Raichur: ಮೆಣಸಿನಕಾಯಿ ಬೆಳೆಗೂ ಟ್ಯಾಂಕರ್‌ ನೀರು!


Team Udayavani, Oct 12, 2023, 5:41 PM IST

Raichur: ಮೆಣಸಿನಕಾಯಿ ಬೆಳೆಗೂ ಟ್ಯಾಂಕರ್‌ ನೀರು!

ರಾಯಚೂರು: ಈ ಬಾರಿ ಮಳೆರಾಯ ಕೈಕೊಟ್ಟಿರುವುದು ರೈತಾಪಿ ವರ್ಗವನ್ನು ಅಕ್ಷರಶಃ ಸಂಕಷ್ಟಕ್ಕೀಡು ಮಾಡಿದ್ದು, ಬೆಳೆ ರಕ್ಷಣೆಗೆ ನಾನಾ ಪಡಿಪಾಟಲು ಎದುರಿಸುತ್ತಿದ್ದಾರೆ. ಟಿಎಲ್‌ಬಿಸಿ ಕೊನೆ ಭಾಗಕ್ಕೆ ನೀರು ಬಾರದೆ ಮೆಣಸಿನಕಾಯಿ ಬೆಳೆ ರಕ್ಷಿಸಿಕೊಳ್ಳಲು ಟ್ಯಾಂಕರ್‌ ಮೂಲಕ ನೀರು ಹರಿಸಲಾಗುತ್ತಿದೆ.

ತಾಲೂಕಿನ ಮರ್ಚೆಟ್ಹಾಳ್‌ ಗ್ರಾಮದಲ್ಲಿ ರೈತರು ಮೆಣಸಿನಕಾಯಿಗೆ ನೀರು ಹಾಯಿಸಲು ಟ್ರ್ಯಾ ಕ್ಟರ್‌ ಟ್ಯಾಂಕರ್‌ ಮೊರೆ ಹೋಗಿದ್ದಾರೆ. ಐಸಿಸಿ ಸಭೆಯಲ್ಲಿ ಟಿಎಲ್‌ಬಿಸಿಗೆ ವಾರಬಂದಿ ಲೆಕ್ಕದಲ್ಲಿ ಕಾಲುವೆಗೆ ನೀರು ಹರಿಸಲಾಗಿತ್ತು. ಈ ಬಾರಿ ಸಾಕಷ್ಟು ರೈತರು ಮೆಣಸಿನಕಾಯಿ ಬಿತ್ತನೆ ಮಾಡಿದ್ದಾರೆ. ಆದರೆ, ಬೆಳೆಗೆ ನೀರು ಬೇಕಾದ ಹೊತ್ತಲ್ಲಿ ಕಾಲುವೆಗೆ ನೀರು ಬಂದಿಲ್ಲ. ಇದರಿಂದ ನೀರು ಸಾಲದೆ ರೈತರು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಕೇವಲ ಈ ಗ್ರಾಮ ಮಾತ್ರವಲ್ಲದೇ ಸುತ್ತಲಿನ ಗ್ರಾಮದ ರೈತರು ಕೂಡ ಇದೇ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಮರ್ಚೆಟ್ಹಾಳ, ದಿನ್ನಿ, ಗಾರಲದಿನ್ನಿ, ಮಠಮಾರಿ, ನೆಲಹಾಳ್‌ ಸೀಮೆಯಲ್ಲಿ ಈ ಬಾರಿ ಮೆಣಸಿನಕಾಯಿ ಹೆಚ್ಚಾಗಿ ಬೆಳೆಯಲಾಗಿದೆ. ಈ ಭಾಗದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.70ರಷ್ಟು ಮೆಣಸಿನಕಾಯಿ, ಶೇ.30ರಷ್ಟು ಹತ್ತಿ ಬಿತ್ತನೆಯಾಗಿದೆ. ಮೆಣಸಿನಕಾಯಿ ಬೆಳೆಗೆ ಕನಿಷ್ಠ ನಾಲ್ಕು ಬಾರಿಯಾದರೂ ನೀರು ಹರಿಸಬೇಕಿದೆ.

