ನಿಷೇಧವಿದ್ದರೂ ಜಿಲ್ಲೆಗೆ ನುಸುಳಿದ ಜನ

ಬಂದವರನ್ನೆಲ್ಲ ಕ್ವಾರಂಟೈನ್‌ಗೆ ಕಳುಹಿಸಿದ ಜಿಲ್ಲಾಡಳಿತ ನಕಲಿ ಪಾಸ್‌ ತಪಾಸಣೆ ಮಾಡಿದ ಹೆಚ್ಚುವರಿ ಎಸ್‌ಪಿ

Team Udayavani, Apr 16, 2020, 12:21 PM IST

16-April-06

ರಾಯಚೂರು: ಆಂಧ್ರದಿಂದ ಲಾರಿಯಲ್ಲಿ ಬಂದ 14 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದರು.

ರಾಯಚೂರು: ಕೊರೊನಾ ಪಾಸಿಟಿವ್‌ ಪ್ರಕರಣಗಳಿಂದ ತತ್ತರಿಸಿದ ಆಂಧ್ರ, ತೆಲಂಗಾಣದ ಗಡಿಭಾಗದ ಜಿಲ್ಲೆಗಳಿಂದ ಜಿಲ್ಲೆಗೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಂಗಳವಾರ ರಾತ್ರಿ ಕೂಡ 14 ಜನ ಗುಳೆ ಹೋದವರು ಮರಳಿ ಬಂದಿದ್ದು, ಅವರನ್ನು ಸರ್ಕಾರಿ ಕ್ವಾರಂಟೈನ್‌ನಲ್ಲಿ ಉಳಿಸಲಾಗಿದೆ. ಆಂಧ್ರ, ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಗಡಿಭಾಗದ ಜಿಲ್ಲೆಗಳಲ್ಲೂ ಪಾಸಿಟಿವ್‌ ಪ್ರಕರಣಗಳಿವೆ.

ಈಚೆಗೆ ಸಭೆ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ತಿಳಿಸಿದ್ದರು. ಆದರೂ ಸಾಕಷ್ಟು ಜನ ನುಸುಳುತ್ತಿದ್ದಾರೆ. ಆಂಧ್ರದಿಂದ 14 ಜನ ಕಾರ್ಮಿಕರು ಲಾರಿಯಲ್ಲಿ ಬಂದಿದ್ದು, ನಗರದ ಪೊಲೀಸರು ತಪಾಸಣೆ ನಡೆಸಿದಾಗ ಘಟನೆ ಬಯಲಾಗಿದೆ. ಇನ್ನೂ ನಗರದ ವಿವಿಧ ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೂಡ ನೆರೆ ರಾಜ್ಯದ ಗಡಿಭಾಗದ ಗ್ರಾಮಗಳಿಂದ ನಿತ್ಯ ಓಡಾಡುತ್ತಿದ್ದಾರೆ. ಪಾಸ್‌ ತೋರಿಸುತ್ತಿದ್ದು, ಬುಧವಾರ ವಿಚಾರಣೆ ನಡೆಸಿದಾಗ ಸತ್ಯ ಗೊತ್ತಾಗಿದೆ. ಇನ್ನೂ ನಗರದಲ್ಲಿ ಲಾಕ್‌ಡೌನ್‌ ಮುಂದುವರಿದರೂ ಜನಸಂಚಾರ ಹೆಚ್ಚಾಗಿತ್ತು. ಪಾಸ್‌ಗಳಿಲ್ಲದೇ ಬಂದ ಜನ ಚೆಕ್‌ ಪೋಸ್ಟ್‌ಗಳಲ್ಲಿ, ನಾಕಾಬಂದಿಗಳಲ್ಲಿ ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂತು.

ನಕಲಿ ಪಾಸ್‌ಗಳ ಹಾವಳಿ: ನಗರದಲ್ಲಿ ಜಿಲ್ಲಾಡಳಿತ ನೀಡಿದ್ದ ಪಾಸ್‌ಗಳನ್ನೇ ಕಲರ್‌ ಝರಾಕ್ಸ್‌ ಮಾಡಿಸಿಕೊಂಡು ದುರ್ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ತುರ್ತು ಸೇವೆ, ಅಗತ್ಯ ಕೆಲಸಗಳಿಗಾಗಿ ಆದ್ಯತೆ ಮೇರೆಗೆ ಜಿಲ್ಲಾಡಳಿತ ಸಾಕಷ್ಟು ಪಾಸ್‌ ನೀಡಿದೆ. ಆದರೆ, ಅವು ದುರ್ಬಳಕೆಯಾಗಿರುವ ಅನುಮಾನದ ಮೇರೆಗೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು ನೇತೃತ್ವದ ತಂಡ ತನಿಖೆ ನಡೆಸಿದ್ದು, 19 ಪಾಸ್‌ ಗುರುತಿಸಲಾಗಿದೆ. ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಗಂಜ್‌ ವೃತ್ತ ಸೇರಿದಂತೆ ವಿವಿಧೆಡೆ ಬೆಳಗ್ಗೆಯಿಂದಲೇ ತಪಾಸಣೆ ನಡೆಸಲಾಯಿತು.

ನಗರದಲ್ಲಿ ನಕಲಿ ಪಾಸ್‌ ತೋರಿಸಿ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದು, ಶಂಕಾಸ್ಪದ 19 ಪಾಸ್‌ ವಶಕ್ಕೆ ಪಡೆದು ಸಂಬಂಧಿ ಸಿದ ಇಲಾಖೆಗಳಿಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದು ನಕಲಿ ಎಂದು ಗೊತ್ತಾದಲ್ಲಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ಹರಿಬಾಬು,
ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ

ಆಂಧ್ರ, ತೆಲಂಗಾಣಕ್ಕೆ ಗುಳೆ ಹೋಗಿರುವ ಜನ ಒಂದಲ್ಲ ಒಂದು ಮಾರ್ಗದಿಂದ ಮರಳಿ ಊರಿಗೆ ಬರುತ್ತಿದ್ದಾರೆ. ಅಂಥವರನ್ನು ಈಗಾಗಲೇ ಕ್ವಾರಂಟೈನ್‌ಗಳಲ್ಲಿ ಉಳಿಸಲಾಗಿದೆ. ಯಾರೇ ಹೊರಗಿನವರು ಬಂದಲ್ಲಿ ಗ್ರಾಮಸ್ಥರು ಮಾಹಿತಿ ನೀಡಬೇಕು. ಹೊರರಾಜ್ಯದಿಂದ ಬರುತ್ತಿದ್ದ ಬ್ಯಾಂಕ್‌ ಸಿಬ್ಬಂದಿಗೂ ಇಲ್ಲೇ ಉಳಿಯಿರಿ, ಇಲ್ಲ ಕೆಲಸಕ್ಕೆ ಗೈರಾಗುವಂತೆ ನಿರ್ದೇಶನ ನೀಡಲಾಗಿದೆ.
ಸಂತೋಷ ಕಾಮಗೌಡ,
ಸಹಾಯಕ ಆಯುಕ್ತ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.