ಬಾಲ ಕಾರ್ಮಿಕರ ರಕ್ಷಣೆಗೆ ಸಹಕಾರ ಅಗತ್ಯ
ಐಸಿಡಿಎಸ್ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ
Team Udayavani, Feb 13, 2020, 5:08 PM IST
ರಾಯಚೂರು: ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಸಂಬಂಧಿಸಿದವರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಐಸಿಡಿಎಸ್ ಮೇಲುಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಅತಿ ಪ್ರಮುಖ ಪಾತ್ರ ವಹಿಸುತ್ತದೆ. ಅದರೊಂದಿಗೆ ಶಿಕ್ಷಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಇದಕ್ಕೆ ಕೈ ಜೋಡಿಸಬೇಕು ಎಂದರು.
ಮಕ್ಕಳ ಸಹಾಯವಾಣಿಗೆ ಬರುವ ಕರೆಗಳನ್ನು ದಾಖಲಿಸಿಕೊಂಡು, ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಬೇಕು. ಅದರಲ್ಲಿ ಎಷ್ಟು ಪ್ರಕರಣಗಳನ್ನು ಯಶಸ್ವಿ ಕಾರ್ಯಾಚರಣೆ ಮಾಡಲಾಗಿದೆ ಎಂಬುದನ್ನು ಅಂಕಿ ಅಂಶಗಳೊಂದಿಗೆ ಇಲಾಖೆಯ ವೆಬ್ಸೈಟ್ನಲ್ಲಿ ಅಪ್ ಲೋಡ್ ಮಾಡಬೇಕು ಎಂದರು.
ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರಗಳಿಂದ 0-5 ವರ್ಷದ ತೂಕ ಕಡಿಮೆ ಇರುವ ಮಕ್ಕಳಿಗಾಗಿ ಪೌಷ್ಠಿಕ ಆಹಾರ ನೀಡುತ್ತಿದ್ದು, ಇದರಿಂದ 794 ಕಡಿಮೆ ತೂಕದ ಮಕ್ಕಳು ಸುಧಾರಣೆ ಕಂಡಿದ್ದಾರೆ. ಪ್ರತಿ ತಿಂಗಳಿಗೊಮ್ಮೆ ನುರಿತ ವೈದ್ಯರಿಂದ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇದರಿಂದ ಅಪೌಷ್ಟಿಕತೆ ಕಡಿಮೆ ಮಾಡಲು ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ವಿವರಿಸಿದರು.
ಈ ವೇಳೆ ಎಸ್ಪಿ ಡಾ| ಸಿ.ಬಿ. ವೇದಮೂರ್ತಿ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ ಜಿ., ಐಎಎಸ್ ಪ್ರೋಬೆಷನರಿ ಅಧಿಕಾರಿ ಯುಕೇಶಕುಮಾರ, ಡಿಡಿಪಿಐ ಡಿ.ಎಚ್. ಗೋನಾಳ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗ್ಡೆ, ಗಿಲ್ಲೆಸೂಗೂರು ಸಿಡಿಪಿಒ ಮಂಜುನಾಥ, ಅಬಕಾರಿ ಇಲಾಖೆ ಉಪ ಆಯುಕ್ತರಾದ ಕೆ.ಪ್ರಶಾಂತಕುಮಾರ, ದೇವದುರ್ಗ ಸಿಡಿಪಿಒ ಮಹೇಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿ ಕಾರಿ ರಾಮಕೃಷ್ಣ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್