ಚುನಾವಣೆ ನಡೆದರೂ ಪ್ರಕಟಗೊಳ್ಳದ ರಾಯಚೂರು ನಗರಸಭೆ ಫಲಿತಾಂಶ
Team Udayavani, Nov 2, 2020, 4:08 PM IST
ರಾಯಚೂರು: ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೂ ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ನ ಕಲಬುರಗಿ ಪೀಠ ತಡೆಯಾಜ್ಞೆ ನೀಡಿದೆ.
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದಡಿ ಸದಸ್ಯತ್ವ ರದ್ದತಿಗೆ ಗುರಿಯಾದ 31 ನೇ ವಾರ್ಡ್ ನ ಕಾಂಗ್ರೆಸ್ ಸದಸ್ಯ ರೇಣಮ್ಮ ಭೀಮರಾಯ ರಿಟ್ ಸಲ್ಲಿಸಿದ್ದಾರೆ. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ರೇಣಮ್ಮಗೆ ಗುಪ್ತ ಮತದಾನಕ್ಕೆ ಅವಕಾಶ ನೀಡುವಂತೆ ಸೂಚಿಸಿದ್ದು, ತಿರ್ಪು ಪ್ರಕಟಿಸದಂತೆ ತಿಳಿಸಿದೆ.
ಅದರನ್ವಯ ಚುನಾವಣೆ ನಡೆದರೂ ಫಲಿತಾಂಶ ಪ್ರಕಟವಾಗಿಲ್ಲ. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನ ಇಬ್ಬರಲ್ಲಿ ಸಾಜಿದ್ ಸಮೀರ್ ನಾಮಪತ್ರ ಹಿಂಪಡೆದಿದ್ದು, ಈ. ವಿನಯ ಕುಮಾರ್ ಅವಿರೋಧ ಆಯ್ಕೆ ನಡೆದಿದೆ.
ಇದನ್ನೂ ಓದಿ:ಕಳೆದ 2 ವರ್ಷದಿಂದ ನೆನಗುದಿಗೆ ಬಿದ್ದಿದ್ದ ಮಂಡ್ಯ ನಗರಸಭೆ ಆಡಳಿತ ಜೆಡಿಎಸ್ ತೆಕ್ಕೆಗೆ
ಉಪಾಧ್ಯಕ್ಷ ಸ್ಥಾನಕ್ಕೂ ಕಾಂಗ್ರೆಸ್ ಬಿಜೆಪಿಯಿಂದ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ್ದು, ಸದಸ್ಯರು ಕೈ ಎತ್ತುವ ಮೂಲಕ ಆಯ್ಕೆ ಮಾಡಿದ್ದಾರೆ. ಆದರೆ, ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಚುನಾವಣಾಧಿಕಾರಿ ಸಂತೋಷ ಎಸ್. ಕಾಮಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