ಕಳಪೆ ಶೂ: 7 ಶಾಲೆ ಮುಖ್ಯ ಶಿಕ್ಷಕರಿಗೆ ನೋಟಿಸ್‌

ಸಮಗ್ರ ತನಿಖೆಗೆ ರಾಯಚೂರು ಜಿಪಂ ಸಿಇಒ ಸೂಚನೆ ಪ್ರತಿ ತಾಲೂಕಿಗೆ 7ರಂತೆ 35 ಶಾಲೆಗಳಲ್ಲಿ ಪರಿಶೀಲನೆ

Team Udayavani, Jan 8, 2020, 3:10 PM IST

8-January-16

ರಾಯಚೂರು: ಜಿಲ್ಲೆಯ ಕೆಲ ಶಾಲೆಗಳಲ್ಲಿ ಕಳಪೆ ಗುಣಮಟ್ಟದ ಶೂ ವಿತರಿಸಿರುವುದು ಖಚಿತಗೊಂಡಿದ್ದು, ಅದಕ್ಕೆ ಸಂಬಂಧಿಸಿ ತನಿಖಾ ತಂಡ ವರದಿ ಸಿದ್ಧಪಡಿಸಿದೆ. ಅದರ ಭಾಗವಾಗಿ ಜಿಲ್ಲೆಯ ಏಳು ಶಾಲೆಗಳ ಮುಖ್ಯಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ.

ಗುಣಮಟ್ಟದ ಬೂಟು ಖರೀದಿಸಿದ್ದಾಗಿ ಮಕ್ಕಳಿಗೆ ಕಳಪೆ ಮಟ್ಟದ ಶೂ ವಿತರಿಸಲಾಗಿತ್ತು. ಇದು ಶಿಕ್ಷಣ ಸಚಿವರ ಗಮನಕ್ಕೆ ಬಂದ ಕಾರಣ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ಅದರನ್ವಯ ಜಿಪಂ ಸಿಇಒ ಸೂಚನೆ ಮೇರೆಗೆ ತನಿಖೆ ಕೈಗೊಂಡ ಅಧಿಕಾರಿಗಳ ತಂಡ ಜಿಲ್ಲೆಯ 35 ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಪ್ರತಿ ತಾಲೂಕಿನಲ್ಲಿ 7 ಶಾಲೆಗಳಂತೆ ಆಯ್ದ ಶಾಲೆಗಳಿಗೆ ತೆರಳಿ ಪರಿಶೀಲಿಸಿದಾಗ ಏಳು ಶಾಲೆಗಳಲ್ಲಿ ಕಳಪೆ ಗುಣಮಟ್ಟದ ಶೂ ಸಿಕ್ಕಿವೆ. ಅದರಲ್ಲಿ ನಾಲ್ಕು ಪ್ರಾಥಮಿಕ ಹಾಗೂ ಮೂರು ಪ್ರೌಢ ಶಾಲೆಗಳಿವೆ. ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರ ನೇತೃತ್ವದ ತಂಡದ ಜತೆಗೆ ಆಯಾ ತಾಲೂಕಿನ ಇಒಗಳ ನೇತೃತ್ವದಲ್ಲಿ ಪರಿಶೀಲನೆ ಕಾರ್ಯ ಕೈಗೊಂಡಿದೆ.

1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಬೂಟು ವಿತರಿಸಲಾಗಿತ್ತು. 1-5ನೇ ತರಗತಿಯ ಪ್ರತಿ ಮಗುವಿಗೆ 265 ರೂ., 6-8ನೇ ತರಗತಿ ಮಗುವಿಗೆ 295 ರೂ. ಹಾಗೂ 9-10ನೇ ತರಗತಿ ಮಕ್ಕಳಿಗೆ 323 ರೂ. ಹಣವನ್ನು ಮುಖ್ಯಶಿಕ್ಷಕರು ಹಾಗೂ ಎಸ್‌ಡಿಎಂಸಿ ಜಂಟಿ ಖಾತೆಗೆ ಬಿಡುಗಡೆ ಮಾಡಲಾಗಿತ್ತು. ಈ ಹಣದಿಂದ ಗುಣಮಟ್ಟದ ಶೂ ಖರೀದಿಸಿ ಮಕ್ಕಳಿಗೆ ವಿತರಿಸಬೇಕಿತ್ತು.

ಲಿಬರ್ಟಿ ಹೆಸರಲ್ಲಿ ವಂಚನೆ: ಲಿಬರ್ಟಿ ಕಂಪನಿ ಹೆಸರಿನ ನಕಲಿ ಬೂಟುಗಳನ್ನು ವಿತರಿಸುವ ಮೂಲಕ ವಂಚನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಯಾವ ಯಾವ ಶಾಲೆಗಳಲ್ಲಿ ಆ ಕಂಪನಿ ಹೆಸರಿನಲ್ಲಿ ಬೂಟು ಖರೀದಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚುವಂತೆ ಜಿಪಂ ಸಿಇಒ ಸೂಚನೆ ನೀಡಿದ್ದಾರೆ. ಲಿಬರ್ಟಿ ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಕೆಲವರು ಅದೇ ಹೆಸರಿನಡಿ ನಕಲಿ ಬೂಟುಗಳನ್ನು ವಿತರಿಸಿದ್ದಾರೆ. ತೀರ ಕಡಿಮೆ ದರಕ್ಕೆ ಕಳಪೆ ಗುಣಮಟ್ಟದ ಬೂಟುಗಳನ್ನು ವಿತರಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸಿಇಒ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.

