ಬಿಜೆಪಿಯಲ್ಲೂ ಚಿಗುರೊಡೆದ ಅಧಿಕಾರದಾಸೆ!

ಅತಂತ್ರ ಫಲಿತಾಂಶದಿಂದ ಗೊಂದಲ ಲೋಕಲ್‌ ಬಾಡಿಯಲ್ಲೂ ಆಪರೇಷನ್‌ ಕಮಲ? ಪಕ್ಷೇತರರ ಒಲವು ಯಾರತ್ತ?

Team Udayavani, Mar 13, 2020, 12:07 PM IST

13-March-7

ರಾಯಚೂರು: ಚುನಾಯಿತರಾದರೂ ಅಧಿಕಾರ ವಿಲ್ಲದೇ ಹಲ್ಲು ಕಿತ್ತ ಹಾವಿನಂತಾಗಿದ್ದ ಜನಪ್ರತಿನಿಧಿಗಳಿಗೆ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟಗೊಂಡಿರುವುದು ಹಾಲು ಹೋಳಿಗೆ ಉಂಡಷ್ಟು ಖುಷಿಯಾಗಿದೆ. ಅದರ ಬೆನ್ನಲ್ಲೆ ರಾಜಕೀಯ ಲೆಕ್ಕಾಚಾರ ಜೋರಾಗಿದ್ದು, ಅತಂತ್ರ ಫಲಿತಾಂಶದ ಲಾಭ ಪಡೆಯಲು ಕಾಂಗ್ರೆಸ್‌, ಬಿಜೆಪಿಯಲ್ಲಿ ಲೆಕ್ಕಾಚಾರ ಜೋರಾಗಿದೆ.

ಒಟ್ಟು 35 ಸದಸ್ಯ ಬಲದ ರಾಯಚೂರು ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಬಿಜೆಪಿ 12 ಸ್ಥಾನ ಪಡೆದರೆ, ಕಾಂಗ್ರೆಸ್‌ 11 ಸ್ಥಾನ ಗಳಿಸಿತ್ತು. ಇನ್ನು ಜೆಡಿಎಸ್‌ 3 ಸ್ಥಾನಕ್ಕೆ ತೃಪ್ತಿಪಟ್ಟರೆ, 9 ಪಕ್ಷೇತರರು ಗೆಲುವು ದಾಖಲಿಸಿದ್ದರು. ಆದರೆ, ಪಕ್ಷೇತರರೆಲ್ಲ ಕಾಂಗ್ರೆಸ್‌ ಟಿಕೆಟ್‌ ಸಿಗದ ಕಾರಣಕ್ಕೆ ಬಂಡಾಯ ಸಾರಿ ಗೆದ್ದಿದ್ದರು. ಈಗ ಅವರು ಕಾಂಗ್ರೆಸ್‌ ಜತೆ ನಿಲ್ಲುವರೋ ಇಲ್ಲವೋ ಎನ್ನುವುದರ ಮೇಲೆ ಆಡಳಿತ ರಚನೆ ಪ್ರಹಸನ ನಿಂತಿದೆ.

ಈಗಿನ ಪರಿಸ್ಥಿತಿ ಕಾಂಗ್ರೆಸ್‌ಗೆ ಎಷ್ಟು ಅನುಕೂಲಕರವಾಗಿದೆಯೋ ಬಿಜೆಪಿಗೂ ಅಷ್ಟೇ ಪೂರಕವಾಗಿದೆ. ಇದೇ ಕಾರಣಕ್ಕೆ ಬಿಜೆಪಿಯಲ್ಲೂ ಆಡಳಿತ ಚುಕ್ಕಾಣಿ ಹಿಡಿಯುವ ತವಕ ಶುರುವಾಗಿದ್ದು, ಅದಕ್ಕಾಗಿ ಏನು ಮಾಡಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ.

ಕಾಂಗ್ರೆಸ್‌ ಒಳಜಗಳ: ಕಾಂಗ್ರೆಸ್‌ ಕೇವಲ 11 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಲು ಪಕ್ಷದಲ್ಲಿನ ಒಳಜಗಳವೇ ಪ್ರಮುಖ ಕಾರಣ. ಮಾಜಿ ಶಾಸಕ ಸೈಯ್ಯದ್‌ ಯಾಸಿನ್‌ ಹಾಗೂ ಎಂಎಲ್‌ಸಿ ಎನ್‌.ಎಸ್‌ .ಬೋಸರಾಜ್‌ ಬಣಗಳ ಪ್ರತಿಷ್ಠೆಯಿಂದಾಗಿ ಪಕ್ಷದಲ್ಲಿ ಆಂತರಿಕ ಕಲಹ ಹೆಚ್ಚಾಗಿತ್ತು. ಎರಡೆರಡು ಕಡೆ ಪಕ್ಷದ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಆದರೆ, ಬಿ ಫಾರಂಗಳು ಅರ್ಹರಿಗೆ ಸಿಕ್ಕಿಲ್ಲ ಎನ್ನುವ ಆರೋಪ ಕೇಳಿ ಬಂತು. ಟಿಕೆಟ್‌ ಹಂಚಿಕೆಯಲ್ಲಾದ ಯಡವಟ್ಟುಗಳು, ಗುಂಪುಗಾರಿಕೆ ಪಕ್ಷವನ್ನು ಇಬ್ಭಾಗ ಮಾಡಿತ್ತು.