ಆದರೆ, ಈ ಬಾರಿ ಕಾಲುವೆಗೆ ಕೇವಲ ಒಂದು ಬಾರಿ ಮಾತ್ರ ನೀರು ಬಂದಿದೆ. ವಾರಬಂದಿ ಪ್ರಕಾರ ನೀರು ಹರಿಸಲು ನಿರ್ಧರಿಸಿದರೂ ಕೊನೆ ಭಾಗಕ್ಕೆ ಮಾತ್ರ ತಲುಪುತ್ತಿಲ್ಲ. ಗ್ರಾಮೀಣ ಕ್ಷೇತ್ರದ ಶಾಸಕರು ನೀರಾವರಿ ಅಧಿಕಾರಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಾಲುವೆಗಳಿಗೆ ನೀರು ಬರುವ ಸಾಧ್ಯತೆಗಳು ತೀರ ಕಡಿಮೆಯಿದ್ದು, ಪರ್ಯಾಯ ಮಾರ್ಗಗಳೇ ವಾಸಿ ಎನ್ನುವ ನಿಲುವಿಗೆ ಬಂದಿದ್ದಾರೆ.

ನೀರಿಗಾಗಿ ಎಕರೆಗೆ 15 ಸಾವಿರ ಖರ್ಚು ಒಂದು ಟ್ಯಾಂಕರ್‌ ನೀರು ಹರಿಸಲು ರೈತರು 600 ರೂ. ಖರ್ಚು ಮಾಡಬೇಕಿದೆ. ಟ್ರ್ಯಾ ಕ್ಟರ್‌
ಬಾಡಿಗೆ ಪಡೆದು ನೀರು ಹರಿಸುತ್ತಿದ್ದಾರೆ. ಒಂದು ಎಕರೆಗೆ ನೀರು ಹಾಯಿಸಲು 15 ಸಾವಿರಕ್ಕೂ ಹೆಚ್ಚು ಖರ್ಚು ಬರುತ್ತಿದೆ. 3-4 ಎಕರೆ
ಜಮೀನು ಹೊಂದಿದ ರೈತರು ನೀರಿಗಾಗಿಯೇ 40-50 ಸಾವಿರ ರೂ. ಖರ್ಚು ಮಾಡಬೇಕಿದೆ. ಬಹಳಷ್ಟು ಸಣ್ಣ ರೈತರು ಜಮೀನುಗಳನ್ನು ಲೀಜ್‌ ಪಡೆದಿದ್ದಾರೆ. ಈಗ ಖರ್ಚು-ವೆಚ್ಚಗಳನ್ನು ಸರಿದೂಗಿಸಲು ಸಾಧ್ಯವಾಗದೆ ಸಾಲದ ಸುಳಿಗೆ
ಸಿಲುಕುವಂತಾಗಿದೆ.

ಪ್ರತಿ ವರ್ಷ ಮೂರು ನಾಲ್ಕು ಕಂತುಗಳಲ್ಲಿ ನೀರು ಲಭ್ಯವಾಗುತ್ತಿತ್ತು. ಆದರೆ, ಈ ಬಾರಿ ಕೇವಲ ಒಂದು ಕಂತು ಮಾತ್ರ ನೀರು ಹರಿಸಲಾಗಿದೆ. ಮೆಣಸಿನಕಾಯಿ ಹೂ ಬಿಡುತ್ತಿದ್ದು, ಇಂಥ ವೇಳೆ ನೀರು ಹರಿಸದಿದ್ದರೆ ಬೆಳೆ ಕೈಕೊಡಲಿದೆ. ಇದರಿಂದ ಟ್ಯಾಂಕರ್‌ ಮೂಲಕ ನೀರು ಹರಿಸುತ್ತಿದ್ದೇವೆ. ಅಕ್ಕಪಕ್ಕದ ಜಮೀನುಗಳಲ್ಲಿ ಬೋರ್‌ಗಳಿದ್ದರೂ ಮಳೆ ಇಲ್ಲದೇ ನೀರು ಇಂಗಿದೆ. ಇನ್ನೂ 2-3 ಬಾರಿಯಾದರೂ ನೀರು ಹರಿಸಬೇಕಿದ್ದು, ಸಾವಿರಾರು ರೂ. ಖರ್ಚು ಮಾಡದೆ ವಿಧಿ ಇಲ್ಲ.
ಶರಣಪ್ಪ ಸೋಮಣ್ಣವರ್‌, ರೈತ, ಮರ್ಚೆಟ್ಹಾಳ್‌

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.