ಸಂಡೇ ನೋ ಪಾಸಿಟಿವ್‌


Team Udayavani, May 25, 2020, 2:38 PM IST

25-May-21

ರಾಯಚೂರು: ಜಿಲ್ಲೆಯಲ್ಲಿ ಶನಿವಾರ 40 ಕೋವಿಡ್ ಪಾಸಿಟಿವ್‌ ಬಂದು ದಿಗ್ಭ್ರಾಂತಿ ಮೂಡಿಸಿದ್ದರೆ ರವಿವಾರ ಯಾವುದೇ ಪಾಸಿಟಿವ್‌ ಪ್ರಕರಣ ಬಾರದಿರುವುದು ಜಿಲ್ಲೆಯ ಜನ ನಿಟ್ಟುಸಿರು ಬಿಡುವಂತೆ ಮಾಡಿತು.

ಮುಂಬಯಿನಿಂದ ವಲಸೆ ಬಂದವರಲ್ಲಿ ಪಾಸಿಟಿವ್‌ ಗಳ ಸಂಖ್ಯೆ ಮಿತಿ ಮೀರುತ್ತಿದೆ. ಕೇವಲ ಐದು ದಿನದಲ್ಲೇ 66 ಪ್ರಕರಣಗಳು ದೃಢಪಟ್ಟಿದ್ದವು. ಏರುಗತಿಯಲ್ಲಿ ಸಾಗಿದ್ದ ಈ ಸಂಖ್ಯೆ ರವಿವಾರ ಎಷ್ಟು ಬರಬಹುದು ಎಂಬ ಕುತೂಹಲ ಮೂಡಿಸಿತ್ತು. ಆದರೆ, ಯಾವುದೇ ಪಾಸಿಟಿವ್‌ ಬಾರದೆ ತುಸು ನೆಮ್ಮದಿ ತರಿಸಿತು.

ಜಿಲ್ಲೆಯಿಂದ ರವಿವಾರ 1,413 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 973 ವರದಿಗಳು ನೆಗೆಟಿವ್‌ ಬಂದಿವೆ. 3,135 ವರದಿ ಬರಬೇಕಿದೆ. ಫೀವರ್‌ ಕ್ಲಿನಿಕ್‌ಗಳಲ್ಲಿಂದು 1,398 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ 10,498 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 5,878 ವರದಿಗಳು ನೆಗೆಟಿವ್‌ ಆಗಿವೆ. ರೋಗ ಲಕ್ಷಣಗಳಿಲ್ಲದ ಕಾರಣ 6 ವರದಿಗಳು ತಿರಸ್ಕೃತಗೊಂಡಿವೆ. ವೈರಸ್‌ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ ಸಂಜೆ ನಾಲ್ವರು ಮುಂಬಯಿನಿಂದ ಬಂದಿದ್ದು, ಕ್ವಾರಂಟೈನ್‌ ಮಾಡಲಾಗಿದೆ. ರವಿವಾರ ಬೆಳಗ್ಗೆ ಮುಂಬಯಿನಿಂದ ಎರಡು ಬಸ್‌ಗಳಲ್ಲಿ ವಲಸಿಗರು ಬಂದಿದ್ದು, ಅವರಿಗೆಲ್ಲ ಜಿಲ್ಲಾಡಳಿತ ರೆಡ್‌ ಕ್ರಾಸ್‌ ಸಂಸ್ಥೆ ಹಾಗೂ ಎನ್‌ಜಿಒಗಳ ಸಹಯೋಗದಲ್ಲಿ ಊಟ ಉಪಹಾರ ಕಲ್ಪಿಸಲಾಗಿದೆ. ನಗರದ ಜಹೀರಾಬಾದ್‌ಗೆ ಬಳ್ಳಾರಿಯಿಂದ ಮಹಿಳೆಯೊಬ್ಬರು ಬಂದಿದ್ದು, ಅಕ್ಕಪಕ್ಕದ ಜನ ಆತಂಕಗೊಂಡಿದ್ದಾರೆ. ಅವರನ್ನು ಕ್ವಾರಂಟೈನ್‌ ಮಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ ಪ್ರಸಂಗ ನಡೆದಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.