ಟ್ರ್ಯಾಕ್ಟರ್‌ ಸಮೇತ ರಸ್ತೆಗಿಳಿದ ಅನ್ನದಾತರು

ಎಪಿಎಂಸಿ ಉಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

Team Udayavani, Jan 27, 2021, 6:37 PM IST

ಟ್ರ್ಯಾಕ್ಟರ್‌ ಸಮೇತ ರಸ್ತೆಗಿಳಿದ ಅನ್ನದಾತರು

ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆ ರದ್ದುಗೊಳಿಸಲು ಆಗ್ರಹಿಸಿ ನವದೆಹಲಿಯಲ್ಲಿ ಹಮ್ಮಿಕೊಂಡ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ನಗರದಲ್ಲೂ ಸಂಯುಕ್ತ ಹೋರಾಟ- ಕರ್ನಾಟಕ ರಾಯಚೂರು ಘಟಕದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಟ್ರ್ಯಾಕ್ಟರ್‌ಗಳ ಸಮೇತ ರಸ್ತೆಗಿಳಿದ ಪ್ರತಿಭಟನಾಕಾರರು ಕರ್ನಾಟಕ ಸಂಘದಿಂದ ಡಾ| ಅಂಬೇಡ್ಕರ್‌ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರ್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್‌ ಸರ್ಕಲ್‌ನಲ್ಲಿ ಬಹಿರಂಗ ಸಭೆಯಾಗಿ ಮಾರ್ಪಟ್ಟಿತು. ಕೇಂದ್ರ ಸರ್ಕಾರದ ರೈತ ವಿರೋಧಿ  ಧೋರಣೆ ಖಂಡಿಸಿ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ಮೂರು ಕೃಷಿ ಕಾಯ್ದೆ ಕೈಬಿಡುವಂತೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ನ.26ರಿಂದ ಹಗಲಿರುಳು ಹೋರಾಡುತ್ತಿದ್ದಾರೆ. 60ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸಲು ಮುಂದಾಗುತ್ತಿಲ್ಲ.

ಹಲವಾರು ಮಾತುಕತೆಗಳು ನಡೆದರೂ ಕೃಷಿ ಕಾಯ್ದೆ ಹಿಂಪಡೆಯುವಲ್ಲಿ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜ.26ರಂದು ದೆಹಲಿಯಲ್ಲಿ ಸಹಸ್ರಾರು
ಟ್ರ್ಯಾಕ್ಟರ್‌ ಪರೇಡ್‌ ಆಯೋಜಿಸುವ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗಿದೆ. ಅದನ್ನು ಬೆಂಬಲಿಸಿ ದೇಶವ್ಯಾಪಿ ಎಲ್ಲೆಡೆ ಹೋರಾಟ ನಡೆಸಿದ್ದು, ನಗರದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಭಟನಾನಿರತರು ತಿಳಿಸಿದರು.

ಬಿಜೆಪಿ ಸರ್ಕಾರ ಸಂಸತ್ತಿನಲ್ಲಿ 2020ರಲ್ಲಿ ಅಂಗಿಕರಿಸಿದ ಮೂರು ಕೃಷಿ ಕಾಯ್ದೆಗಳು, ಉದ್ದೇಶಿತ ವಿದ್ಯುತ್‌ ತಿದ್ದುಪಡಿ ಮಸೂದೆ ರದ್ದಾಗಬೇಕು. 29 ಕಾರ್ಮಿಕ ಕಾನೂನು ರದ್ದು ಮಾಡಿ ಅಂಗೀಕರಿಸಿರುವ ನಾಲ್ಕು ಕೋಡ್‌ಗಳನ್ನು ಕೂಡಲೇ ಕೈಬಿಡಬೇಕು, ರೈತರ ಎಲ್ಲ ಬೆಳೆಗಳಿಗೂ ವೈಜ್ಞಾನಿಕ, ಲಾಭದಾಯಕ ಬೆಲೆ ನಿಗದಿಗೊಳಿಸಬೇಕು ಮತ್ತು ಇದನ್ನು ಶಾಸನಬದ್ಧಗೊಳಿಸಬೇಕು. ಎಪಿಎಂಸಿ ಉಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಈ ವೇಳೆ ಸಂಘಟನೆ ಸಂಚಾಲಕರಾದ ಕೆ.ಜಿ. ವೀರೇಶ್‌, ಕಲ್ಯಾಣ ಕರ್ನಾಟಕ ರೈತ ಸಂಘದ ಜಿಂದಪ್ಪ ವಡೂರು, ಕೃಷಿ ಕೂಲಿಕಾರ ಸಂಘದ ಕರಿಯಪ್ಪ ಹಚ್ಚೊಳ್ಳಿ, ಆರ್‌ಕೆಎಸ್‌ನ ರಾಮಣ್ಣ, ರಾಜ್ಯ ರೈತ ಸಂಘದ ಲಕ್ಷ್ಮಣಗೌಡ ಕಡಗಂದೊಡ್ಡಿ,  ಕೆಪಿಆರ್‌ಎಸ್‌ನ ಈ. ರಂಗನಗೌಡ, ಸಿಐಟಿಯುನ ಡಿ.ಎಸ್‌. ಶರಣಬಸವ, ಎಂ. ಶರಣಗೌಡ, ಕೂಲಿ ಸಂಗ್ರಾಮ ಸಮಿತಿಯ ಬಸವರಾಜ ಗಾರಲದಿನ್ನಿ, ಶ್ರೀನಿವಾಸ ಕಲವಲದೊಡ್ಡಿ, ಖಾಜಾ ಅಸ್ಲಂಪಾಷ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.