ಸ್ವಚ್ಛತೆಯನ್ನೇ ಮರೆತ ರಾಯಚೂರು ನಗರಸಭೆ!


Team Udayavani, Jun 17, 2021, 5:38 PM IST

sದ್ಗಹಜಹಗ್ದಸ

ರಾಯಚೂರು: ಎರಡು ವರ್ಷಗಳ ಬಳಿಕ ನಗರಸಭೆಗೆ ಆಡಳಿತ ಮಂಡಳಿ ರಚನೆಯಾಗಿದ್ದು, ಜನರ ಸಮಸ್ಯೆಗಳು ಬಗೆ ಹರಿಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ನಗರದ ಸ್ಥಿತಿಗತಿ ನೋಡುತ್ತಿದ್ದರೆ ಇದೆಂಥ ನಗರಾಡಳಿತವೋ ಎನ್ನದೆ ಇರಲಾಗದು. ಯಾವುದೇ ನಗರ ಸುಂದರವಾಗಿ ಕಾಣಬೇಕಾದರೆ ಅಲ್ಲಿ ತ್ಯಾಜ್ಯ ವಿಲೇವಾರಿ ಪ್ರಮುಖ ಆದ್ಯತೆ ಆಗಿರಬೇಕು. ಆದರೆ, ಮಹಾನಗರ ಪಾಲಿಕೆಗೆ ಬಡ್ತಿ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಯಚೂರು ನಗರಸಭೆಗೆ ಸ್ವತ್ಛತೆ ವಿಚಾರವೇ ಕಾಲಕಸವಾಗಿದೆ.

ಉಳ್ಳವರ ಬಡಾವಣೆಗಳು, ಅ ಧಿಕಾರಿಗಳು ಓಡಾಡುವ ರಸ್ತೆಗಳು ಬಿಟ್ಟರೆ ಉಳಿದೆಡೆ ತ್ಯಾಜ್ಯ ವಿಲೇವಾರಿ ಅಗತ್ಯವೇ ಇಲ್ಲವೇನೊ ಎನ್ನುವ ಸ್ಥಿತಿ ಇದೆ. ನಗರಸಭೆ ಚುಕ್ಕಾಣಿ ಹಿಡಿದ ಮಾದರಿ ನಗರ ಮಾಡುವ ರೋಷಾವೇಷದ ಮಾತಗಳನ್ನಾಡಿದ ಅಧ್ಯಕ್ಷ ಈ.ವಿನಯಕುಮಾರ್‌ ಈ ವಿಚಾರದಲ್ಲಿ ಮೌನಕ್ಕೆ ಶರಣಾದಂತಿದೆ. ಅಧಿ ಕಾರಿಗಳು ಹಾಗೂ ಜನಪ್ರತಿನಿ ಧಿಗಳು ನಡುವಿನ ಸಮನ್ವಯತೆ ಕೊರತೆ ಎದ್ದು ಕಾಣಿಸುತ್ತಿದೆ. ಇಬ್ಬರ ನಡುವೆ ಜನರಿಗೆ ಸಂಕಷ್ಟ ತಪ್ಪದಂತಾಗಿದೆ. ನಗರದ ಪ್ರಮುಖ ರಸ್ತೆಗಳು, ಸರ್ಕಾರಿ ಕಚೇರಿಗಳ ಆಸುಪಾಸಿನಲ್ಲೇ ಘನ ತ್ಯಾಜ್ಯ ಕಣ್ಣಿಗೆ ರಾಚುತ್ತದೆ.

