ಉಸ್ತುವಾರಿ ಬದಲಾವಣೆಗೆ ಸುಸ್ತಾದ ರಾಯಚೂರು!

ಎರಡೂ ಜಿಲ್ಲೆಗಳನ್ನು ನೋಡಿಕೊಳ್ಳಬೇಕಿದ್ದು, ಎಷ್ಟರ ಮಟ್ಟಿಗೆ ನ್ಯಾಯ ಕೊಡುವರೋ ನೋಡಬೇಕಿದೆ.

Team Udayavani, Sep 14, 2021, 6:10 PM IST

ಉಸ್ತುವಾರಿ ಬದಲಾವಣೆಗೆ ಸುಸ್ತಾದ ರಾಯಚೂರು!

ರಾಯಚೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗಬೇಕಿದ್ದ ಉಸ್ತುವಾರಿ ಸಚಿವರಿಗೆ ಅಸ್ತಿತ್ವದ ಸಮಸ್ಯೆ ಕಾಡುತ್ತಿದೆ. ಉಸ್ತುವಾರಿ ಹೊಣೆ ಹೊತ್ತಿದ್ದ ವಸತಿ ಸಚಿವ ವಿ.ಸೋಮಣ್ಣ ಕೇವಲ ಎರಡು ಬಾರಿ ಬಂದು ಹೋಗುವಷ್ಟರಲ್ಲಿ ಈಗ ಅವರ ಬದಲಿಗೆ ಹಾಲಪ್ಪ ಆಚಾರ್‌ಗೆ ಹೊಣೆ ನೀಡಲಾಗಿದೆ.

ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಗೆ ಆಯ್ಕೆಯಾಗಿರುವ
ರಾಯಚೂರಿನ ಸರ್ವತೋಮುಖ ಪ್ರಗತಿ ಸರ್ಕಾರದ ಪ್ರಥಮಾದ್ಯತೆ ಆಗಬೇಕಿತ್ತು. ಆದರೆ, ಸಚಿವ ಸ್ಥಾನ ಹಂಚಿಕೆ ವೇಳೆಯೂ ಜಿಲ್ಲೆಯನ್ನು ಕಡೆಗಣಿಸಿದ್ದ ಸರ್ಕಾರ, ಈಗ ಉಸ್ತುವಾರಿ ಸಚಿವ ಸ್ಥಾನದ ವಿಚಾರದಲ್ಲೂ ಗಂಭೀರ ನಡೆ ಪ್ರದರ್ಶಿಸುತ್ತಿಲ್ಲ.

ವಸತಿ ಸಚಿವರಿಗೆ ಉಸ್ತುವಾರಿ ಹೊಣೆ ನೀಡಿದ್ದರಿಂದ ಅವರು ಜಿಲ್ಲೆಗೆ ಬಂದು ಸಭೆಗಳನ್ನು ಮಾಡಿ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ಕಾಣಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪುನರ್ವಸತಿ ಬಗ್ಗೆಯೂ ಭರವಸೆ ನೀಡಿದ್ದರು. ಇದರಿಂದ ಜಿಲ್ಲೆಯ ಜನರಿಗೂ ತುಸು ಆಶಾಭಾವ ಮೂಡಿತ್ತು.ಅಷ್ಟರಲ್ಲೇ ಈಗ ಕೊಪ್ಪಳ ಜಿಲ್ಲೆಯ ಹಾಲಪ್ಪ ಆಚಾರ್‌ ಅವರಿಗೆ ರಾಯಚೂರು ಜಿಲ್ಲೆಯನ್ನೂ ಉಸ್ತುವಾರಿ ನೀಡಲಾಗಿದೆ.

ರಾಯಚೂರು ಕಡೆಗಣನೆ:ಜಿಲ್ಲೆಯ ವಿಚಾರದಲ್ಲಿ ಬಿಜೆಪಿ ನಡೆ ಮೊದಲಿನಿಂದಲೂ ಅಸಡ್ಡೆ ಭಾವ ತೋರುತ್ತಲೇ ಬರುತ್ತಿದೆ. ಅದು ಸಚಿವ ಸ್ಥಾನ ಹಂಚಿಕೆಯಾಗಿರಲಿ, ಮಹತ್ತರ ಯೋಜನೆಗಳ ಅನುಷ್ಠಾನವಾಗಿರಲಿ. ಹಿಂದೆ ಸಿಎಂ ಆಗಿದ್ದ ಬಿ.ಎಸ್‌. ಯಡಿಯೂರಪ್ಪನವರು ಬಜೆಟ್‌ನಲ್ಲಿಯೂ ಜಿಲ್ಲೆಗೆ ನಿರಾಸೆ ಮೂಡಿಸಿದ್ದರು.

