ಕೈಗೂಡಿದ ಪ್ರತ್ಯೇಕ ವಿವಿ ಆಸೆ

ರಾಯಚೂರು-ಯಾದಗಿರಿ ಜಿಲ್ಲೆ ವಿದ್ಯಾರ್ಥಿಗಳಿಗೆ ಅನುಕೂಲ

Team Udayavani, May 6, 2020, 3:30 PM IST

Udayavani Kannada Newspaper

ರಾಯಚೂರು: ಬಹುವರ್ಷಗಳ ಬೇಡಿಕೆಯಾಗಿದ್ದ ರಾಯಚೂರು ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಫನೆಗೆ ಕೊನೆಗೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಆ ಮೂಲಕ ಈ ಭಾಗದ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗೆ ಇತಿ ಹಾಡಿದಂತಾಗಿದೆ.

ಅಂದುಕೊಂಡಂತೆ ಆಗಿದ್ದರೆ 2017ರಲ್ಲಿಯೇ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕಿತ್ತು. ಆದರೆ, ಆಗಿನ ಕಾಂಗ್ರೆಸ್‌ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕರಿಸುವ ಮೂಲಕ ನನೆಗುದಿಗೆ ಬೀಳುವಂತಾಯಿತು. ಅದಾದ ಬಳಿಕ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ಮುಂದಾದರೂ ರಾಜ್ಯಪಾಲರು ತಿರಸ್ಕರಿಸಿದ್ದು, ಅಚ್ಚರಿ ಮೂಡಿಸಿತ್ತು. ಅಷ್ಟರಲ್ಲೇ ಸರ್ಕಾರ ಬದಲಾಗಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೂ ಪ್ರತ್ಯೇಕ ವಿವಿ ಬೇಡಿಕೆ ಈಡೇರಲಿಲ್ಲ. ಆದರೆ, ಪ್ರತಿ ಶೈಕ್ಷಣಿಕ ವರ್ಷ ಬಂದಾಗಲೂ ಪ್ರತ್ಯೇಕ ವಿವಿ ಸ್ಥಾಪನೆ ಬೇಡಿಕೆ ಮುನ್ನೆಲೆಗೆ ಬರುತ್ತಿತ್ತು. ಈಗ ಅನಿರೀಕ್ಷಿತವಾಗಿ ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ತಿದ್ದುಪಡಿ ಅಧಿನಿಯಮ 2020ಕ್ಕೆ ಅಂಕಿತ ಹಾಕುವ ಮೂಲಕ ವಿವಿ ಸ್ಥಾಪನೆಗೆ ಮುಂದಾಗಿದ್ದಾರೆ.

ಸಿಬ್ಬಂದಿ-ಸೌಲಭ್ಯ ಕೊರತೆ: ಈಗಾಗಲೇ ಯರಗೇರಾ ಸ್ನಾತಕೋತ್ತರ ಕೇಂದ್ರದಲ್ಲಿ 17 ಕೋರ್ಸ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ, ಇಲ್ಲಿರುವುದು ಕೇವಲ ಮೂವರು ಕಾಯಂ ಪ್ರಾಧ್ಯಾಪಕರಿದ್ದಾರೆ. 70 ಅತಿಥಿ ಉಪನ್ಯಾಸಕರ ನೆರವಿನಿಂದಲೇ ಬೋಧಿಸಲಾಗುತ್ತಿದೆ. ಬಹುಶ ಈ ವರ್ಷದಿಂದ ವಿವಿ ಆರಂಭವಾದರೂ ಪರಿಪೂರ್ಣ ಪ್ರಮಾಣದಲ್ಲಿ ಸೇವೆ ನೀಡುವುದು ಕಷ್ಟಸಾಧ್ಯ. ಪ್ರತ್ಯೇಕ ವಿವಿ ಸ್ಥಾಪನೆ ಆದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆ ವ್ಯಾಪ್ತಿಯ 156ಕ್ಕೂ ಅಧಿಕ ಕಾಲೇಜ್‌ಗಳು ಒಳಪಡಲಿವೆ. ಈಗ ಇರುವ ಕಟ್ಟಡಗಳಲ್ಲೇ ಎಲ್ಲ ಕೋರ್ಸ್‌ ನಡೆಸಲಾಗುತ್ತಿದೆ. ಎಲ್ಲ ವಿಭಾಗಗಳಿಗೆ ಕಾಯಂ ಸಿಬ್ಬಂದಿ ನೇಮಕ, ಅಗತ್ಯ ಮೂಲ ಸೌಲಭ್ಯ ಸೇರಿದಂತೆ ಸಾಕಷ್ಟು ಸೌಲಭ್ಯ ನೀಡಬೇಕಿದ್ದು, ಅದಕ್ಕೆ ಇನ್ನೊಂದೆರಡು ವರ್ಷ ಬೇಕು ಎನ್ನಲಾಗುತ್ತಿದೆ.

ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದೆ. ಸರ್ಕಾರ ಪ್ರಸಕ್ತ ವರ್ಷದ ಶೈಕ್ಷಣಿಕ ವರ್ಷದಿಂದಲೇ ರಾಯಚೂರು ಪ್ರತ್ಯೇಕ ವಿವಿ ಆರಂಭಿಸಲಿದೆ. ಕೋವಿಡ್ ನಿಂದಾಗಿ ಶೈಕ್ಷಣಿಕ ವರ್ಷವನ್ನು ಸೆಪ್ಟೆಂಬರ್‌ನಿಂದ ಆರಂಭಿಸಲು ಯುಜಿಸಿ ಸೂಚಿಸಿದ್ದರಿಂದ ಅಗತ್ಯ ಸೌಲಭ್ಯ ಕಲ್ಪಿಸಲು ಕಾಲಾವಕಾಶ ಸಿಗಲಿದೆ.
ಡಾ| ಶಿವರಾಜ ಪಾಟೀಲ,
ನಗರ ಶಾಸಕ

ಯರಗೇರಾ ಸ್ನಾತಕೋತ್ತರ ಕೇಂದ್ರದಲ್ಲಿ 17 ಕೋರ್ಸ್‌ಗಳಿದ್ದು, ಮುಖ್ಯವಾಗಿ ಸಿಬ್ಬಂದಿ ಕೊರತೆ ಇದೆ. ಬಹುಶಃ ಈ ವರ್ಷ ವಿವಿ ಸ್ಥಾಪನೆಯಾದರೂ ಮುಂದಿನ ವರ್ಷದಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭವಾಗಬಹುದು.
ಪ್ರೊ| ಪಾರ್ವತಿ ಸಿ.ಎಸ್‌.,
ವಿಶೇಷಾಧಿಕಾರಿ ಯರಗೇರಾ ಪಿಜಿ ಸೆಂಟರ್

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.