ರಾಯಚೂರು ವಿವಿಗೆ ಎರಡು ಕೋಟಿ ಅನುದಾನ ಭರವಸೆ

ಸಾಮಾಜಿಕ ಚಿತ್ರಣ ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ

Team Udayavani, Sep 29, 2021, 6:21 PM IST

ರಾಯಚೂರು ವಿವಿಗೆ ಎರಡು ಕೋಟಿ ಅನುದಾನ ಭರವಸೆ

ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ ಸರ್ವಾಂಗೀಣ ಪ್ರಗತಿಗೆ ಶಾಸಕರ ಅನುದಾನದಡಿ 2 ಕೋಟಿ ರೂ. ನೀಡುವುದಾಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ತಿಳಿಸಿದರು.

ವಿಶ್ವವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಕುಲಪತಿ ಮತ್ತು ಕುಲಸಚಿವರ ಜೊತೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ನನ್ನ ವೃತ್ತಿ, ನನ್ನ ಜನ್ಮ ಭೂಮಿ ಎಂಬ ಭಾವನೆಯಿಂದ ಕೆಲಸ ಮಾಡಿದಾಗ ಮಾತ್ರ ಈ ವಿಶ್ವವಿದ್ಯಾಲಯ ಪ್ರಗತಿ ಹೊಂದಲು ಸಾಧ್ಯ. ವಿಶ್ವವಿದ್ಯಾಲಯಕ್ಕೆ 371 (ಜೆ)ಗೆ ಬರುವಂತ ಅನುದಾನ ಬಳಸಲು ಅವಕಾಶವಿದೆ. ಈ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದರು.

ಶಿಕ್ಷಣ, ಅಭಿವೃದ್ಧಿ, ಉದ್ಯೋಗ ಮೂರು ಪ್ರಮುಖ ಅಂಶಗಳು ಸಾಮಾಜಿಕ ಚಿತ್ರಣ ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ. ಅತಿಥಿ ಉಪನ್ಯಾಸಕರು ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಸಿಬ್ಬಂದಿ ಕುಂದು ಕೊರತೆ ಹಾಗೂ ವಿವಿಯ ಮೂಲ ಸೌಲಭ್ಯಗಳ ಕುರಿತು ಚರ್ಚಿಸಿದರು.

ವಿವಿ ಕುಲಪತಿ ಪ್ರೊ| ಹರೀಶ ರಾಮಸ್ವಾಮಿ ಮಾತನಾಡಿ, ಆದರ್ಶ ವಿಶ್ವವಿದ್ಯಾಲಯ ಮಾಡುವ ದೃಢ ಸಂಕಲ್ಪದಿಂದ ಕಾರ್ಯಾರಂಭಿಸಿದ್ದೇವೆ. ಆರ್ಥಿಕ ಕೊರತೆ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಶೈಕ್ಷಣಿಕ ಸೌಲಭ್ಯಗಳ ಕೊರತೆ ನಡುವೆಯೂ ವಿವಿ ಕಟ್ಟಲು ಶ್ರಮಿಸುತ್ತಿದ್ದೇವೆ ಎಂದರು.

ಯುಜಿಸಿ 2 ಎಫ್‌ ಮಾನ್ಯತೆ ನೀಡಿದ್ದರೂ ಬೋಧಕ ಸಿಬ್ಬಂದಿ ಆಗದಿದ್ದರೆ ಯುಜಿಸಿಯ 12ಬಿ ಮಾನ್ಯತೆ ಸಿಗುವುದಿಲ್ಲ. ಕೇವಲ 88 ಅತಿಥಿ ಉಪನ್ಯಾಸಕರಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಕೇವಲ ಮೂರು ಪ್ರಾಧ್ಯಾಪಕರು ಹಾಗೂ ಏಳು ಬೋಧಕೇತರ ಸಿಬ್ಬಂದಿ ಕಾಯಂ ನೌಕರರಾಗಿದ್ದು ವಿಶ್ವವಿದ್ಯಾಲಯದಲ್ಲಿ ಅನೇಕ ಸಿಬ್ಬಂದಿ ಆರು ತಿಂಗಳಿಂದ ವೇತನ ರಹಿತವಾಗಿ ಕೆಲಸ ಮಾಡುತ್ತಿದ್ದಾರೆ.

ತೀವ್ರತರ ಮಾನವ ಸಂಪನ್ಮೂಲದ ಕೊರತೆ ಕಾಡುತ್ತಿದೆ ಎಂದರು. ಈ ವೇಳೆ ಕುಲಸಚಿವ ಪ್ರೊ| ವಿಶ್ವನಾಥ ಎಂ, ಮೌಲ್ಯಮಾಪನ ಕುಲಸಚಿವ ಪ್ರೊ| ಯರ್ರಿಸ್ವಾಮಿ ಎಂ., ಉಪ ಕುಲಸಚಿವ ಡಾ| ಜಿ.ಎಸ್‌. ಬಿರಾದಾರ್‌, ಸಿಡಿಸಿ ನಿರ್ದೇಶಕ ಡಾ| ರಾಘವೇಂದ್ರ ಫತ್ತೇಪುರ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ| ನುಸ್ರತ್‌ ಫಾತಿಮಾ, ದೈಹಿಕ ಶಿಕ್ಷಣ ನಿರ್ದೇಶಕ ವಾಸುದೇವ ಜೇವರ್ಗಿ ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.