ಲಾಕ್‌ಡೌನ್‌ ಸಂಕಟ; ಪಡಿತರಕ್ಕೆ ಪರದಾಟ

ಅಕ್ರಮ ಎಸಗಿದ ಮೂರು ರೇಷನ್‌ ಅಂಗಡಿ ಪರವಾನಗಿ ರದ್ದು ಆರೋಗ್ಯ ಸಿಬ್ಬಂದಿಗೆ ಸಿಗದ ಸುರಕ್ಷತಾ ಸಾಮಗ್ರಿ

Team Udayavani, Apr 17, 2020, 11:44 AM IST

17-April-06

ರಾಯಚೂರು: ಎನ್‌.ಹೊಸೂರು ನ್ಯಾಯಬೆಲೆ ಅಂಗಡಿಯಲ್ಲಿ ಬಕೆಟ್‌ ನಲ್ಲಿಯೇ ಅಕ್ಕಿ ವಿತರಿಸುತ್ತಿರುವುದು.

ರಾಯಚೂರು: ಲಾಕ್‌ಡೌನ್‌ ಘೋಷಣೆಯಾಗುತ್ತಿದ್ದಂತೆ ಗುಳೆ ಹೋಗಿದ್ದ 50 ಸಾವಿರಕ್ಕೂ ಅಧಿಕ ಜನ ಮರಳಿ ಬಂದಿದ್ದು, ಎರಡು ತಿಂಗಳ ಪಡಿತರ ನೀಡಬೇಕಾದ ನ್ಯಾಯಬೆಲೆ ಅಂಗಡಿಗಳು ಗ್ರಾಹಕರಿಗೆ ವಂಚಿಸುತ್ತಿರುವ ದೂರುಗಳು ಕೇಳಿ ಬರುತ್ತಿವೆ.

ಈಗಾಗಲೇ ಜಿಲ್ಲೆಯ ಮೂರು ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗಿದೆಯಾದರೂ ಅಕ್ರಮಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಜಿಲ್ಲೆಯಲ್ಲಿ 19.20 ಲಕ್ಷ ಜನಸಂಖ್ಯೆಯಿದ್ದು, 715 ನ್ಯಾಯಬೆಲೆ ಅಂಗಡಿಗಳಿವೆ. 24 ಅಂಗಡಿ ಸ್ಥಗಿತಗೊಂಡಿದ್ದರೆ, ಮತ್ತೆ ಮೂರು ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. 53,035 ಅಂತ್ಯೋದಯ, 4,57 ಲಕ್ಷ ಬಿಪಿಎಲ್‌ , 6,719 ಎಪಿಎಲ್‌ ಕಾರ್ಡ್ದಾರರಿದ್ದಾರೆ. ಜಿಲ್ಲೆಗೆ ಈವರೆಗೂ 1.67 ಲಕ್ಷ ಕ್ವಿಂಟಲ್‌ ಅಕ್ಕಿ ಬಂದಿದೆ. ಐದು ದಿನದೊಳಗೆ 2 ತಿಂಗಳ ರೇಶನ್‌ ನೀಡಬೇಕೆಂದು ತಿಳಿಸಿದ್ದರೂ ಇನ್ನೂ ಮುಗಿದಿಲ್ಲ.

ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿಯೊಬ್ಬರಿಗೆ 5 ಕೆ.ಜಿ ಅಕ್ಕಿ, ಎರಡು ಕೆ.ಜಿ ಗೋದಿ ನೀಡಿದರೆ, ಅಂತ್ಯೋದಯ ಕಾರ್ಡ್‌ದಾರರಿಗೆ ತಿಂಗಳಿಗೆ 35 ಕೆ.ಜಿ ಅಕ್ಕಿ ನೀಡಬೇಕು. ಎರಡು ತಿಂಗಳ ಪಡಿತರ ಏಕಕಾಲಕ್ಕೆ ನೀಡಲಾಗುತ್ತಿದೆ. ಆದರೆ, ಸಾಕಷ್ಟು ಕಡೆ ಅಂತ್ಯೋದಯ ಕಾರ್ಡ್‌ದಾರರಿಗೆ ಕಡಿಮೆ ಧಾನ್ಯ ನೀಡಲಾಗುತ್ತಿದೆ. ಇನ್ನೂ ತೂಕದಲ್ಲೂ ಸಾಕಷ್ಟು ವ್ಯತ್ಯಾಸ ಮಾಡಲಾಗುತ್ತಿದೆ. ಕೆ.ಜಿ ಲೆಕ್ಕದಲ್ಲಿ ಹಾಕದೇ ಬಕೆಟ್‌, ಪ್ಲಾಸ್ಟಿಕ್‌ ಡಬ್ಬಿಗಳಲ್ಲೇ ಹಾಕಲಾಗುತ್ತಿದೆ. ಲಾಕ್‌ಡೌನ್‌ ಅವಕಾಶ ಬಳಸಿಕೊಂಡಿರುವ ರೇಶನ್‌ ಅಂಗಡಿ ಮಾಲೀಕರು ಗ್ರಾಹಕರಿಂದ 10-30 ರೂ.ವರೆಗೂ ಹಣ ಪಡೆಯುತ್ತಿದ್ದಾರೆ.

ದೇವದುರ್ಗ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ 100 ರೂ. ಪಡೆದಿರುವ ಕುರಿತು ವರದಿಯಾಗಿದೆ. ನ್ಯಾಯಬೆಲೆ ಅಂಗಡಿಗಳ ಮುಂದೆ ಜನ ಗುಂಪು ನಿಂತರೂ ತಿಳಿ ಹೇಳುವವರಿಲ್ಲ. ತಮಗೆ ತಿಳಿದಾಗ ಬಂದು ರೇಶನ್‌ ಹಾಕುತ್ತಿದ್ದಾರೆ.ಹೀಗಾಗಿ ಜನ ಬೆಳಗ್ಗೆಯಿಂದ ಸಂಜೆವರೆಗೂ ಕಾಯುವ ಸ್ಥಿತಿ ಇದೆ.

ಈಗಾಗಲೇ ಎರಡು ತಿಂಗಳ ರೇಶನ್‌ ನೀಡಲಾಗುತ್ತಿದೆ. ಗುಳೆ ಹೋಗಿ ಬಂದವರಲ್ಲಿ ಬಹುತೇಕರಿಗೆ ಬಿಎಪಿಎಲ್‌ ಕಾರ್ಡ್‌ಗಳಿವೆ. ಕಾರ್ಡ್‌ ಇಲ್ಲದವರಿಗೆ ಎಸ್‌ ಡಿಆರ್‌ಎಫ್‌ನಡಿ ಪಡಿತರ ನೀಡುತ್ತಿದ್ದೇವೆ. ಅಕ್ರಮ ನಡೆದಿರುವ ಬಗ್ಗೆ ಖಚಿತ ಮಾಹಿತಿ ನೀಡಿದರೆ ಅಂಥ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.  ಈಗಾಗಲೇ ಜಿಲ್ಲೆಯ 3 ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಈವರೆಗೂ ಶೇ.80ಕ್ಕೂ ಅಧಿಕ ಪಡಿತರ ವಿತರಿಸಲಾಗಿದೆ.
ಅರುಣಕುಮಾರ್‌ ಸಂಗಾವಿ,
ಉಪ ನಿರ್ದೇಶಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ರಾಯಚೂರು

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.