ವ್ಯಸನಿಗಳ ದೌರ್ಬಲ್ಯವೇ ಆದಾಯದ ಮೂಲ

ಲಾಕ್‌ಡೌನ್‌ನಲ್ಲಿ ರಾರಾಜಿಸಿದ ಬ್ಲಾಕ್‌ ಮಾರ್ಕೆಟ್ ‌ಅಧಿಕ ದರಕ್ಕೆ ಮದ್ಯ-ಸಿಗರೇಟ್‌- ಗುಟ್ಕಾ ಮಾರಾಟ

Team Udayavani, May 10, 2020, 3:39 PM IST

10-May-16

ಸಾಂದರ್ಭಿಕ ಚಿತ್ರ

ರಾಯಚೂರು: ಲಾಕ್‌ಡೌನ್‌ನಿಂದ ಎಷ್ಟೋ ಜನ ತಿನ್ನಲು ಅನ್ನವಿಲ್ಲದೇ ಪರದಾಡಿದರೆ, ಕೆಲ ವರ್ತಕರು ಮಾತ್ರ ವ್ಯಸನಿಗಳ ದೌರ್ಬಲ್ಯ ಅಡ್ಡವಾಗಿಟ್ಟುಕೊಂಡು ಲಕ್ಷ ಲಕ್ಷ ರೂ. ಲಾಭ ಗಳಿಸಿಕೊಳ್ಳುತ್ತಿದ್ದಾರೆ. ಮದ್ಯ, ಗುಟ್ಕಾ, ಸಿಗರೇಟ್‌ನಂಥ ವಸ್ತುಗಳನ್ನು ನಾಲ್ಕೈದು ಪಟ್ಟು ಅಧಿಕ ದರಕ್ಕೆ ಮಾರುವ ಮೂಲಕ ಅಕ್ರಮ ಸ್ವತ್ತು ಗಳಿಸುತ್ತಿದ್ದಾರೆ.

ಮಾ.22ರಂದು ಜನತಾ ಕರ್ಫ್ಯೂ ಘೋಷಿಸಿದ ಸರ್ಕಾರ ಮರುದಿನದಿಂದಲೇ ಎಲ್ಲೆಡೆ ಲಾಕ್‌ಡೌನ್‌ ಜಾರಿಗೆ ತಂದಿತು.ಆದರೆ, ಈ ಬಗ್ಗೆ ಯಾರಿಗೂ ಪೂರ್ವಾಪರ ಗೊತ್ತಿಲ್ಲದ ಕಾರಣ ಬಹುತೇಕ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತು. ಯಾವಾಗ ಎರಡನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ಸೂಚನೆ ಬರುತ್ತಿದ್ದಂತೆ ಎಲ್ಲ ವಸ್ತುಗಳ ದರ ಹೆಚ್ಚಿಸಲಾಯಿತು. ಅದರಲ್ಲೂ ಮಾದಕ ವಸ್ತುಗಳ ದರವಂತೂ ಗಗನಕ್ಕೇರಿತು. ಆರಂಭದಲ್ಲಿ ದುಪ್ಪಟ್ಟು ಹಣ ಪಡೆದರೆ, 2ನೇ ಲಾಕ್‌ ಡೌನ್‌ ಜಾರಿಯಾಗುತ್ತಿದ್ದಂತೆ ನಾಲ್ಕೈದು ಪಟ್ಟು ಅಧಿಕ ದರಕ್ಕೆ ಮಾರಲಾಯಿತು. ಕೇಳಿದರೆ ಲಾಕ್‌ ಡೌನ್‌ನಿಂದ ಯಾವುದೇ ವಸ್ತು ಬರುತ್ತಿಲ್ಲ ಎಂದು ನೆಪ ಹೇಳಿ ಜನರಿಂದ ವರ್ತಕರು ಸುಲಿಗೆ ಮಾಡಿದರು.