ನಗರದ ಕ್ಷೇತ್ರ ಶಿಕ್ಷಣಾ ಧಿಕಾರಿ ಕಚೇರಿ ಇರುವುದು ಘನ ತ್ಯಾಜ್ಯಗಳ ಮಧ್ಯೆ ಎನ್ನುವಷ್ಟರ ಮಟ್ಟಿಗೆ ಪರಿಸರ ಹದಗೆಟ್ಟಿದೆ. ಕಚೇರಿ ಮುಂದೆ ಹಂದಿಗಳದ್ದೇ ಸಾಮ್ರಾಜ್ಯ. ಕಚೇರಿಗೆ ಬರುವ ಸಿಬ್ಬಂದಿ, ಜನ ಮೂಗು ಮುಚ್ಚಿಕೊಂಡೆ ಓಡಾಡುವ ಸ್ಥಿತಿ ಇದೆ. ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ಕೆಲ ಕಾಲ ಮಳೆ ಸುರಿಯುತ್ತಿದ್ದಂತೆ ಚರಂಡಿಗಳೆಲ್ಲ ತುಂಬಿ ಹರಿದಿವೆ. ಇದರಿಂದ ಪ್ಲಾಸ್ಟಿಕ್‌ ಸೇರಿದಂತೆ ಘನತ್ಯಾಜ್ಯವೆಲ್ಲ ರಸ್ತೆಗೆ ಹರಡಿಕೊಂಡಿದೆ. ಕಾಲುವೆಗಳನ್ನು ಕಾಲಕಾಲಕ್ಕೆ ಸ್ವತ್ಛಗೊಳಿಸದಿರುವುದೇ ಈ ಸಮಸ್ಯೆಗೆ ಕಾರಣ ಎಂದು ಗೊತ್ತಿದ್ದರೂ ನಗರಾಡಳಿತ ಈ ವಿಚಾರದಲ್ಲಿ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇದರಿಂದ ಪ್ರಯಾಣಿಕರು ಮೂಗು ಮುಚ್ಚಿಕೊಂಡೇ ಓಡಾಡಬೇಕು.

ತ್ಯಾಜ್ಯ ವಿಲೇವಾರಿ ಬೇಕಾಬಿಟ್ಟಿ: ಘನತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯದಿರುವುದು ಈ ಸಮಸ್ಯೆಗೆ ಕಾರಣ ಎನ್ನುತ್ತಾರೆ ನಗರ ನಿವಾಸಿಗಳು. ವಾಹನಗಳು ತ್ಯಾಜ್ಯವನ್ನೆಲ್ಲ ತುಂಬದೆ ಅರ್ಧಂಬರ್ಧ ತುಂಬಿಕೊಂಡು ಹೋಗುತ್ತಾರೆ. ಇದರಿಂದ ಉಳಿದ ತ್ಯಾಜ್ಯ ಮತ್ತೆ ಚರಂಡಿ ಸೇರಿಕೊಳ್ಳುತ್ತದೆ. ಅಲ್ಲದೇ, ಹಸಿ ತ್ಯಾಜ್ಯ, ಒಣ ತ್ಯಾಜ್ಯ ಬೇರ್ಪಡುವ ಕಾರ್ಯವೂ ಸರಿಯಾಗಿ ಆಗುತ್ತಿಲ್ಲ. ಇದರಿಂದ ಚರಂಡಿಗಳಲ್ಲೆಲ್ಲ ತ್ಯಾಜ್ಯದಿಂದ ತುಂಬಿ ಹೋಗುತ್ತಿವೆ.

ಮಳೆಗಾಲದ ಆತಂಕ: ಘನತ್ಯಾಜ್ಯಕ್ಕೂ ಮಳೆನೀರು ಮನೆಗಳಿಗೂ ನುಗ್ಗುವುದಕ್ಕೂ ಅವಿನಾಭಾವ ನಂಟಿದೆ. ಕೆಲವೊಂದು ಬಡಾವಣೆಗಳ ನಿವಾಸಿಗಳಿಗೆ ಮಳೆಗಾಲ ಬಂದರೆ ಸಾಕು ಆತಂಕ ಶುರುವಾಗುತ್ತದೆ. ಕೊಂಚ ಮಳೆ ಬಂದರೂ ನೀರು ಮನೆಗಳಿಗೆ ನುಗ್ಗುತ್ತದೆ. ಕಳೆದ ವರ್ಷವೇ ಈ ಬಗ್ಗೆ ಸೂಕ್ತ ವಹಿಸುವ ಭರವಸೆ ನೀಡಿದ್ದ ಅ ಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈಗ ಮತ್ತೆ ಮಳೆಗಾಲ ಶುರುವಾಗಿದ್ದು, ಮತ್ತದೆ ಸಮಸ್ಯೆ ಎದುರಾಗುವ ಆತಂಕ ಮನೆ ಮಾಡಿದೆ. ಚರಂಡಿಗಳೆಲ್ಲ ಘನ ತ್ಯಾಜ್ಯದಿಂದ ತುಂಬಿ ಹೋಗಿದ್ದು, ಮಳೆ ಬಂದರೆ ಸಾಕು ಚರಂಡಿ ನೀರೆಲ್ಲ ತಗ್ಗು ಪ್ರದೇಶಗಳಿಗೆ ನುಗ್ಗುತ್ತದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.