ಅಂತರ ಕಾಪಾಡದಿದ್ದರೆ ಅವಾಂತರಕ್ಕೆ ದಾರಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌. ಪ್ರಸನ್ನಕುಮಾರ್‌ ಎಚ್ಚರಿಕೆ |ಪಾಲನೆಯಾಗದ ಸಾಮಾಜಿಕ ಅಂತರ

Team Udayavani, Apr 17, 2020, 1:45 PM IST

17-April-15

ರಾಯಚೂರು: ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌. ಪ್ರಸನ್ನಕುಮಾರ ಗುರುವಾರ ಸಭೆ ನಡೆಸಿದರು

ರಾಯಚೂರು: ಬ್ಯಾಂಕ್‌ಗಳ ಮುಂದೆ ಜನ ಗುಂಪು ಗುಂಪಾಗಿ ನಿಲ್ಲುತ್ತಿದ್ದರೂ ಕ್ರಮ ಕೈಗೊಳ್ಳದಿದ್ದರೆ ಇಷ್ಟು ದಿನ ಪಟ್ಟ ಶ್ರಮವೆಲ್ಲ ವ್ಯರ್ಥವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌. ಪ್ರಸನ್ನಕುಮಾರ್‌ ಎಚ್ಚರಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಕೋವಿಡ್‌-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಕುರಿತ ಅವಲೋಕಿಸಿದ ಅವರು, ಕೋವಿಡ್ ವೈರಸ್‌ ಹರಡದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಆದರೆ, ಹಲವು ಬ್ಯಾಂಕ್‌ಗಳ ಮುಂದೆ ಗ್ರಾಹಕರು ಗುಂಪು ಗುಂಪಾಗಿ ನಿಲ್ಲುತ್ತಿದ್ದು, ಸಾಮಾಜಿಕ ಅಂತರ ಪಾಲಿಸುತ್ತಿಲ್ಲ. ಅದರಲ್ಲಿ ಒಬ್ಬರಿಗೆ ಸೋಂಕು ಇದ್ದರೂ ಎಲ್ಲೆಡೆ ಹರಡುವ ಸಾಧ್ಯತೆ ಇದೆ ಎಂದರು.

ಡಿಸಿ ಆರ್‌. ವೆಂಕಟೇಶಕುಮಾರ ಮಾತನಾಡಿ, ಬ್ಯಾಂಕ್‌ಗಳಲ್ಲಿ ಹೆಚ್ಚಿನ ಗ್ರಾಹಕರು ಸೇರುವ ಸಾಧ್ಯತೆ ಇದ್ದಾಗ ಮಾಹಿತಿ ನೀಡಿದರೆ ಪೊಲೀಸರನ್ನು ನಿಯೋಜಿಸಲಾಗುವುದು. ಅದರ ಜತೆಗೆ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಸೋಂಕು ಹೆಚ್ಚಾಗಿದ್ದು, ಅಲ್ಲಿಂದ ಕರ್ತವ್ಯಕ್ಕೆ ಬರುವ ಬ್ಯಾಂಕ್‌ ನೌಕರರಿಗೆ ನಗರದಲ್ಲಿ ಉಳಿಯುವಂತೆ ತಿಳಿಸಲು ಲೀಡ್‌ ಬ್ಯಾಂಕ್‌ನ ವ್ಯವಸ್ಥಾಪಕ ಪಿ.ಎಸ್‌. ಕುಲಕರ್ಣಿ ಅವರಿಗೆ ಸೂಚಿಸಿದರು.

ಕಾರ್ಯದರ್ಶಿ ಮಾತನಾಡಿ, ಪ್ರಧಾನಮಂತ್ರಿ ಕಿಸಾನ್‌ ಸನ್ಮಾನ್‌ ಯೋಜನೆಯಡಿ ರೈತರು ಖಾತೆಗಳಿಗೆ ಆಧಾರ್‌ ಕಾರ್ಡ್‌ ಕೂಡಲೇ ಜೋಡಿಸಬೇಕು. ಅಂಥವರ ಖಾತೆಗಳಿಗೆ ಹಣ ಜಮಾ ಆಗುತ್ತದೆ. ಕೋವಿಡ್ ಸೋಂಕಿತರ ಮಾದರಿ ಪರೀಕ್ಷೆ ನಡೆಸಿ ಶೀಘ್ರ ವರದಿ ಲಭ್ಯವಾಗುವಂತೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ. ಎಚ್‌ ಅವರಿಗೆ ಸೂಚಿಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ನೀರಿನ ಟ್ಯಾಂಕ್‌ಗಳ ಸ್ವತ್ಛಗೊಳಿಸುವಂತೆ ತಿಳಿಸಿದರು.

ನಗರಸಭೆ ಅಧಿಕಾರಿ ಶಫಿ ಮಾತನಾಡಿ, ರಾಂಪುರ ಜಲಾಶಯದಿಂದ ನೀರು ಪೂರೈಕೆ ವೇಳೆ ವಿದ್ಯುತ್‌ ಸಮಸ್ಯೆಯಾಗುತ್ತಿದೆ. ಹೆಚ್ಚುವರಿಯಾಗಿ ವಿದ್ಯುತ್‌ ಪರಿವರ್ತಕ ಅಳವಡಿಸುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ನಗರಕ್ಕೆ ಕುಡಿಯುವ ನೀರು ಪೂರೈಕೆ ಸಂಬಂಧ ಸಾಕಷ್ಟು ಸಭೆ ನಡೆಸಿದಾಗ ನೀವು ಈ ವಿಚಾರಕ್ಕೆ ಗಮನಕ್ಕೆ ತಂದಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಯೋಜನಾ ನಿರ್ದೇಶಕರಿಗೆ ಪಾಸ್‌ ವಿತರಣೆ ಹೊಣೆ ನೀಡಿದ್ದು, ಆಹಾರ ಇಲಾಖೆಯಿಂದ ಹೆಚ್ಚು ಪಾಸ್‌ ವಿತರಿಸಲಾಗಿದೆ. ಅನಗತ್ಯ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಕೂಡಲೇ ಹೆಚ್ಚುವರಿ ಪಾಸ್‌ ಪತ್ತೆ ಹಚ್ಚಿ ರದ್ದುಪಡಿಸುವಂತೆ ಡಿಸಿ ಸೂಚಿಸಿದರು. ಜಿಪಂ ಸಿಇಒ ಲಕ್ಷ್ಮೀ ಕಾಂತರೆಡ್ಡಿ, ಎಡಿಸಿ ದುರುಗೇಶ, ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಎಸಿ ಸಂತೋಷ ಕಾಮಗೌಡ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.