ಬಿಸಿಲೂರ ಜನರ ಕಣ್ಮನ ತಣಿಸಿದ ಚಿತ್ರಸಂತೆ

ವಿವಿಧ ಜಿಲ್ಲೆಗಳ ಕಲಾವಿದರಿಂದ ಚಿತ್ರ ಪ್ರದರ್ಶನ ಜನಾಭಾವದಿಂದ ಕಲಾವಿದರಲ್ಲಿ ನಿರಾಸೆ ಕಲಾಸಕ್ತರಿಂದ ಕಲಾಕೃತಿ ಖರೀದಿ

Team Udayavani, Feb 17, 2020, 1:40 PM IST

17-February-15

ರಾಯಚೂರು: ನಗರದಲ್ಲಿ ರವಿವಾರ ನಡೆದ ಚಿತ್ರಸಂತೆ ಉರಿಬಿಸಿಲಲ್ಲಿಯೂ ಕಲಾಸಕ್ತರ ಕಣ್ಮನ ತಣಿಸಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರು ತಮ್ಮ ಚಿತ್ರಕಲೆಗಳನ್ನು ಪ್ರದರ್ಶನಕ್ಕಿಟ್ಟಿದ್ದು ನೋಡುಗರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.

ನಗರದ ಸಾರ್ವಜನಿಕ ಉದ್ಯಾವನ ಮುಂಭಾಗದ ಫುಟ್‌ಪಾತ್‌ ಮೇಲೆ ಕಲಾ ಸಂಕುಲ ಸಂಸ್ಥೆಯಿಂದ ನಗರದಲ್ಲಿ ಎರಡನೇ ವರ್ಷವೂ ಚಿತ್ರ ಸಂತೆ ನಡೆಸಲಾಯಿತು. ಜಿಲ್ಲೆ ಮಾತ್ರವಲ್ಲದೇ, ರಾಜ್ಯದ ವಿವಿಧ ಜಿಲ್ಲೆಗಳಿಂದ ಅನೇಕ ಕಲಾವಿದರು ಆಗಮಿಸಿದ್ದರು. ತಾವು ಬಿಡಿಸಿದ ವಿವಿಧ ಬಗೆಯ ಚಿತ್ರಕಲಾಕೃತಿಗಳನ್ನು ಪ್ರದರ್ಶಿಸಿ ಮಾರಿದರು. ಆದರೆ, ಬೆಳಗ್ಗೆಯೇ ಸಂತೆ ಆರಂಭವಾದರೂ ಜನ ನಿರೀಕ್ಷಿತ ಮಟ್ಟದಲ್ಲಿ ಬಂದಿರದ ಕಾರಣ ಕಲಾವಿದರು ತುಸು ಬೇಸರ ವ್ಯಕ್ತಪಡಿಸಿದರು. ಆದರೆ, ಕೆಲವೊಂದು ಕಲಾಸಕ್ತರು ಆಗಮಿಸಿ ಕಲಾಕೃತಿಗಳನ್ನು ವೀಕ್ಷಿಸಿದ್ದಲ್ಲದೇ ಚಿತ್ರಕಲೆಗಳನ್ನು ಖರೀದಿಸುತ್ತಿದ್ದದ್ದು ಕಂಡು ಬಂತು.

ಧ್ಯಾನಸ್ಥ ಬುದ್ಧ, ಶಿಲ್ಪಕಲಾ ವೈಭವ, ಸುಂದರ ಪ್ರಕೃತಿ, ಹಳ್ಳಿಗಾಡಿನ ಸೊಗಡು ಕಣ್ಕಟ್ಟುವಂಥ ಕಲಾಕೃತಿಗಳು ಸಾಕಷ್ಟಿದ್ದವು. ಕಾಲಕ್ಕೆ ತಕ್ಕಂತೆ ಕಲಾವಿದರು ಬದಲಾವಣೆ ಬಯಸಿದ್ದಾರೆ ಎನ್ನಲಿಕ್ಕೆ ಅನೇಕ ಕಲಾಕೃತಿಗಳು ಪುಷ್ಟಿ ನೀಡಿದವು. ಹೆಡ್‌ಸೆಟ್‌ ಹಾಕಿಕೊಂಡು ಸಂಗೀತ ಆಲಿಸುತ್ತಿರುವ ಫಾರಿನ್‌ ತಳಿಯ ನಾಯಿ, ಸೆಲ್ಫಿ ತೆಗೆದುಕೊಳ್ಳುತ್ತಿರುವ ಕೋತಿಗಳು, ಮೊಬೈಲ್‌ನಲ್ಲೇ ಏನನ್ನೋ ನೋಡುತ್ತಿರುವ ಕೋತಿಗಳ ಚಿತ್ರಗಳು ಸೆಳೆದವು. ಇನ್ನು ಕೆಲ ಕಲಾವಿದರು ಸ್ಥಳದಲ್ಲೇ ಚಿತ್ರ ಬಿಡಿಸಿಕೊಡುತ್ತಿದ್ದರು. ಎದುರಿಗೆ ಕೂಡಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಪ್ರೇಕ್ಷಕರ ಚಿತ್ರ ಬಿಡಿಸಿ ಕೊಡುತ್ತಿದ್ದರು.

ಶಂಕರಗೌಡರ ಸ್ಮರಣೆ: ಜಿಲ್ಲೆ ಎಂದಿಗೂ ಮರೆಯದ ಕಲಾವಿದರಲ್ಲಿ ಶಂಕರಗೌಡ ಬೆಟ್ಟದೂರು ಅವರ ಹೆಸರು ಅಗ್ರಗಣ್ಯ. ಶಾಂತಿನಿಕೇತನದಲ್ಲಿ ಅಧ್ಯಯನ ಮಾಡಿದ ಈ ಕಲಾವಿದರ ಕಲಾಕೃತಿಗಳನ್ನು ನೋಡುವುದೇ ಸಂಭ್ರಮ. ಚಿತ್ರಸಂತೆಯ ವೇದಿಕೆಗೆ ಅವರ ಹೆಸರನ್ನೇ ಇಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದು ಒಂದು ವಿಶೇಷವಾದರೆ, ಈ ಬಾರಿ ಶಂಕರಗೌಡರು ಬಿಡಿಸಿದ ಕಲಾಕೃತಿಗಳನ್ನು ಪ್ರದರ್ಶನಕ್ಕಿಟ್ಟಿರುವುದು ಮತ್ತೂಂದು ವಿಶೇಷವಾಗಿತ್ತು. ಅವರ ಮಗ ಶರಣ ಪಾಟೀಲ ಬೆಟ್ಟದೂರು ಅವರೇ ವಿಶೇಷ ಆಸ್ಥೆ ವಹಿಸಿ ಅವರ ಕಲಾಕೃತಿಗಳನ್ನು ಪ್ರದರ್ಶಿಸಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.