ಮದ್ಯ-ಗುಟ್ಕಾ ದರ ಗಗನಕ್ಕೆ: ನಿಜವಾಗಿಯೂ ಲಾಕ್‌ಡೌನ್‌ ವರವಾಗಿರುವುದು ಮದ್ಯ ಮತ್ತು ಗುಟ್ಕಾ ಸಿಗರೇಟ್‌ ವರ್ತಕರಿಗೆ. ದೊಡ್ಡ ಬ್ಲಾಕ್‌ ಮಾರ್ಕೆಟ್‌ ತಯಾರಾಗಿ ಒಂದಕ್ಕೆ ಐದು ಪಟ್ಟು ದರ ಹೆಚ್ಚಿಸಲಾಯಿತು. ಕೇವಲ 5 ರೂ.ಗೆ ಸಿಗುತ್ತಿದ್ದ ಗುಟ್ಕಾ ಈಗ 30 ರೂ. ಮಾರಾಟವಾದರೆ, ಸಿಗರೇಟ್‌ ದರ ಕೂಡ ನಾಲ್ಕೈದು ಪಟ್ಟು ಹೆಚ್ಚಾಗಿತ್ತು. 700 ರೂ. ಮೌಲ್ಯದ ಮದ್ಯದ ಬಾಟಲಿ 5 ಸಾವಿರ ರೂ. ವರೆಗೂ ಮಾರಾಟ ಮಾಡಿದ್ದಾರೆ ಎಂದು ತಿಳಿಸುತ್ತವೆ ಮೂಲಗಳು. ಇದಕ್ಕೆ ಕೆಲ ಮದ್ಯ ವರ್ತಕರೇ ಮಧ್ಯವರ್ತಿಗಳಂತೆ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಂಜೆ ವೇಳೆ ಯಾರು ಹೆಚ್ಚು ಹಣ ನೀಡುತ್ತಾರೋ ಅವರಿಗೆ ಮಾರುವ ಮೂಲಕ ಏಕಮುಖೀ ಹರಾಜು ಪ್ರಕ್ರಿಯೆ ನಡೆಸಲಾಗಿದೆ. ಇನ್ನೂ ಕೆಲ ಮದ್ಯದಂಗಡಿ ಮಾಲೀಕರೇ ತಮ್ಮ ಅಂಗಡಿ ಕಳವಿಗೆ ಕುಮ್ಮಕ್ಕು ನೀಡಿ ಅದೇ ಮದ್ಯ ಬ್ಲಾಕ್‌ನಲ್ಲಿ ಮಾರಿದ ಘಟನೆಗಳು ನಡೆದಿದೆ.

ಅನ್ವಯಿಸದ ದರನೀತಿ: ಅಗತ್ಯ ವಸ್ತುಗಳಾದ ದಿನಸಿ, ತರಕಾರಿ, ಹಣ್ಣು ವ್ಯಾಪಾರಿಗಳು ದುಪ್ಪಟ್ಟು ದರಕ್ಕೆ ಮಾರಾಟ ಮಾಡುವ ಸಂಗತಿ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ದರ ನೀತಿ ಪ್ರಕಟಿಸಿತು. ತರಕಾರಿ, ಹಣ್ಣು, ದಿನಸಿಗಳು ಇಷ್ಟೇ ದರಕ್ಕೆ ಮಾರಬೇಕು. ಆದೇಶ ಮೀರಿದಲ್ಲಿ ಅಂಗಡಿ ಪರವಾನಗಿ ರದ್ದು ಮಾಡುವ ಸೂಚನೆ ನೀಡಿತು. ಆದರೆ, ಮದ್ಯ, ಗುಟ್ಕಾ, ಸಿಗರೇಟ್‌ ಗಳು ಅಗತ್ಯ ವಸ್ತುಗಳ ಸಾಲಿಗೆ ಸೇರದ ಕಾರಣ ದರ ನೀತಿ ಪ್ರಕಟಿಸಲು ಬರುವುದಿಲ್ಲ ಎಂದು ಅಧಿಕಾರಿಗಳು ಕೈಚೆಲ್ಲಿದರು. ಇದೇ ಕಾರಣಕ್ಕೆ ದಿನಸಿ ಅಂಗಡಿಗಳಲ್ಲೇ ರಾಜಾರೋಷವಾಗಿ ಗುಟ್ಕಾ, ಸಿಗರೇಟ್‌ ಮಾರುತ್ತಿದ್ದರು. ಎಲ್ಲೆಡೆ ಮದ್ಯದಂಗಡಿ ಬದ್‌ ಇದ್ದಾಗ್ಯೂ ಹಳ್ಳಿಗಳಲ್ಲಿ ಕಡಿಮೆ ದರದ ಮದ್ಯ ಸಿಗುತ್ತಿತ್ತು. ಯಾವಾಗ ಸರ್ಕಾರ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಿತೋ ಆಗಲೇ ಮದ್ಯಪ್ರಿಯರು ನಿಟ್ಟುಸಿರು ಬಿಟ್ಟರು. ಆದರೆ, ಸರಕು ಸಾಗಣೆ ಮುಕ್ತವಾಗಿಲ್ಲದ ಕಾರಣ ಗುಟ್ಕಾ ಮಾತ್ರ ಇನ್ನೂ ಅದೇ ದರಕ್ಕೆ ಮಾರಾಟವಾಗುತ್ತಿದೆ.

ಲಾಕ್‌ಡೌನ್‌ ವೇಳೆ ಅಕ್ರಮ ಮದ್ಯ ಮಾರಾಟ, ಸೇಂದಿ, ಕಳ್ಳಬಟ್ಟಿ, ಮದ್ಯದ ಅಂಗಡಿ ಕಳವು ಸೇರಿದಂತೆ 100ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ವಿಸ್ಕಿ, ಬೀಯರ್‌, ಕಳ್ಳಭಟ್ಟಿ, ಸೇಂದಿ, ಸಿಎಚ್‌ ಪೌಡರ್‌ ಸೀಜ್‌ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
ಕೆ. ಪ್ರಶಾಂತಕುಮಾರ,
ಅಬಕಾರಿ ಇಲಾಖೆ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.