ಭಕ್ತರಿಗೆ ದೂರದಿಂದಲೇ ದೇವರ ದರ್ಶನ

ಸರ್ಕಾರ ಆದೇಶವಿದ್ದರೂ ನಿಲ್ಲದ ಭಕ್ತರ ದೌಡುದೇವಸ್ಥಾನ ಬಾಗಿಲು ಮುಚ್ಚಿ ದರ್ಶನ ಸ್ಥಗಿತ

Team Udayavani, Mar 21, 2020, 4:47 PM IST

21-March-20

ರಾಯಚೂರು: ಸರ್ಕಾರದ ಸ್ಪಷ್ಟ ಆದೇಶದ ಮಧ್ಯೆಯೂ ಮಠ ಮಂದಿರಗಳಿಗೆ ಜನ ಬರುವುದು ನಿಲ್ಲಿಸದ ಕಾರಣ ದೇವಸ್ಥಾನಗಳು ಬಾಗಿಲು ಮುಚ್ಚುವ ಮೂಲಕ ದರ್ಶನವನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರು ಬಾರದಂತೆ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಈಗಾಗಲೇ ಮನವಿ ಮಾಡಿದ್ದರು. ಆದರೂ ಭಕ್ತರ ಸಂಖ್ಯೆ ಕಡಿಮೆಯಾಗದ ಕಾರಣ ಮಠದ ದ್ವಾರ ಬಾಗಿಲು ಕೂಡ ಮುಚ್ಚಲಾಗಿದೆ. ಇದರಿಂದ ಭಕ್ತರು ಮಠಕ್ಕೆ ಬಂದರೂ ದರ್ಶನ ಸಿಗುವುದಿಲ್ಲ.

ಈ ಕುರಿತು ಪ್ರಕಟಣೆ ನೀಡಿರುವ ಶ್ರೀಮಠದ ವ್ಯವಸ್ಥಾಪಕ ಎಸ್‌.ಕೆ.ಶ್ರೀನಿವಾಸರಾವ್‌ ಅವರು, ಭಕ್ತರ ಆರೋಗ್ಯದ ದೃಷ್ಟಿಯಿಂದ ಶ್ರೀ ಮಠದ ಬಾಗಿಲು ಹಾಕಲಾಗಿದೆ. ಕೊರೊನಾ ಮಾರಣಾಂತಿಕ ಕಾಯಿಲೆ ಎಲ್ಲೆಡೆ ಹರಡುತ್ತಿದೆ. ಅದನ್ನು ತಡೆಯಬೇಕಿದೆ. ದೇಶದ ಪ್ರಧಾನಿ ಕೂಡ ಜನತಾ ಕರ್ಫ್ಯೂ ಘೋಷಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಭಕ್ತರು ಮನೆಗಳಲ್ಲಿ ದೇವರ ಧ್ಯಾನ ಮಾಡಬೇಕು. ಮಠದಲ್ಲಿ ತೀರ್ಥ ಪ್ರಸಾದ ವ್ಯವಸ್ಥೆ ಕೂಡ ತಾತ್ಕಾಲಿಕವಾಗಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ದೇವಸೂಗುರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದಲ್ಲೂ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಬೆಳ್ಳಿ ರಥೋತ್ಸವ, ದೀಡ್‌ ನಮಸ್ಕಾರ, ನಾಮಕರಣ, ಮದುವೆಯಂಥ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ನಿತ್ಯ ದಾಸೋಹ ಸ್ಥಗಿತಗೊಳಿಸಲಾಗಿದೆ. ಇನ್ನೂ ಅಮಾವಾಸ್ಯೆ, ಯುಗಾದಿಯಂದು ಭಕ್ತರು ಬಂದರೂ ದೂರದಿಂದಲೇ ದೇವರ ದರ್ಶನ ಮಾಡಿಕೊಂಡು ಹೋಗಬೇಕಿದೆ. ಅಂದು ಜರುಗುತ್ತಿದ್ದ ಬೇವು ವಿತರಣೆ, ಪಂಚಾಂಗ ಪಠಣ ಕಾರ್ಯಕ್ರಮವನ್ನು ಕೂಡ ರದ್ದು ಮಾಡಲಾಗಿದೆ. ಇನ್ನೂ ದೇವಸ್ಥಾನ ಆಸುಪಾಸಿನ ಮಳಿಗೆಗಳನ್ನೂ ತಾತ್ಕಾಲಿಕವಾಗಿ ಮುಚ್ಚಿಸಿದ್ದು, ದೇವಸ್ಥಾನಕ್ಕೆ ಬರುವ ಭಕ್ತರಿಗೂ ಬಾರದಂತೆ ಮನವಿ ಮಾಡಲಾಗುತ್ತಿದೆ.

ಇನ್ನೂ ತಾಲೂಕಿನ ಗಾಣಧಾಳ ಪಂಚಮುಖೀ ದೇವಸ್ಥಾನದಲ್ಲೂ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿಲ್ಲ. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಸೂಚನೆ ಮೆರೆಗೆ ತಾಲೂಕಿನ ಪಂಚಮುಖೀ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಎರಕಲಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದರ್ಶನ ನಿಷೇಧಿ ಸಲಾಗಿದೆ. ಈ ಎರಡು ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು, ಉತ್ಸವಗಳು ಹಾಗೂ ಮದುವೆ ಸಮಾರಂಭ ನಡೆಸಲಾಗುವುದಿಲ್ಲ ಎಂದು ಪಂಚಮುಖೀ ಪ್ರಾಣದೇವರ ಸೇವಾ ಸಮಿತಿ ಅಧ್ಯಕ್ಷ ಶಾಮಾಚಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.