ತು 2019-20ನೇ ಸಾಲಿನ 200 ಅರ್ಜಿದಾರರಿಗೆ ಭೂಮಿ ಖರೀದಿಸಲು ಅನುದಾನ ಇದ್ದರೂ ಫಲಾನುಭವಿಗಳಿಗೆ ಅದು ಉಪಯೋಗಕ್ಕೆ ಬರುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಅವರು ಬೇಕಾಬಿಟ್ಟಿ ಉತ್ತರ ನೀಡುತ್ತಿದ್ದಾರೆ ಎಂದು ದೂರಿದರು.

ಈ ಕೂಡಲೇ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಭೂಮಿ ಖರೀದಿಸಿ ನೀಡಬೇಕು ಎಂದು ಒತ್ತಾಯಿಸಿದರು. ಮುಖಂಡ ತಿಮ್ಮಪ್ಪ, ಭಗವಂತ ಏಗನೂರು, ಪರಶುರಾಮ, ಈರಣ್ಣ ಭಂಡಾರಿ, ರವಿ ನಾಯಕ, ಚಂದ್ರು ನಾಯಕ, ಶಿವಪ್ಪ ನಾಯಕ, ಸುರೇಶ ನಾಯಕ, ಜಂಗ್ಲೆಪ್ಪ ಸೇರಿ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.