ರಾಯಚೂರು-ಮಂತ್ರಾಲಯ ಬಸ್‌ಗಳು ಖಾಲಿ ಖಾಲಿ!

ಮತ್ತೆ ಓಡಾಟ ನಿಲ್ಲಿಸಿದ ರಾಯಚೂರು ಘಟಕ ರಾಯರ ದರ್ಶನ ಶುರುವಾಗುವವರೆಗೆ ಬಸ್‌ ಸಂಚಾರ ಇಲ್ಲ

Team Udayavani, Jun 19, 2020, 3:43 PM IST

19-June-16

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನವನ್ನು ತಾತ್ಕಾಲಿಕವಾಗಿ ಮೂಂದೂಡಿದ್ದರೂ ಸಾರಿಗೆ ಸಂಸ್ಥೆ ಬಸ್‌ಗಳನ್ನು ಓಡಿಸುವ ಮೂಲಕ ಕೈ ಸುಟ್ಟುಕೊಂಡಿದೆ. ಪ್ರಯಾಣಿಕರೇ ಇಲ್ಲದ ಕಾರಣಕ್ಕೆ ಒಂದೇ ದಿನದಲ್ಲಿ ಮತ್ತೆ ಓಡಾಟ ನಿಲ್ಲಿಸಿದೆ.

ಜೂ.15ರಿಂದ ರಾಯರ ದರ್ಶನಕ್ಕೆ ಅವಕಾಶ ನೀಡುವುದಾಗಿ ಶ್ರೀಮಠ ತಿಳಿಸಿತ್ತು. ಆದರೆ, ಸುತ್ತಲಿನ ಪ್ರದೇಶದಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದೆ. ಮಠದಲ್ಲಿ ಭಕ್ತರಿಗೆ ಸೂಕ್ತ ರೀತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕೆಲಸ ಕಾರ್ಯಗಳು ಮುಗಿದಿಲ್ಲ ಎಂಬ ಕಾರಣಕ್ಕೆ ದರ್ಶನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಈ ಸಂಗತಿ ಗೊತ್ತಿದ್ದೂ ಕೆಎಸ್‌ಆರ್‌ಟಿಸಿ ಮಂತ್ರಾಲಯಕ್ಕೆ ತೆರಳಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಆರಂಭಿಸಿತು. ಜೂ.17ರಿಂದ ಎರಡು ಬಸ್‌ ಓಡಿಸಿತು. ಆದರೆ, ರಾಯಚೂರು ಘಟಕದಿಂದ ಬೆಂಗಳೂರಿಗೆ ಓಡಾಡಿದ ಸಾರಿಗೆ ಬಸ್‌ ಗಳಲ್ಲಿ ಒಬ್ಬ ಪ್ರಯಾಣಿಕರು ಇರಲಿಲ್ಲ. ಇದರಿಂದ ಎಚ್ಚೆತ್ತ ಸಾರಿಗೆ ಅಧಿಕಾರಿಗಳು ಒಂದೇ ದಿನಕ್ಕೆ ಬಸ್‌ ಸಂಚಾರ ಸ್ಥಗಿತಗೊಳಿಸುವ ಮೂಲಕ ನಷ್ಟದಿಂದ ಹೊರ ಬಂದಿದ್ದಾರೆ. ಆದರೆ, ಬೆಂಗಳೂರಿಗೆ ನೇರವಾಗಿ ಹೋಗುತ್ತಿರುವ ಸಾಮಾನ್ಯ ಬಸ್‌ಗಳ ಪ್ರಯಾಣ ಮಾತ್ರ ಮುಂದುವರಿಸಿದ್ದು, ವಿಶೇಷ ಬಸ್‌ಗಳ ಓಡಾಟ ನಿಲ್ಲಿಸಲಾಗಿದೆ.

ಸದ್ಯಕ್ಕಿಲ್ಲ ದರ್ಶನ
ಮಂತ್ರಾಲಯ ಸುತ್ತಲಿನ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣದಲ್ಲಿಲ್ಲ. ಕರ್ನೂಲ್‌ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದೆ. ಮಂತ್ರಾಲಯ ಸುತ್ತಲಿನ ಗ್ರಾಮಗಳಲ್ಲಿ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಅಲ್ಲಿ ಓಡಾಡುವವರಲ್ಲೂ ಸೋಂಕು ಹರಡುವ ಸಾಧ್ಯತೆ ಇದೆ. ಜೂ.21ರಂದು ದರ್ಶನ ಆರಂಭವಾಗಬಹುದು ಎನ್ನಲಾಗುತ್ತಿತ್ತು. ಆದರೆ, ಮಠದ ಮೂಲಗಳ ಪ್ರಕಾರ ಸದ್ಯಕ್ಕೆ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಕಡಿಮೆ ಇದೆ. ಇನ್ನೊಂದಿಷ್ಟು ದಿನ ಮುಂದಕ್ಕೆ ಹೋಗಬಹುದು ಎನ್ನಲಾಗುತ್ತಿದೆ.

ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ಬಸ್‌ಗಳನ್ನು ಓಡಿಸಿದರೆ ಜನರಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಬಸ್‌ಗಳು ಖಾಲಿ ಖಾಲಿ ಓಡಾಡುತ್ತಿವೆ. ಹೀಗಾಗಿ ಮತ್ತೆ ತಡೆ ಹಿಡಿಯಲಾಗಿದೆ. ಬೆಂಗಳೂರಿಗೆ ಈ ಮುಂಚೆ ಓಡಿಸುತ್ತಿದ್ದ ಬಸ್‌ಗಳನ್ನೇ ಓಡಿಸಲಾಗುತ್ತಿದೆ. ದರ್ಶನ ಆರಂಭವಾಗುವವರೆಗೂ ಮಂತ್ರಾಲಯಕ್ಕೆ ಬಸ್‌ ಸಂಚಾರ ಕಲ್ಪಿಸುವುದಿಲ್ಲ.
ರಾಜೇಂದ್ರ ಬಿ. ಜಾಧವ,
ಸಾರಿಗೆ ಅಧಿಕಾರಿ ರಾಯಚೂರು ವಿಭಾಗ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.