ಸೈಕಲ್ ಜಾಥಾ ನಡೆಸಿ ಜನಜಾಗೃತಿ
Team Udayavani, Jan 2, 2022, 5:30 PM IST
ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ರಾಯಚೂರು ರೈಡರ್ ಸಹಯೋಗದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾಕ್ಕೆ ಹೃದಯರೋಗ ತಜ್ಞ ಡಾ| ಸಕಲೇಶ ಪಾಟೀಲ್ ಬೆಟ್ಟದೂರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೊರೊನಾ ಹೊಸ ತಳಿ ಒಮಿಕ್ರಾನ್ ಕುರಿತು ಭಯ ಪಡದೆ ಸಾಮಾಜಿಕ ಅಂತರ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ರಾಯಚೂರು ಜಿಲ್ಲೆಯ ವೈದ್ಯರ ಸಮೂಹದಿಂದ ನೂತನ 2022 ಹೊಸ ವರ್ಷವನ್ನು ವಿನೂತನವಾಗಿ ಆಚರಿಸುವ ಉದ್ದೇಶದಿಂದ ವೈದ್ಯರ ತಂಡದಿಂದ ಸೈಕಲ್ ಮೂಲಕ ಮಾನ್ವಿ ಯಿಂದ ಹಂಪಿ ವರೆಗೆ (120 ಕಿ.ಮೀ.) ತೆರಳಿ ಮಾರ್ಗದಲ್ಲಿ ಬರುವ ಪಟ್ಟಣ ಹಾಗೂ ಗ್ರಾಮಗಳ ಜನರಿಗೆ ದೈಹಿಕ ಸದೃಢತೆಗೆ ಸೈಕಲ್ ಬಳಸುವುದನ್ನು ರೂಢಿಸಿಕೊಂಡಲ್ಲಿ ಮಧುಮೇಹ ಹಾಗೂ ಹೃದಯದ ಕಾಯಿಲೆಗಳು ಬರದಂತೆ ತಡೆಯಬಹುದು ಎಂದರು.
ಡಾ| ಮಂಜುನಾಥ, ಡಾ| ಬಸವರಾಜ ಪಾಟೀಲ್, ಡಾ| ಜಯಪ್ರಕಾಶ ಪಾಟೀಲ್, ಡಾ| ಸುನೀಲ್, ರಾಘವೇಂದ್ರ, ಪ್ರವೀಣಚೂಡ ಸೇರಿದಂತೆ ಇನ್ನಿತರರು ಸೈಕಲ್ ಜಾಥದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್