ರಾಯಚೂರು: ನದಿ ತೀರದಲ್ಲಿ 20ಕ್ಕೂ ಹೆಚ್ಚು ಮೊಸಳೆಗಳು!; ಗ್ರಾಮಸ್ಥರು ಕಂಗಾಲು
Team Udayavani, Jul 26, 2023, 4:33 PM IST
ರಾಯಚೂರು: ಕೃಷ್ಣಾ ನದಿ ತಟದಲ್ಲಿ ಹತ್ತಾರು ಮೊಸಳೆಗಳು ಚಲ್ಲಾಟವಾಡುವುದನ್ನು ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ತಾಲೂಕಿನ ರಾಂಪುರ ಮತ್ತು ಕುರುವಕಲ ಮಧ್ಯೆದ ಕೃಷ್ಣಾ ನದಿಯ ತೀರದಲ್ಲಿ ಒಂದೇ ಕಡೆ ಸುಮಾರು 20ಕ್ಕೂ ಹೆಚ್ಚು ಮೊಸಳೆ ಕಂಡು ಬಂದಿವೆ.
ಮೀನುಗಾರರು ಮೀನು ಹಿಡಿಯಲು ಹೋದಾಗ ಈ ದೃಶ್ಯ ಕಂಡಿದ್ದು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಇತ್ತೀಚೆಗೆ ನದಿ ಪಾತ್ರದ ಗ್ರಾಮಗಳಿಗೆ ಮೊಸಳೆ ಕಾಟ ಹೆಚ್ಚಾಗುತ್ತಿದೆ. ಈಚೆಗೆ ರಾಂಪುರದಲ್ಲಿ ಬಾಲಕನ ಮೇಲೆ ದಾಳಿ ನಡೆಸಿತ್ತು. ಅಲ್ಲದೇ ಆಗಾಗ ಆಕಳು ಎತ್ತು ಎಮ್ಮೆ ಕುರಿಗಳನ್ನು ಎಳೆದೊಯ್ಯುತ್ತಿವೆ. ಅಲ್ಲದೇ ಶಕ್ತಿನಗರದ ಲೇಬರ್ ಕಾಲನಿಯ ಮನೆಗೆ ಮೊಸಳೆ ನುಗ್ಗಿತ್ತು. ಸ್ಥಳೀಯರು ಮೊಸಳೆ ಹಿಡಿದು ನದಿಗೆ ಬಿಟ್ಟಿದ್ದರು. ಒಂದಲ್ಲ ಒಂದು ಕಡೆ ಇಂಥ ಘಟನೆಗಳು ಮರಕಳಿಸುತ್ತಲೇ ಇವೆ. ಈಗ ಮೊಸಳೆ ಹಿಂಡು ಗ್ರಾಮಸ್ಥರು ಮಾತ್ರ ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