ಸಚಿವ ಸಂಪುಟ ಪುನಾರಚನೆಯಲ್ಲಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಯಿತು. ಅಲ್ಲದೇ, ಈ ಹಿಂದೆ ರಾಯಚೂರಿಗೆ ದಕ್ಕಬೇಕಿದ್ದ ಐಐಟಿಯಂಥ ಸಂಸ್ಥೆ ಕೈ ತಪ್ಪುವಲ್ಲಿಯೂ ಬಿಜೆಪಿ ನಾಯಕರ ಕೈವಾಡದ ಆರೋಪಗಳು ಕೇಳಿ ಬಂದವು. ಈಗ ಏಮ್ಸ್‌ ವಿಚಾರದಲ್ಲೂ ಅಂಥದ್ದೇ ಅಸಡ್ಡೆ ಭಾವ ಪ್ರದರ್ಶಿಸುವ ಮೂಲಕ ಬಿಜೆಪಿ ಸರ್ಕಾರ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಇಂಥ ಹೊತ್ತಲ್ಲಿ ಕಾಯಂ ಉಸ್ತುವಾರಿ ಸಚಿವರನ್ನು ನೇಮಿಸುವ ವಿಚಾರದಲ್ಲೂ ಇಂಥ ಯಡವಟ್ಟು ಮಾಡಿಕೊಂಡಿರುವುದು ವಿಪರ್ಯಾಸ.

ಈ ಹಿಂದಿದ್ದ ಲಕ್ಷ್ಮಣ ಸವದಿ ಕೂಡ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿ ಹೋದರು. ಒಂದೆಡೆ ಉಪಮುಖ್ಯಮಂತ್ರಿ, ಮತ್ತೂಂದೆಡೆ ಸಾರಿಗೆ ಸಚಿವರಾಗಿದ್ದ ಅವರಿಗೆ ರಾಯಚೂರು ಉಸ್ತುವಾರಿ ನೀಡಿದ್ದರಿಂದ ಜಿಲ್ಲೆಯ ಅಭಿವೃದ್ಧಿಗೆ ಅಷ್ಟಾಗಿ ಒತ್ತು ಕೊಡಲಿಲ್ಲ. ಸಂಪುಟ ಪುನಾರಚನೆಯಲ್ಲಿ ಜಿಲ್ಲೆಗೆ ಸ್ಥಾನ ಸಿಕ್ಕಿದ್ದರೆ ಜಿಲ್ಲೆಯವರೇ ಸಚಿವರಾಗುತ್ತಿದ್ದರು. ಅದು ಕೂಡ ಆಗಲಿಲ್ಲ. ಈಗ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ರಾಯಚೂರು ಹೊಣೆ ನೀಡಿದ್ದು, ಅವರು ಕೂಡ ಎರಡೂ ಜಿಲ್ಲೆಗಳನ್ನು ನೋಡಿಕೊಳ್ಳಬೇಕಿದ್ದು, ಎಷ್ಟರ ಮಟ್ಟಿಗೆ ನ್ಯಾಯ ಕೊಡುವರೋ ನೋಡಬೇಕಿದೆ.

