34 ಸೋಂಕಿತರು ಗುಣಮುಖ-ಬಿಡುಗಡೆ

ರೋಗಿಗಳ ಮುಖದಲ್ಲಿ ಮಂದಹಾಸ |ನಿಟ್ಟುಸಿರು ಬಿಟ್ಟ ಎಡೆದೊರೆ ನಾಡಿನ ಜನರು

Team Udayavani, Jun 1, 2020, 10:45 AM IST

01-June-24

ಸಾಂದರ್ಭಿಕ ಚಿತ್ರ

ರಾಯಚೂರು: ಒಪೆಕ್‌ ಆಸ್ಪತ್ರೆ ಐಸೋಲೇಶನ್‌ ವಾರ್ಡ್‌ನಲ್ಲಿ ದಾಖಲಾಗಿದ್ದ 34 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ರವಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ರೋಗಿಗಳ ಮುಖದಲ್ಲಿ ಮಂದಹಾಸ ಮೂಡಿದ್ದರೆ, ಜಿಲ್ಲೆಯ ಜನ ನಿಟ್ಟುಸಿರು ಬಿಡುವಂತಾಗಿದೆ.

ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ರೋಗಿಗಳ ಮೇಲೆ ಪುಷ್ಪವೃಷ್ಟಿ ಮಾಡಿ ಆಸ್ಪತ್ರೆಯಿಂದ ಬೀಳ್ಕೊಟ್ಟರು. ಬಳಿಕ ಆಂಬುಲೆನ್ಸ್‌ ಮೂಲಕ ಅವರ ಮನೆಗೆ ಕಳುಹಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ಜಿಲ್ಲೆಯಲ್ಲಿ ಮೇ 17ರಿಂದ ಸೋಂಕು ಹರಡಿದೆ. ಸೋಂಕಿತರನ್ನು ಒಪೆಕ್‌ ಆಸ್ಪತ್ರೆಯಲ್ಲಿರುವ ಐಸೋಲೇಶನ್ ವಾರ್ಡ್‌ಗೆ ಸ್ಥಳಾಂತರಿಸಿ 14 ದಿನ ಚಿಕಿತ್ಸೆ ನೀಡಲಾಗಿತ್ತು. ಅದರಲ್ಲಿ 34 ಜನ ಸಂಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ವರದಿ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ನಂತರ ಗುಣಮುಖರಾದವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ರಾಯಚೂರು ನಗರ, ಆಟೋ ನಗರ, ಮಡ್ಡಿಪೇಟೆ, ಮಂದಕಲ್‌ ಗ್ರಾಮಕ್ಕೆ ಸೇರಿದ ಕೋವಿಡ್ ಸೋಂಕಿತರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಹೊಂದಿರುವವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರೆಂಟೈನ್‌ ನಲ್ಲಿಯೇ ಇರಬೇಕು. ಅವರ ಕೈಗಳ ಮೇಲೆ ಮುದ್ರೆ ಹಾಕಿ ಕಳುಹಿಸಲಾಗುತ್ತಿದೆ. ಹೊರಗೆ ಓಡಾಡಿದಲ್ಲಿ ಜನರಿಗೆ ತಿಳಿಯುತ್ತದೆ. ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಬಿಡುಗಡೆ ಹೊಂದಿರುವ ಸೋಂಕಿತರು ಮನೆಯಲ್ಲಿರಬೇಕು. ಯಾರ ಸಂಪರ್ಕಕ್ಕೆ ಹೋಗಬಾರದು. ಅವರ ಮೇಲೆ ನಿಗಾವಹಿಸಲು ಪೊಲೀಸರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ನಿತ್ಯ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ಸಂಬಂಧಿಸಿದವರಿಗೆ ಬಿಡುಗಡೆಯಾದವರ ಪಟ್ಟಿ ಈಗಾಗಲೇ ನೀಡಲಾಗಿದೆ. ರಾಯಚೂರು ತಾಲೂಕಿನ ಹೊಸ ಮಲಿಯಬಾದ್‌ ಗ್ರಾಮದ ಎರಡು ವರ್ಷದ ಬಾಲಕಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಮಲಿಯಬಾದ್‌ ಗ್ರಾಮದಲ್ಲಿ ಕಂಟೆನ್ಮೆಂಟ್‌ ಝೋನ್‌ 28 ದಿನ ಮುಂದುವರಿಯಲಿದೆ. ಇನ್ನೂ ಮಹಾರಾಷ್ಟ್ರದಿಂದ ಇನ್ನೂ ಜಿಲ್ಲೆಗೆ ಆಗಮಿಸಲು 200ಕ್ಕೂ ಹೆಚ್ಚು ಅರ್ಜಿಗಳು ಬಾಕಿಯಿವೆ. ಸರಿ ಸುಮಾರು 1500 ಜನ ಬರುವ ನಿರೀಕ್ಷೆಯಿದೆ ಎಂದು ಹೇಳಿದರು.

ದೇವದುರ್ಗ ತಾಲೂಕು ಕೋತಿ ಗುಡ್ಡದಲ್ಲಿ ಮೃತ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಯಾವಳಿಯಂತೆ ಶವಸಂಸ್ಕಾರ ಮಾಡಲಾಗಿದೆ. ಶವ ಸಂಸ್ಕಾರ ದಲ್ಲಿ ಭಾಗಿಯಾದವರ ಮೇಲೆ ನಿಗಾವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ರಿಮ್ಸ್ ಡೀನ್‌ ಡಾ| ಬಸವರಾಜ ಪೀರಾಪುರ, ಒಪೆಕ್‌ ವಿಶೇಷಾಧಿಕಾರಿ ಡಾ| ನಾಗರಾಜ ಗದ್ವಾಲ್‌, ಜಿಲ್ಲಾ ಸರ್ಜನ್‌ ಡಾ| ವಿಜಯ ಶಂಕರ, ಡಿಎಸ್‌ಒ ಡಾ| ನಾಗರಾಜ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi; A crocodile was spotted on the banks of the Tungabhadra river

Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

1-wffsdf

Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.