ಇದೇ ಕಾರಣಕ್ಕೆ ಪಕ್ಷೇತರರನ್ನು ಗೆಲ್ಲಿಸಲು ಕಾಂಗ್ರೆಸ್‌ನ ಒಂದು ಗುಂಪಿನ ನಾಯಕರೇ ಪ್ರಚಾರ ಮಾಡಿದ್ದರು. ಹೀಗಾಗಿ ಈಗಲೂ ಪ್ರತಿಷ್ಠೆ ಪಣಕ್ಕಿಟ್ಟಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಕೈ ತಪ್ಪುವುದರಲ್ಲಿ ಸಂದೇಹ ಬೇಡ. ಅಧ್ಯಕ್ಷ ಸ್ಥಾನ ಬಿಸಿಎ, ಉಪಾಧ್ಯಕ್ಷ ಸ್ಥಾನ ಎಸ್‌ಸಿಗೆ ಮೀಸಲಾಗಿದ್ದು, ಉಭಯ ಗುಂಪುಗಳಲ್ಲೂ ಆಕಾಂಕ್ಷಿಗಳಿದ್ದಾರೆ. ಇನ್ನು ಬಿಜೆಪಿಯಲ್ಲೂ ಆ ವರ್ಗದ ಸದಸ್ಯರಿದ್ದಾರೆ. ಒಂದು ವೇಳೆ ಪಕ್ಷಕ್ಕೆ ಬೆಂಬಲ ನೀಡಿದಲ್ಲಿ ಅಧಿಕಾರ ನೀಡುವ ಆಮಿಷವೊಡ್ಡಿ ಪಕ್ಷೇತರರನ್ನು ಸೆಳೆಯುವ ಸಾಧ್ಯತೆಗಳಿವೆ.

ವಿಶ್ವಾಸದಲ್ಲಿ ಶಾಸಕ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಸ್ಥಳೀಯ ಕ್ಷೇತ್ರದಲ್ಲೂ ಬಿಜೆಪಿ ಶಾಸಕರಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆಯಲ್ಲೂ ಪಾರುಪತ್ಯ ಸಾಧಿಸಬೇಕು. ಅದಕ್ಕಾಗಿ ತಂತ್ರಗಾರಿಕೆ ಹೆಣೆಯಲು ಮುಂದಾಗಿದ್ದಾರೆ ನಗರ ಶಾಸಕ ಡಾ| ಶಿವರಾಜ ಪಾಟೀಲ. ಅಲ್ಲದೇ, ಅಧಿಕಾರಕ್ಕೆ ಬರುವುದು ನಾವೇ ಎನ್ನುವ ವಿಶ್ವಾದಲ್ಲಿಯೂ ಅವರಿರುವುದು ಅನುಮಾನಗಳಿಗೆ ಎಡೆಮಾಡಿದೆ.

ಯಾರಿಗೆ ಪಕ್ಷೇತರರ ಕೃಪೆ: ನಗರಸಭೆಯಲ್ಲಿ ಅತಂತ್ರ ಪರಿಸ್ಥಿತಿ ಉಂಟಾಗಿದ್ದು, ಯಾವ ಪಕ್ಷಕ್ಕೂ ಸೂಕ್ತ ಬೆಂಬಲ ಇಲ್ಲ. ಮೂರು ಸ್ಥಾನ ಗೆದ್ದ ಜೆಡಿಎಸ್‌ ಕೂಡ ಆಟಕ್ಕುಂಟು ಲೆಕ್ಕಕ್ಕಿಲ್ಲದ ಸ್ಥಿತಿಯಲ್ಲಿದೆ. ಆದರೆ, ಪಕ್ಷೇತರರು ಎತ್ತ ವಾಲುವರೋ ಅವರಿಗೆ ಅಧಿಕಾರ ಖಚಿತ. ಕಾಂಗ್ರೆಸ್‌ನಲ್ಲಿ ಒಳಜಗಳ ಅಡ್ಡಿಯಾಗದಿದ್ದರೆ ಪಕ್ಷೇತರರು ಕೈ ಬಿಡುವ ಸಾಧ್ಯತೆ ಕಡಿಮೆ. ಒಂದು ವೇಳೆ ಅಲ್ಲಿನ ಭಿನ್ನಮತ ಮುಂದುವರಿದರೆ ಬಿಜೆಪಿಗೆ ಅದರ ಲಾಭವಾಗಬಹುದು.

ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು, ನಾವೇಕೆ ಆಡಳಿತ ನಡೆಸಬಾರದು. ರಾಯಚೂರು ನಗರಸಭೆಯಲ್ಲಿ ಖಂಡಿತ ಅಧಿಕಾರ ಹಿಡಿಯುತ್ತೇವೆ. ನನ್ನ ಮತ ಸೇರಿ 13 ಸಂಖ್ಯಾಬಲವಿದೆ. ಅಧಿಕಾರ ಹಿಡಿಯಲು ಏನೆಲ್ಲ ತಂತ್ರಗಾರಿಕೆ ಮಾಡುತ್ತೇವೋ ಹೇಳಲಾಗದು. ಆದರೆ, ಅಧಿಕಾರ ಹಿಡಿಯುವ ವಿಶ್ವಾಸ ಮಾತ್ರ ಇದೆ.
ಡಾ| ಶಿವರಾಜ ಪಾಟೀಲ,
ರಾಯಚೂರು ನಗರಸಭೆ ನಗರ ಬಿಜೆಪಿ ಶಾಸಕ

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.