ಮಹರ್ಷಿ ಭಗೀರಥ ಜಯಂತಿ ಸರಳ ಆಚರಣೆ
Team Udayavani, May 1, 2020, 12:10 PM IST
ರಾಯಚೂರು: ಉಪ್ಪಾರವಾಡಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತಿ ಆಚರಿಸಲಾಯಿತು.
ರಾಯಚೂರು: ಉಪ್ಪಾರವಾಡಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಪ್ಪಾರ ಸಮಾಜದ ಸಹಯೋಗದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ದುರ್ಗೇಶ , ನಗರ ಶಾಸಕ ಡಾ| ಶಿವರಾಜ ಪಾಟೀಲ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಶ್ರೀ ಭಗೀರಥರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಮುಖಂಡರು,ಕೋವಿಡ್ ವೈರಸ್ ಎಲ್ಲೆಡೆ ಹರಡುತ್ತಿದೆ. ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ ಎಂದು ಹೇಳಿದರು. ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ಅಧ್ಯಕ್ಷ ವೆಂಕೂಬ ಉಪ್ಪಾರ, ಜಿಲ್ಲಾ ಉಪ್ಪಾರ ನವ ಯುವಕರ ಸಂಘದ ಅಧ್ಯಕ್ಷ ಜುಕೂರ ಶ್ರೀನಿವಾಸ, ಜಿಲ್ಲಾ ಉಪ್ಪಾರ ಮಹಿಳಾ ಮಂಡಳಿ ಅಧ್ಯಕ್ಷೆ ಪಿ. ಸುರೇಖಾ, ಕರ್ನಾಟಕ ಸರ್ಕಾರ ಲೋಕಸೇವಾ ಆಯೋಗದ ಸದಸ್ಯ ಶ್ರೀಕಾಂತರಾವ್, ಮಾಜಿ ಸಂಸದ ಬಿ.ವಿ. ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ, ಜೆಡಿಎಸ್ ಜಿಲ್ಲಾಧ್ಯಕ್ಷ ವಿರುಪಾಕ್ಷಿ, ಕಾಂಗ್ರೆಸ್ ಮುಖಂಡರಾದ ವಸಂತಕುಮಾರ, ಮಾಜಿ ಶಾಸಕ ಎ. ಪಾಪಾರೆಡ್ಡಿ, ಉಪ್ಪಾರ ಸಮಾಜದ ಮುಖಂಡ ಗಧಾರ ಬೆಟ್ಟಪ್ಪ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