ಮತ್ತೆ ನಾಲ್ವರಿಗೆ ಸೋಂಕು
Team Udayavani, Jun 19, 2020, 11:58 AM IST
ರಾಯಚೂರು: ಜಿಲ್ಲೆಯಲ್ಲಿ ಗುರುವಾರ ಹೊಸ ನಾಲ್ಕು ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಿಂದ ಗುರುವಾರ 305 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೋವಿಡ್-19 ಫಲಿತಾಂಶಕ್ಕಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಗುರುವಾರ ಬಂದ ವರದಿಗಳಲ್ಲಿ 107 ನೆಗೆಟಿವ್ ಆಗಿವೆ.
ಜಿಲ್ಲೆಯಿಂದ ಇದೂವರೆಗೆ ಒಟ್ಟು 19,144 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 18,034 ವರದಿಗಳು ನೆಗೆಟಿವ್ ಆಗಿವೆ. ಉಳಿದ 690 ಸ್ಯಾಂಪಲ್ ಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್ಗಳಲ್ಲಿ ಗುರುವಾರ 562 ಜನರನ್ನು ಥರ್ಮಲ್ ಸ್ಕ್ರಿನಿಂಗ್ಗೆ ಒಳಪಡಿಸಲಾಗಿದೆ. ಗುರುವಾರ ಜಿಲ್ಲೆಯಲ್ಲಿ ಕೋವಿಡ್ -19ನ ನಾಲ್ಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ 414 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಕೋವಿಡ್-19 ದೃಢಪಟ್ಟು ಆಸ್ಪತ್ರೆಗೆ ದಾಖಲಿಸಲಾಗಿದ್ದವರ ಪೈಕಿ 137 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 74, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 30, ಮಾನ್ವಿ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 34 ಹಾಗೂ ಲಿಂಗಸುಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 42 ಸೇರಿದಂತೆ ಒಟ್ಟು 180 ಜನರು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿರಿಸಿ ನಿಗಾವಹಿಸಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