ರಾಯಚೂರು: ಮಹಾಶಿವರಾತ್ರಿ ಸಂಭ್ರಮ-ಜಾಗರಣೆ

ಪ್ರಮುಖ ದೇವಸ್ಥಾನಗಳ ಮುಂದೆ ಜನದಟ್ಟಣೆ ಹೆಚ್ಚಾಗದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು.

Team Udayavani, Mar 12, 2021, 6:22 PM IST

Maha

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಮಹಾಶಿವರಾತ್ರಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಾಗರಣೆ ನಿಮಿತ್ತ ವಿವಿಧ ದೇವಸ್ಥಾನಗಳ ವಿಶೇಷ ಪೂಜೆ ನಡೆದರೆ, ಸಂಘ-ಸಂಸ್ಥೆಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ನಗರದ ಚಂದ್ರಮೌಳೇಶ್ವರ, ನಂದೀಶ್ವರ ದೇವಸ್ಥಾನ, ಏಗನೂರು ಟೆಂಪಲ್‌, ನೀಲಕಂಠೇಶ್ವರ ದೇವಸ್ಥಾನ, ನಗರೇಶ್ವರ ದೇವಸ್ಥಾನ, ರಾಮಲಿಂಗೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳ ಪುರಾಣ ಪ್ರವಚನ, ಸಂಗೀತ ಕಾರ್ಯಕ್ರಮ, ಭಜನೆಯಂಥ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧೆಡೆ ಶಿವಪುರಾಣ ಪ್ರವಚನ ಆಯೋಜಿಸಿದ್ದರೆ ಜನ ಜಾ ಗರಣೆ ನಿಮಿತ್ತ
ಇಡೀ ದಿನ ಶಿವಧ್ಯಾನ, ಶಿವಪೂಜೆಯಲ್ಲಿ ತೊಡಗಿದ್ದು ಕಂಡು ಬಂತು.

ಶಿವನ ದೇವಸ್ಥಾನಗಳಲ್ಲಿ ಗುರುವಾರ ಬೆಳಗಿನ ಜಾವದಿಂದಲೇ ಪೂಜಾ, ವಿಧಿ- ವಿಧಾನ ಕೈಂಕರ್ಯಗಳನ್ನು ಜರುಗಿದವು. ಶಿವನನ್ನು ಒಲಿಸಲು ಕೆಲವು ಪ್ರಮುಖ ದೇವಸ್ಥಾನಗಳಲ್ಲಿ ರುದ್ರಾಭಿಷೇಕ ನೆರವೇರಿಸಲಾಯಿತು. ದೇವರಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಗರದ ಹೃದಯ ಭಾಗದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿದ್ದು ಕಂಡು ಬಂತು. ಭಕ್ತರ ದರ್ಶನಕ್ಕಾಗಿ ವಿಶೇಷವಾಗಿ ಬೊಂಬುಗಳನ್ನು ಕಟ್ಟಲಾಗಿತ್ತು.

ಐಬಿ ರಸ್ತೆಯ ರಾಮಲಿಂಗೇಶ್ವರ ದೇವಸ್ಥಾನ, ನೇತಾಜಿ ನಗರದ ನಗರೇಶ್ವರ ದೇವಸ್ಥಾನ, ಮಾವಿನಕೆರೆ ಪಕ್ಕದ ನಂದೀಶ್ವರ ದೇವಸ್ಥಾನ, ಎನ್‌ಜಿಒ ಕಾಲೋನಿಯ ನೀಲಕಂಠೇಶ್ವರ ದೇವಸ್ಥಾನ, ಬೊಳಮಾನದೊಡ್ಡಿಯ ಏಗನೂರು ದೇವಸ್ಥಾನ, ನಿಜಲಿಂಗಪ್ಪ ಕಾಲೋನಿಯ ಈಶ್ವರ ದೇವಸ್ಥಾನ ಹಾಗೂ ಮಾಣಿಕಪ್ರಭು ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಇನ್ನೂ ತಾಲೂಕಿನ ದೇವಸೂಗೂರಿನ ಸೂಗೂರೇಶ್ವರ ದೇವಸ್ಥಾನ, ಮನ್ಸಲಾಪುರದ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ಜರುಗಿಸಲಾಯಿತು.

ಪ್ರಮುಖ ದೇವಸ್ಥಾನಗಳ ಮುಂದೆ ಜನದಟ್ಟಣೆ ಹೆಚ್ಚಾಗದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು. ಕೆಲ ದೇವಸ್ಥಾನಗಳಲ್ಲಿ ಪ್ರಸಾದದ ವ್ಯವಸ್ಥೆ ಮಾಡಿದ್ದರೆ, ಕೆಲವೆಡೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಜ್ಯೋತಿರ್ಲಿಂಗಗಳ ಮೆರವಣಿಗೆ:
ಮಹಾಶಿವರಾತ್ರಿ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ನಗರದ ಬಸವೇಶ್ವರ ವೃತ್ತದ ಪಕ್ಕದಲ್ಲಿರುವ ವಾಲ್ಕಟ್‌ ಮೈದಾನದಲ್ಲಿ
ವಿಶೇಷ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೆ 6 ಅಡಿ ಎತ್ತರದ ವಿಶೇಷ ಶಿವಲಿಂಗ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಶಾಂತಿಯಾತ್ರೆ ಜರುಗಿತು.

ರಂಗಮಂದಿರ ಬಳಿ ಸಂಸ್ಥೆಯ ಸ್ಮಿತಾ ಸಹೋದರಿ ಚಾಲನೆ ನೀಡಿದರು. ಅಲ್ಲಿಂದ ಅಂಬೇಡ್ಕರ್‌ ವೃತ್ತ, ತೀನ್‌ ಕಂದಿಲ್‌, ನೇತಾಜಿ ವೃತ್ತ, ಪಟೇಲ್‌ ವೃತ್ತ, ಬಸವೇಶ್ವರ ವೃತ್ತದ ಮೂಲಕ ವಾಲ್ಕಟ್‌ ಮೈದಾನಕ್ಕೆ ಯಾತ್ರೆ ತಲುಪಿತು. ಸಂಜೆ 6ಕ್ಕೆ ವಾಲ್ಕಟ್‌ ಮೈದಾನದಲ್ಲಿ ಅವರು ಸಂಗೀತ ಕಾರ್ಯಕ್ರಮ ಜರುಗಿತು. ವಿವಿಧ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.