ಮಾಸ್ಕ್ -ಹ್ಯಾಂಡ್ ಸ್ಯಾನಿಟೈಜರ್ ಪೂರೈಕೆಗೆ ಸೂಚನೆ
Team Udayavani, Mar 25, 2020, 4:28 PM IST
ರಾಯಚೂರು: ಕೊರೊನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ಮಾಸ್ಕ್ಗಳು ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್ನ ಅಭಾವ ಉಂಟಾಗಿದ್ದು, ಅವುಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಯವರ ಗೃಹ ಕಚೇರಿಯಲ್ಲಿ ಜಿಲ್ಲೆಯ ಮೆಡಿಕಲ್ ಸ್ಟೋರ್ಗಳ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿದರು. ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ಬೆಲೆಗೆ ಮಾರಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್ ಪೂರೈಕೆಯಲ್ಲಿ ಕೊರತೆ ಆಗಬಾರದು. ಆದೇಶ ನೀಡಿದ ಕೂಡಲೇ ನಿಗದಿ ಪಡಿಸಿದ ಬೆಲೆಗೆ ಅವುಗಳನ್ನು ಪೂರೈಸಲು ಸಿದ್ಧರಿರಬೇಕು. 200ಎಂಎಲ್ ಹ್ಯಾಂಡ್ ಸ್ಯಾನಿಟೈಜೆಷನ್ಗೆ 100 ರೂ. ದರ ನಿಗದಿಯಾಗಿದೆ. ಅದೇ ದರಕ್ಕೆ ಮಾರಾಟ ಮಾಡಬೇಕು, ಸನ್ನಿವೇಶದ ಲಾಭ ಪಡೆದು ಹೆಚ್ಚಿನ ಬೆಲೆಗೆ ಮಾಡುವುದಾಗಲಿ ಅಥವ ಕೃತಕ ಅಭಾವ ಸೃಷ್ಟಿಸುವುದಾಗಲಿ ಕಂಡುಬಂದಲ್ಲಿ ಕಾನೂನು ಮಾಪನ ಶಾಸ್ತ್ರ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಅಧಿಕಾರಿಗಳು ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವರು ಎಂದರು.
ಹ್ಯಾಂಡ್ ಸ್ಯಾನಿಟೈಜೆಷನ್ನ ಹಳೆ ದಾಸ್ತಾನುಗಳನ್ನು ಕೂಡ ಗರಿಷ್ಠ ರಿಟೇಲ್ ದರದಲ್ಲೇ ಮಾರಬೇಕು. ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್ ಹೈದರಾಬಾದ್, ಪಾಂಡಿಚೇರಿ ಸೇರಿದಂತೆ ಇತರ ರಾಜ್ಯಗಳಿಂದ ಪೂರೈಕೆಯಾಗುವುದರಿಂದ ಪ್ರಸ್ತುತವಾಗಿ ಸಾರಿಗೆ ಸಮಸ್ಯೆ ಉದ್ಭವಿಸಿದೆ. ಟ್ರಕ್ಗಳಿಗೆ ಸುಲಭವಾಗಿ ಸಂಚಾರ ಮಾಡಿಕೊಡಲು ಅನುವು ಮಾಡಿಕೊಟ್ಟರೆ ಜಿಲ್ಲೆಯ ಜನತೆಗೆ ಅಗತ್ಯವಾಗಿರುವ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಜೆಷನ್ಗಳನ್ನು ಪೂರೈಸಲು ಸಿದ್ಧವಿದೆ ಎಂದು ಸಂಘದ ಸದಸ್ಯರು ಡಿಸಿ ಗಮನಕ್ಕೆ ತಂದರು.
ಅಗತ್ಯ ವಸ್ತುಗಳ ಪೂರೈಕೆಗೆ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗುವುದು. ವಾಹನ ಹಾಗೂ ವಾಹನ ಸಂಖ್ಯೆಯನ್ನು ನಮೂದಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿ, ಹೊರ ರಾಜ್ಯದಿಂದ ಅವುಗಳನ್ನು ಪೂರೈಸಲು ಅವಕಾಶ ಮಾಡಲಾಗುವುದು. ಯಾವುದೇ ಕಾರಣಕ್ಕೂ ನಕಲಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಅರುಣ ಕುಮಾರ್, ತೂಕ ಮತ್ತು ಅಳತೆ ಇಲಾಖೆ ಇನ್ಸ್ಪೆಕ್ಟರ್ ಮಹಾಂತಯ್ಯ, ಡ್ರಗ್ ಕಂಟ್ರೋಲರ್ ವೆಂಕಟೇಶ್, ಮೆಡಿಕಲ್ ಅಸೋಸಿಯೇಶನ್ ಕಾರ್ಯದರ್ಶಿ ವೆಂಕಟೇಶ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!