ಭವಿಷ್ಯ ನುಡಿದಿದ್ದ ದದ್ದಲ್‌: ಜಿಲ್ಲೆಯಲ್ಲಿ ಸಾಕಷ್ಟು ‌ಮಸ್ಯೆಗಳಿವೆ. ಸರ್ಕಾರ ಪದೇ-ಪದೇ ಉಸ್ತುವಾರಿ ಸಚಿವರನ್ನು ಬದಲಿಸಿದರೇ ಯಾವ ಕೆಲಸಗಳು ಆಗುವುದಿಲ್ಲ. ವಸತಿ ಸಚಿವ ವಿ.ಸೋಮಣ್ಣನವರಾದರೂ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಪೂರೈಸಲಿ. ನಮ್ಮ ಕ್ಷೇತ್ರಗಳ ಸಮಸ್ಯೆಗಳಿಗೆ ಸುಖಾಂತ್ಯ ಕ ಲ್ಪಿಸಲಿ ಎಂದು ಗ್ರಾಮೀಣ ಕ್ಷೇತ್ರದ ಶಾಸಕ ದದ್ದಲ್‌ ಬಸನಗೌಡ ‌ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರ ‌ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ಮಾತಿನಂತೆ ಕೇವಲ ಎರಡೇ ತಿಂಗಳಲ್ಲಿ ಉಸ್ತುವಾರಿ ಸಚಿವರ ‌ ಬದಲಾವಣೆ ಮಾಡಲಾಗಿದೆ.

ಸರ್ಕಾರಕ್ಕೆ ಈ ಭಾಗದ ಬಗ್ಗೆ ಕಾಳಜಿಯೇ ಇಲ್ಲ. ಕಾಟಾಚಾರಕ್ಕೆ ಉಸ್ತುವಾರಿ ಸಚಿವರನ್ನು ನೇಮಕ ಮಾಡುತ್ತಿದೆ. ಒಬ್ಬ ಉಸ್ತುವಾರಿ ಸಚಿವ ಒಂದು ಜಿಲ್ಲೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕಾದರೆಕನಿಷ್ಠ 6 ತಿಂಗಳಾದರೂ ಬೇಕು.ಕೇವಲ ಎರಡು ಮೂರು ತಿಂಗಳಲ್ಲಿ ಬದಲಾವಣೆ ಮಾಡಿದರೆ ಅಭಿವೃದ್ಧಿ ಎಲ್ಲಿಂದ ಸಾಧ್ಯವಾಗಲಿದೆ. ಉಸ್ತುವಾರಿ ಸಚಿವರಾಗಿದ್ದ ಸೋಮಣ್ಣ ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ಆಲಿಸಿ ತಿಂಗಳಿಗೆ ಎರಡು ಸಭೆಗಳನ್ನು ಮಾಡುವುದಾಗಿ ತಿಳಿಸಿದ್ದರು. ಅಷ್ಟರಲ್ಲೇ ಸಚಿವ ಸ್ಥಾನ ಬದಲಾವಣೆ ಮಾಡಲಾಗಿದೆ.
ಬಿ.ವಿ. ನಾಯಕ,ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಇದು ನಿಜಕ್ಕೂ ಜಿಲ್ಲೆಯ ಜನರ ದುರ್ದೈವವೇ ಸರಿ. ಕೇಂದ್ರ ಸರ್ಕಾರವೇ ರಾಯಚೂರು ಜಿಲ್ಲೆ ಹಿಂದುಳಿದಿದೆ ಎಂದು ಮಹತ್ವಾಕಾಂಕ್ಷಿ ಯೋಜನೆಯಡಿ ಆಯ್ಕೆ ಮಾಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಅಭಿವೃದ್ಧಿ ಸರ್ಕಾರದ ಮೊದಲ ಆದ್ಯತೆ ಆಗಬೇಕಿತ್ತು. ಈ ರೀತಿ 3 ತಿಂಗಳಿಗೊಮ್ಮೆ ಸಚಿವರ ಬದಲಾವಣೆಗಳಾದರೆ ಜಿಲ್ಲೆಯ ಸಮಸ್ಯೆಗಳು ಈಡೇರುವುದಾದ್ರೂಹೇಗೆ?. ನೂತನ ಉಸ್ತುವಾರಿ ಸಚಿವರಿಗೂ 2ಜಿಲ್ಲೆಗಳ ಹೊಣೆ ನೀಡಿದ್ದು, ನಿರೀಕ್ಷಿತಪ್ರಗತಿ ಸಾಧ್ಯವಿಲ್ಲ.ಇವ್ರಾದರೂ ಪೂರ್ಣಪ್ರಮಾಣದಲ್ಲಿಕೆಲಸಮಾಡಲಿಎಂಬುದೇ ನಮ್ಮಆಶಯ.
ಬಸನಗೌಡ ದದ್ದಲ್‌,
ಗ್ರಾಮೀಣ ಶಾಸಕ, ರಾಯಚೂರು

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.