ಎಸ್‌ಡಿಎಂಸಿಗೂ ಅಕ್ರಮ ಹೊಣೆ: ಈಗ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಕಾರಣ ಕೇಳಿ ಏಳು ಶಾಲೆಗಳ ಮುಖ್ಯಶಿಕ್ಷಕರಿಗೆ ನೋಟಿಸ್‌ ನೀಡಲಾಗಿದೆ. ಆದರೆ, ಈಗ ಅಭಿವೃದ್ಧಿ ಸೇರಿದಂತೆ ಪ್ರತಿ ವಿಚಾರದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ಪಾತ್ರವೂ ಅಷ್ಟೇ ಮುಖ್ಯವಾಗಿದೆ. ಹೀಗಾಗಿ ಈ ಅಕ್ರಮದಲ್ಲಿ ಎಸ್‌ ಡಿಎಂಸಿಗಳನ್ನು ಭಾಗಿದಾರರನ್ನಾಗಿಸುವ ಚಿಂತನೆ ನಡೆಸಲಾಗುತ್ತಿದೆ. ಮುಂದೆ ಇಂಥ ಅಕ್ರಮಗಳಿಗೆ ಆಸ್ಪದ ನೀಡಬಾರದು ಎಂದರೆ ಎಸ್‌ಡಿಎಂಸಿಗಳಿಗೂ ಎಚ್ಚರಿಕೆ ನೀಡುವ ಅಗತ್ಯವಿದೆ ಎಂಬ ಅಭಿಪ್ರಾಯ ಅಧಿಕಾರಿಗಳದ್ದಾಗಿದೆ.

ಪ್ರಭಾವಿಗಳ ಹಸ್ತಕ್ಷೇಪ!:
ಶೂ ಖರೀದಿಸುವ ಅ ಧಿಕಾರ ಮುಖ್ಯಶಿಕ್ಷಕರು, ಎಸ್‌ಡಿಎಂಸಿಗೆ ಇದೆಯಾದರೂ ಅದರಲ್ಲಿ ಪ್ರಭಾವಿಗಳ ಕೈಚಳಕ ಹೆಚ್ಚಾಗಿದೆ. ಪ್ರಭಾವಿಗಳ ಮೌಖೀಕ ಆದೇಶಕ್ಕೆ ಮಣಿದು ಮುಖ್ಯಶಿಕ್ಷಕರು ಗುಣಮಟ್ಟದಲ್ಲಿ ರಾಜಿಯಾಗುವಂತಾಗಿದೆ. ಕೆಲವೆಡೆ ಮುಖ್ಯ ಶಿಕ್ಷಕರೇ ಇಂಥ ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪಗಳಿವೆ. ಪ್ರಭಾವಿಗಳು ತಮಗೆ ಬೇಕಾದ ಗುತ್ತಿಗೆದಾರರು, ಸಂಸ್ಥೆಗಳಿಂದಲೇ ಶೂ ಖರೀದಿಸಬೇಕು ಎಂಬ ಷರತ್ತು ಒಡ್ಡುತ್ತಿರುವುದು ಶಾಲೆಗಳ ಮುಖ್ಯಶಿಕ್ಷಕರಿಗೆ ಉಭಯ ಸಂಕಟ ತಂದೊಡ್ಡಿದೆ.

ಶಾಲಾ ಮಕ್ಕಳಿಗೆ ವಿತರಿಸುವ ಬೂಟುಗಳಲ್ಲಿ ಕಳಪೆ ಮಟ್ಟದ್ದು ಇರುವ ಬಗ್ಗೆ ಈಗ ಒಂದು ಹಂತದ ತನಿಖೆ ಕೈಗೊಳ್ಳಲಾಗಿದೆ. ಏಳು ಶಾಲೆಗಳಲ್ಲಿ ಅಕ್ರಮ ನಡೆದಿರುವುದು ಖಚಿತಗೊಂಡಿದ್ದು, ಆ ಶಾಲೆ ಮುಖ್ಯಶಿಕ್ಷಕರಿಗೆ ನೋಟಿಸ್‌ ನೀಡಲಾಗಿದೆ. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದು ಮೇಲಧಿಕಾರಿಗಳಿಗೆ ಬಿಟ್ಟ ವಿಚಾರ. ಇನ್ನು ಲಿಬರ್ಟಿ ಕಂಪನಿ ಶೂ ಎಲ್ಲೆಲ್ಲಿ ಖರೀದಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಸಿಇಒ ತಿಳಿಸಿದ್ದಾರೆ. ಶೀಘ್ರದಲ್ಲೇ ತನಿಖೆ ನಡೆಸಲಾಗುವುದು.
ಬಿ.ಎಚ್‌.ಗೋನಾಳ,
ಡಿಡಿಪಿಐ ರಾಯಚೂರು

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.