ಸ್ಪರ್ಧೆ ಎದುರಿಸಲು ಸನ್ನದ್ಧರಾಗಿ
ಸರ್ಕಾರಿ ಕಾಲೇಜುಗಳಿಂದ ಖಾಸಗಿ ಕಾಲೇಜಿಗೆ ಪೈಪೋಟಿ ಲ್ಯಾಪ್ಟಾಪ್ ಶೈಕ್ಷಣಿಕ ಉದ್ದೇಶಕ್ಕೆ ಬಳಸಿ
Team Udayavani, Feb 24, 2020, 6:23 PM IST
ರಾಯಚೂರು: ಗ್ರಾಮೀಣ ಭಾಗದ, ಹಿಂದುಳಿದ ಬಡ ಮಕ್ಕಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಉಚಿತ ಲ್ಯಾಪ್ಟಾಪ್ ವಿತರಿಸುತ್ತಿದೆ. ವಿದ್ಯಾರ್ಥಿಗಳು ಲ್ಯಾಪ್ಟಾಪ್ನ್ನು ಉನ್ನತ ವ್ಯಾಸಂಗಕ್ಕೆ ಬಳಸಿಕೊಳ್ಳಬೇಕು ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಅವರು ಮಾತನಾಡಿದರು. ಇಂದಿನ ಸ್ಮರ್ಧಾತ್ಮಕ ದಿನಗಳಲ್ಲಿ ಎಷ್ಟು ಅಧ್ಯಯನ ಮಾಡಿದರೂ ಕಡಿಮೆಯೇ ಎನ್ನುವಂತಿದೆ. ಹೀಗಾಗಿ ವಿದ್ಯಾರ್ಥಿಗಳು ಲ್ಯಾಪ್ಟಾಪ್ಗ್ಳನ್ನು ಐಎಎಸ್, ಕೆಎಎಸ್ ಹಾಗೂ ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಬಳಸಿಕೊಳ್ಳಬೇಕು. ಬೇಕಾದ ಮಾಹಿತಿಯನ್ನು ಇದರಲ್ಲೇ ಪಡೆಯಬೇಕು. ಸ್ಪರ್ಧೆ ಎದುರಿಸಲು ಸನ್ನದ್ಧರಾಗಬೇಕು ಎಂದರು.
ಇಂದು ಸರ್ಕಾರಿ ಶಾಲಾ ಕಾಲೇಜುಗಳು ಯಾವುದೇ ಖಾಸಗಿ ಸಂಸ್ಥೆಗಳಿಗೆ ಕಡಿಮೆಯಿಲ್ಲ ಎನ್ನುವಂತೆ ಪೈಪೋಟಿ ನೀಡಬೇಕಿದೆ. ಆ ದಿಸೆಯಲ್ಲಿ ಸರ್ಕಾರ ಕೋಟ್ಯಂತರ ರೂ. ವ್ಯಯಿಸುತ್ತಿದೆ. ಆದರೆ, ಕಟ್ಟಡ ನಿರ್ಮಾಣ, ಸೌಲಭ್ಯಗಳ ಹೆಚ್ಚಿಸುವಿಕೆಗಾಗಿ ಮಾತ್ರ ಅನುದಾನ ವಿನಿಯೋಗಿಸದೆ ಜ್ಞಾನ ಹಾಗೂ ಕೌಶಲಾಭಿವೃದ್ಧಿಗೂ ನೀಡಲಾಗುತ್ತಿದೆ. ಇಂಥ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ ಸೇರಿ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯಬೇಕು ಎಂದು ತಿಳಿಸಿದರು.
ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ| ಜೆ.ಎಲ್. ಈರಣ್ಣ ಮಾತನಾಡಿ, ಅತಿ ಹೆಚ್ಚು ವಿದ್ಯಾರ್ಥಿಗಳಿರುವ ರಾಜ್ಯದ ಕೆಲವೇ ಕೆಲವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜೂ ಒಂದು. ನುರಿತ ಸಿಬ್ಬಂದಿ ಹಾಗೂ ಗುಣಮಟ್ಟದ ಶಿಕ್ಷಣ ಇರುವ ಕಾರಣ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು ಪ್ರತಿವರ್ಷ ನಮ್ಮಲ್ಲಿ ದಾಖಲಾಗುತ್ತಿದ್ದಾರೆ. ಅಲ್ಲದೇ ಆಟೋಟಗಳು, ಶೈಕ್ಷಣಿಕ ಸ್ಪರ್ಧೆಗಳು, ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯುವ ಮೂಲಕ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.
ಪ್ರಭಾರ ಪ್ರಾಚಾರ್ಯ ಆರ್.ಮಲ್ಲನಗೌಡ ಮಾತನಾಡಿ, ವಿದ್ಯಾರ್ಥಿನಿಯರು ಕೇವಲ ಪದವಿಗಳಿಗೆ ಮಾತ್ರ ಸೀಮಿತವಾಗದೆ ಉನ್ನತ ಸ್ಥಾನಮಾನ ಹೊಂದಬೇಕು ಎಂದರು. ನಗರಸಭೆ ಸದಸ್ಯ ಶರಣಬಸವ ಬಲ್ಲಟಗಿ, ಇಟಗಿ ಭೀಮಣ್ಣ, ಉಪನ್ಯಾಸಕರಾದ ಡಾ| ಎಂ. ಶಿವರಾಜಪ್ಪ, ಮಹಾಂತೇಶ ಅಂಗಡಿ, ಮಹಾದೇವಪ್ಪ, ಡಾ| ಶಿವಯ್ಯ ಹಿರೇಮಠ, ಡಾ| ಮಹೆಬೂಬ್ಅಲಿ, ಸೈಯ್ಯದ್ ಮಿನಾಜ್, ರವಿ, ಪುಷ್ಪಾ, ಸಪ್ನಾ, ವಿಜಯ ಸರೋದೆ, ಚಂದ್ರು ಗಬ್ಬೂರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.